ಬ್ರೇಕಿಂಗ್ ನ್ಯೂಸ್
05-07-21 04:00 pm Mangalore Correspondent ಕರಾವಳಿ
ಉಳ್ಳಾಲ, ಜು.5: ಬೀಚ್ ಗಳಲ್ಲಿ ಪ್ಲಾಸ್ಟಿಕ್ ಎಸೆಯದೆ ಅದನ್ನು ಸಂಗ್ರಹಿಸಿ ಮರುಬಳಕೆಯ ತಾಂತ್ರಿಕತೆಗೆ ಕಳುಹಿಸಿಕೊಡುವ ನಿಟ್ಟಿನಲ್ಲಿ ಪ್ಲಾಸ್ಟಿಕ್ ಫಾರ್ ಚೇಂಜ್ ಇಂಡಿಯಾ ಫೌಂಡೇಷನ್ ನಿಂದ ಜಿಲ್ಲೆಯ ಪ್ರಥಮ ಪ್ಲಾಸ್ಟಿಕ್ ಸಂಗ್ರಹ ಕೇಂದ್ರವನ್ನು ಉಳ್ಳಾಲ ಬೀಚಲ್ಲಿ ಸ್ಥಾಪಿಸಲಾಗಿದೆ.
ಉಳ್ಳಾಲ ನಗರಸಭಾ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್ ಅವರು ನೂತನ ಪ್ಲಾಸ್ಟಿಕ್ ಸಂಗ್ರಹಣಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು. ಪ್ಲಾಸ್ಟಿಕ್ ಇವತ್ತು ಪೃಕೃತಿಗೆ ಮಾರಕವಾಗಿ ಪರಿಣಮಿಸಿದೆ. ಪ್ಲಾಸ್ಟಿಕನ್ನು ಎಲ್ಲೆಂದರಲ್ಲಿ ಎಸೆದು ಪರಿಸರವನ್ನು ಕೆಡಿಸುವ ಕಾರ್ಯ ಸಲ್ಲದು. ಪ್ಲಾಸ್ಟಿಕನ್ನು ಸಂಗ್ರಹಿಸಿ ಮರುಬಳಕೆ ಮಾಡುವ ಸಂಗ್ರಹ ಕೇಂದ್ರವನ್ನು ಜಿಲ್ಲೆಯಲ್ಲಿ ಮೊದಲಾಗಿ ಉಳ್ಳಾಲ ಬೀಚಲ್ಲಿ ಸ್ಥಾಪಿಸಿದ್ದು ಸ್ವಾಗತಾರ್ಹ ಎಂದರು.
ಪ್ಲಾಸ್ಟಿಕ್ ಫಾರ್ ಚೇಂಜ್ ಇಂಡಿಯಾ ಫೌಂಡೇಶನ್ ನಿರ್ದೇಶಕರಾದ ಚಂದನ್ ಎಂ.ಸಿ. ಮಾತನಾಡಿ ಸಮುದ್ರಗಳಲ್ಲಿ ಪ್ರತಿ ವರ್ಷ ಸುಮಾರು 8 ಮಿಲಿಯನ್ ಟನ್ ಪ್ಲಾಸ್ಟಿಕ್ ದಡಗಳಲ್ಲಿ ಸೇರುವುದರಿಂದ ತೀರದ ಪರಿಸರ ವ್ಯವಸ್ಥೆಗಳಿಗೆ ಗಂಭೀರ ಪರಿಣಾಮ ಬೀರುತ್ತವೆ. ಆದುದರಿಂದ ನಾವು ಬಳಸುವ ಪ್ಲಾಸ್ಟಿಕನ್ನು ಜವಾಬ್ದಾರಿಯುತವಾಗಿ ವಿಲೇವಾರಿ ಮಾಡುವುದು ಪ್ರಸ್ತುತ ಸಮಯದಲ್ಲಿ ಅತೀ ಅವಶ್ಯಕವಾಗಿದೆ. ಸಮುದ್ರ ತೀರದಲ್ಲಿ ಬರುವ ಜನರು ಬಳಸಿದ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸಂಗ್ರಹಿಸಿ ಮರುಬಳಕೆ ಮಾಡುವ ತಾಂತ್ರಿಕ ಘಟಕಕ್ಕೆ ಕಳುಹಿಸುವ ಪ್ರಕ್ರಿಯೆ ನಡೆಸಲಾಗುತ್ತದೆ. ಅಲ್ಲದೆ ಪ್ರದೇಶದ ಹೆಚ್ಚಿನ ಪ್ರಮಾಣದ ಪ್ಲಾಸ್ಟಿಕ್ ತ್ಯಾಜ್ಯವನ್ನು ತರುವ ಅನೌಪಚಾರಿಕ ತ್ಯಾಜ್ಯ ಸಂಗ್ರಾಹಕರಿಗೆ ವಿಶೇಷ ನಿಗದಿತ ಪ್ರೋತ್ಸಾಹವನ್ನು ನೀಡಲಾಗುವುದೆಂದರು. ಪ್ಲಾಸ್ಟಿಕ್ ಫಾರ್ ಚೇಂಜ್ ಇಂಡಿಯಾ ಫೌಂಡೇಶನ್ ಉಳ್ಳಾಲ ನಗರಸಭೆಯ ಸಹಕಾರದೊಂದಿಗೆ ಉಳ್ಳಾಲ ಬೀಚಲ್ಲಿ ಪ್ಲಾಸ್ಟಿಕ್ ಸಂಗ್ರಹ ಕೇಂದ್ರವನ್ನ ಸ್ಥಾಪಿಸಿದ್ದು ಸಮುದ್ರ ತೀರಕ್ಕೆ ಬರುವ ಜನರು ಇದರ ಮಹತ್ವವನ್ನು ಅರಿತು ಸದುಪಯೋಗ ಪಡೆಯಬೇಕೆಂದರು.
ಉಳ್ಳಾಲ ನಗರಸಭಾ ಆಯುಕ್ತರಾದ ರಾಯಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷೆ ಝರಿನಾ ಭಾನು,ನಗರ ಸಭಾ ಸದಸ್ಯರಾದ ಸಪ್ನ ಹರೀಶ್ ,ವೀಣಾ ಡಿಸೋಜ, ಶಶಿಕಲಾ, ಜಬ್ಬಾರ್, ಖಲೀಲ್, ಯು.ಇಸ್ಮಾಯಿಲ್, ರವೂಫ್, ಮಮತಾ, ಮುಖಂಡಾರಾದ ಮನ್ಸೂರ್, ನಝೀರ್, ವಿಜಯ ಕುಂದರ್, ನಿವೃತ್ತ ಶಿಕ್ಷಕರಾದ ವಾಸುದೇವರಾವ್ ,ಪ್ಲಾಸ್ಟಿಕ್ ಫಾರ್ ಚೇಂಜ್ ಇಂಡಿಯಾ ಫೌಂಡೇಷನ್ ನ ಸಂಯೋಜಕರಾದ ಚರಿತ್ರ, ಜಯಂತಿ ಮೊದಲಾದವರು ಉಪಸ್ಥಿತರಿದ್ದರು.
The first plastic collection center for recycling opens in Mangalore at Ullal Beach. Ullal town municipality corporation president Chandrakanath inagurated the center.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm