ಬ್ರೇಕಿಂಗ್ ನ್ಯೂಸ್
02-07-21 08:57 pm Mangaluru Correspondent ಕರಾವಳಿ
ಮಂಗಳೂರು, ಜುಲೈ 2: ಬೀದಿ ನಾಯಿಯನ್ನು ಗುಂಡು ಹಾರಿಸಿ ಕೊಲೆಗೈದಿರುವ ಘಟನೆ ಮಂಗಳೂರು ನಗರದಲ್ಲಿ ಬೆಳಕಿಗೆ ಬಂದಿದ್ದು, ಸಾರ್ವಜನಿಕ ವಲಯದಲ್ಲಿ ಆಕ್ರೋಶ ಕೇಳಿಬಂದಿದೆ.
ಗುರುವಾರ ಸಂಜೆ ನಗರದ ಶಿವಭಾಗ್ ಆಭರಣ ಜುವೆಲ್ಲರಿ ಬಳಿಯಲ್ಲಿ ನಾಯಿಯ ಶವ ಕಂಡುಬಂದಿತ್ತು. ಇದನ್ನು ಯಾರೋ ಸ್ಥಳೀಯರು ಗಮನಿಸಿ ಅನಿಮಲ್ ಕೇರ್ ಟ್ರಸ್ಟ್ ನವರಿಗೆ ಮಾಹಿತಿ ನೀಡಿದ್ದಾರೆ. ಮೇಲ್ನೋಟಕ್ಕೆ ಗುಂಡು ಹೊಡೆದು ಸಾಯಿಸಿದ ರೀತಿ ಕಂಡುಬಂದಿದ್ದರಿಂದ ಅನಿಮಲ್ ಕೇರ್ ಟ್ರಸ್ಟಿನ ಸುಮಾ ನಾಯಕ್ ಈ ಬಗ್ಗೆ ಕದ್ರಿ ಠಾಣೆಗೆ ದೂರು ನೀಡಿದ್ದಾರೆ.
ದೂರಿನ ಹಿನ್ನೆಲೆಯಲ್ಲಿ ಪೊಲೀಸರು ನಾಯಿಯನ್ನು ಪೋಸ್ಟ್ ಮಾರ್ಟಂ ನಡೆಸಲು ಸೂಚಿಸಿದ್ದಾರೆ. ಇದರಂತೆ, ಇಂದು ಪಶು ವೈದ್ಯರು ನಾಯಿಯನ್ನು ಪೋಸ್ಟ್ ಮಾರ್ಟಂ ನಡೆಸಿದ್ದು, ದೇಹದ ಒಳಹೊಕ್ಕಿದ್ದ ಗುಂಡನ್ನು ಹೊರತೆಗೆದಿದ್ದಾರೆ. ಈ ಬಗ್ಗೆ ಮಂಗಳೂರು ನಗರ ಡಿಸಿಪಿ ಹರಿರಾಮ್ ಶಂಕರ್ ಬಳಿ ಕೇಳಿದರೆ, ವೈದ್ಯರ ಪರಿಶೀಲನೆಯಲ್ಲಿ ಏರ್ ಗನ್ ಬಳಸಿ ನಾಯಿಯನ್ನು ಕೊಂದಿರುವ ರೀತಿ ಕಂಡುಬಂದಿದೆ. ಬುಲೆಟ್ ಪೀಸ್ ದೇಹದಲ್ಲಿ ಒಳಗಿದ್ದುದನ್ನು ತೆಗೆದು ವಶಕ್ಕೆ ಪಡೆಯಲಾಗಿದೆ. ಕದ್ರಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸ್ಥಳದಲ್ಲಿ ಸಿಸಿಟಿವಿ ಇದೆಯೇ ಎನ್ನುವ ಬಗ್ಗೆ ಪರಿಶೀಲನೆ ನಡೆಸಿ ತನಿಖೆ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಸಾರ್ವಜನಿಕ ಜಾಗದಲ್ಲಿ ಬೀದಿ ನಾಯಿಯನ್ನು ಈ ರೀತಿ ಅಮಾನುಷವಾಗಿ ಗುಂಡು ಹೊಡೆದು ಸಾಯಿಸಿರುವುದು ಮಂಗಳೂರಿನಲ್ಲಿ ಹೊಸ ಬೆಳವಣಿಗೆ. ಇತ್ತೀಚೆಗೆ ನಾಯಿಯನ್ನು ಬೈಕಿಗೆ ಕಟ್ಟಿ ಎಳೆದುಕೊಂಡು ಹೋಗಿರುವುದು, ಆನಂತರ ಮತ್ತೊಂದು ಪ್ರಕರಣದಲ್ಲಿ ಸತ್ತ ನಾಯಿಯನ್ನು ಎಳ್ಕೊಂಡು ಹೋಗಿದ್ದ ಬಗ್ಗೆ ಪ್ರಕರಣ ದಾಖಲಾಗಿತ್ತು. ಎರಡೂ ಪ್ರಕರಣಗಳಲ್ಲಿ ಉತ್ತರ ಕರ್ನಾಟಕ ಮೂಲದ ನಾಲ್ವರನ್ನು ಬಂಧಿಸಲಾಗಿತ್ತು.
ಇದೀಗ ನಾಯಿಗೆ ಗುಂಡು ಹಾರಿಸಿ ಕೊಲೆ ಮಾಡಿರುವುದು ಕಂಡುಬಂದಿದ್ದು, ಮಾನವೀಯತೆ ಮರೆತು ವರ್ತಿಸಿರುವುದರ ಸಂಕೇತ ಎನ್ನುವ ಆಕ್ರೋಶ ಕೇಳಿಬಂದಿದೆ.
In another inhuman act reported against animals, a stray dog was found shot dead in Mangalore at Shivbagh. The incident took place on Friday July. An air gun pellet was found in the body of the dog during post-mortem.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm