ಬ್ರೇಕಿಂಗ್ ನ್ಯೂಸ್
05-07-21 04:20 pm Mangalore Correspondent ಕರಾವಳಿ
ಉಳ್ಳಾಲ, ಜು.5: ಕರ್ನಾಟಕ ರಾಜ್ಯ ಕಾರ್ಮಿಕರ ಕಲ್ಯಾಣ ಇಲಾಖೆಯಿಂದ ಕೋವಿಡ್ ಸಂಕಷ್ಟ ಕಾಲದಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಕೊಡಲಾಗುವ ಆಹಾರ ಕಿಟ್ ವಿತರಣಾ ಪಟ್ಟಿಯಲ್ಲಿ ಅನೇಕ ನೊಂದಾಯಿತ ಕಾರ್ಮಿಕರ ಹೆಸರನ್ನು ಕೈಬಿಡಲಾಗಿದೆ. ಈ ಸಮಸ್ಯೆಯನ್ನು ಶೀಘ್ರ ಬಗೆಹರಿಸಿ ಎಲ್ಲರಿಗೂ ಕಿಟ್ ದೊರಕುವಂತೆ ಮಾಡುತ್ತೇನೆ ಎಂದು ಶಾಸಕ ಯು.ಟಿ ಖಾದರ್ ಹೇಳಿದ್ದಾರೆ.



ತಲಪಾಡಿ ಗ್ರಾಮ ಪಂಚಾಯತ್ ನಲ್ಲಿ ಪಂಚಾಯತ್ ವ್ಯಾಪ್ತಿಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಇಂದು ಅವರು ಆಹಾರ ಕಿಟ್ ವಿತರಿಸಿದರು. ಕಾರ್ಮಿಕ ಇಲಾಖೆಗೆ ಹೆಸರು ನೋಂದಾಯಿಸಿದರೂ ಅನೇಕರ ಹೆಸರುಗಳನ್ನು ಫಲಾನುಭವಿಗಳ ಪಟ್ಟಿಯಲ್ಲಿ ಕೈಬಿಡಲಾಗಿತ್ತು. ನೋಂದಾಯಿತ ಅನೇಕ ಕಾರ್ಮಿಕರು ಆಹಾರ ಕಿಟ್ ಸಿಗುತ್ತದೆಂದು ಪಂಚಾಯತ್ ಕಚೇರಿಗೆ ಬಂದಿದ್ದರು. ಪಂಚಾಯತ್ ಪಿಡಿಓ ಅವರಲ್ಲಿ ತಮ್ಮ ಹೆಸರೇಕೆ ಕೈ ಬಿಡಲಾಗಿದೆ ಎಂದು ಕೇಳಿದರೆ ಅವರಲ್ಲೂ ಸಮರ್ಪಕ ಉತ್ತರ ದೊರೆತಿಲ್ಲ. ಹಾಗಾಗಿ ಕಾರ್ಮಿಕರು ನೇರ ಶಾಸಕರಲ್ಲೇ ಈ ಬಗ್ಗೆ ಪ್ರಶ್ನಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಯು.ಟಿ. ಖಾದರ್ ಅವರು ಫಲಾನುಭವಿಗಳ ಪಟ್ಟಿಯಲ್ಲಿ ಕೈಬಿಡಲಾದ ಕಾರ್ಮಿಕರ ಪಟ್ಟಿಯನ್ನ ನೀಡಿ, ಇಲಾಖೆಯಲ್ಲಿ ಆಗಿರುವ ಲೋಪಗಳನ್ನು ಸಂಬಂಧಪಟ್ಟ ಅಧಿಕಾರಿಗಳಲ್ಲಿ ಪರಿಶೀಲಿಸಿ ಆದಷ್ಟು ಶೀಘ್ರ ಎಲ್ಲ ನೊಂದಾಯಿತ ಕಾರ್ಮಿಕರಿಗೆ ಆಹಾರ ಕಿಟ್ ಸಿಗುವಂತೆ ಮಾಡುತ್ತೇನೆಂದರು.




ನೋಂದಣಿ ಮಾಡದ ಕಟ್ಟಡ ಕಾರ್ಮಿಕರು ಅತೀ ಶೀಘ್ರ ನೋಂದಣಿ ಮಾಡಿ ಇಲಾಖೆಯಿಂದ ತಮ್ಮ ಕುಟುಂಬಕ್ಕೆ ಸಿಗುವ ವಿವಿಧ ಸೌಲಭ್ಯಗಳನ್ನ ಬಳಸಿಕೊಳ್ಳಿ. ಕಾರ್ಮಿಕ ಇಲಾಖೆಗೆ ಹೆಸರು ನೋಂದಾಯಿಸಲು ಕಾರ್ಮಿಕರಿಗೆ ಅನುಕೂಲವಾಗುವಂತೆ ತಲಪಾಡಿಯಲ್ಲಿ ಪ್ರತ್ಯೇಕ ಶಿಬಿರವನ್ನೂ ಆಯೋಜಿಸುವುದಾಗಿ ಹೇಳಿದರು.
ತಲಪಾಡಿ ಗ್ರಾಪಂ ಅಧ್ಯಕ್ಷೆ ಪುಷ್ಪಾವತಿ ಶೆಟ್ಟಿ, ಉಪಾಧ್ಯಕ್ಷ ಫಯಾಝ್ ಪಿಲಿಕೂರ್ , ತಾಪಂ ಮಾಜಿ ಅಧ್ಯಕ್ಷ ಮಹಮ್ಮದ್ ಮೋನು, ತಲಪಾಡಿ ಗ್ರಾ.ಪಂ ಮಾಜಿ ಅಧ್ಯಕ್ಷ ಖಾದರ್, ಮುಖಂಡರಾದ ಸತೀಶ್ ಉಳ್ಳಾಲ್, ಪಿಡಿಓ ಕೇಶವ ಪೂಜಾರಿ, ತಾಪಂ ಮಾಜಿ ಸದಸ್ಯರಾದ ಸಿದ್ದೀಕ್ ಕೊಳಂಗೆರೆ, ಸುರೇಖಾ ಚಂದ್ರಹಾಸ್, ಗ್ರಾ.ಪಂ ಸದಸ್ಯರು ಉಪಸ್ಥಿತರಿದ್ದರು.
Ullal Labourers registered for Food Kit supply go empty-handed workers slam MLA UT Khader.
28-08-26 12:13 pm
HK News Staffer
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am