ಬ್ರೇಕಿಂಗ್ ನ್ಯೂಸ್
09-07-21 04:36 pm Mangalore Correspondent ಕರಾವಳಿ
ಮಂಗಳೂರು, ಜುಲೈ 9: ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಬಂದರೂ ಅದರ ಅನುಷ್ಠಾನ ಸರಿಯಾಗಿ ಆಗುತ್ತಿಲ್ಲ. ಅಕ್ರಮ ಗೋಹತ್ಯೆ, ಅಕ್ರಮ ಗೋಸಾಗಣೆ ನಿರಂತರವಾಗಿ ನಡೆಯುತ್ತಿದೆ. ಈಗ ಬಕ್ರೀದ್ ಹಬ್ಬ ಸಮೀಪಿಸುತ್ತಿದ್ದು, ಆ ಸಂದರ್ಭದಲ್ಲಿ ಮತ್ತೆ ಗೋವುಗಳ ವಧೆಯಾಗಲಿದೆ. ಅಂತಹ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಯಲ್ಲಿ ತೊಂದರೆಗಳಾದರೆ ನಾವು ಹೊಣೆಯಾಗಲ್ಲ ಎಂದು ವಿಶ್ ಹಿಂದು ಪರಿಷತ್ ವಿಭಾಗ ಮುಖ್ಯಸ್ಥ ಪ್ರೊ.ಎಂ.ಬಿ. ಪುರಾಣಿಕ್ ಹೇಳಿದ್ದಾರೆ.
ಕದ್ರಿಯ ವಿಶ್ವ ಹಿಂದು ಪರಿಷತ್ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿ ನಡೆಸಿದ ಪುರಾಣಿಕ್, ರಾಜ್ಯದಲ್ಲಿ ಜಾರಿಗೆ ಬಂದಿರುವ ಗೋಹತ್ಯೆ ಕಾನೂನು ಪ್ರಬಲವಾಗಿದೆ. ಅಕ್ರಮವಾಗಿ ಗೋವನ್ನು ಹತ್ಯೆ ಮಾಡುವುದು ಕಂಡುಬಂದರೆ 3ರಿಂದ ಏಳು ವರ್ಷದ ವರೆಗೆ ಶಿಕ್ಷಿಸಲು ಅವಕಾಶವಿದೆ. 5 ಲಕ್ಷ ರೂ. ವರೆಗೆ ದಂಡವನ್ನೂ ವಿಧಿಸಬಹುದು. ಯಾವುದೇ ಕಡೆ ಗೋವನ್ನು ಹತ್ಯೆ ಮಾಡಿದ್ದು ಕಂಡುಬಂದರೆ ಆ ಕಟ್ಟಡ, ಮನೆಯನ್ನು ಮುಟ್ಟುಗೋಲು ಹಾಕುವುದಕ್ಕೂ ಅವಕಾಶಗಳಿವೆ. ಆದರೆ, ಈ ರೀತಿಯ ಕಾನೂನು ಬಂದಿದ್ದರೂ, ಅದರ ಅನುಷ್ಠಾನ ಆಗುತ್ತಿಲ್ಲ ಎಂದು ಹೇಳಿದರು.
ಗೋಹತ್ಯೆ ವಿಚಾರ ಹಿಂದುಗಳ ಭಾವನೆಗೆ ಘಾಸಿಗೊಳಿಸುವಂಥದ್ದು. ಹಾಗಾಗಿ, ಇದರ ಕಾರಣಕ್ಕೆ ಈ ಹಿಂದೆ ಕೋಮು ಗಲಭೆ ಆಗಿದ್ದೂ ಇದೆ. ಆದರೆ, ಅಂತಹುದಕ್ಕೆ ಜಿಲ್ಲಾಡಳಿತ ಅವಕಾಶ ಕೊಡಬಾರದು. ಕಾನೂನು ಏನಿದೆಯೋ ಅದನ್ನು ಸೂಕ್ತವಾಗಿ ಪಾಲನೆ ಮಾಡಿದಲ್ಲಿ ಅಕ್ರಮ ಗೋಹತ್ಯೆ, ಗೋಸಾಗಣೆಗೆ ಕಡಿವಾಣ ಬೀಳುತ್ತದೆ. ಪೊಲೀಸರು ಈ ಬಗ್ಗೆ ಯಾವ ರೀತಿಯ ಕ್ರಮ ಕೈಗೊಳ್ಳಬೇಕೋ ಅದನ್ನು ಮಾಡಬೇಕು ಎಂದು ಪುರಾಣಿಕ್ ಆಗ್ರಹಿಸಿದರು.
ಅಧಿಕೃತ ಕಸಾಯಿಖಾನೆಗಳಲ್ಲಿ ಸಿಸಿಟಿವಿ ಅಳವಡಿಸಬೇಕು ಎಂದು ಮಂಗಳೂರು ಮಹಾನಗರ ಪಾಲಿಕೆಯಲ್ಲಿ ನಿರ್ಣಯ ಆಗಿತ್ತು. ಆದರೆ, ಇನ್ನೂ ಕೂಡ ಕುದ್ರೋಳಿ ಕಸಾಯಿಖಾನೆಯಲ್ಲಿ ಸಿಸಿಟಿವಿ ಹಾಕಿಲ್ಲ ಎಂದು ಗೋರಕ್ಷಾ ದಳದ ದಿನೇಶ್ ಪೈ ಹೇಳಿದರು. ಇದಕ್ಕೆ ಈಗ ಬಿಜೆಪಿಯದ್ದೇ ಆಡಳಿತ ಇದೆಯಲ್ಲ. ಯಾಕೆ ಹಾಕಿಸಿಲ್ಲ ಎಂದು ಪ್ರಶ್ನೆ ತೂರಿಬಂತು. ನಾವು ಆಗ್ರಹ ಮಾಡಿದ್ದೇವೆ. ಆಡಳಿತದವರು ತಮ್ಮ ಕಾರ್ಯ ಮಾಡಬೇಕು ಎಂದು ದಿನೇಶ್ ಪೈ ಚುಟುಕಾಗಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಗೋಪಾಲ ಕುತ್ತಾರ್, ಪುನೀತ್ ಅತ್ತಾವರ, ಪ್ರದೀಪ್ ಪಂಪ್ವೆಲ್, ಗುರುಪ್ರಸಾದ್ ಉಳ್ಳಾಲ ಉಪಸ್ಥಿತರಿದ್ದರು.
Vishwa Hindu Parishad and Bajrang Dal called for strict enforcement of the anti-cow slaughter law. "If anyone is caught slaughtering cows, illegally storing meat, or illegally transporting cattle then the public needs to inform Bajrang Dal representatives or call on the animal helpline number 8277100200 (24/7). They send across videos or photos as proof," he added.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am