ಬ್ರೇಕಿಂಗ್ ನ್ಯೂಸ್
11-07-21 02:24 pm Mangaluru Correspondent ಕರಾವಳಿ
ಉಳ್ಳಾಲ, ಜು.11: ಧಾರಾಕಾರ ಮಳೆಯ ನಡುವೆ ಹೆದ್ದಾರಿಯಲ್ಲಿ ಬ್ರೇಕ್ ಹೊಡೆದು ಹಠಾತ್ತನೆ ನಿಂತ ಸಿಟಿ ಬಸ್ಸಿನ ಹಿಂಬದಿಗೆ ಬೈಕ್ ಡಿಕ್ಕಿಯಾಗಿದ್ದು ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ರಾ.ಹೆ. 66 ರ ಉಚ್ಚಿಲದಲ್ಲಿ ನಡೆದಿದೆ.



ಬೈಕ್ ಸವಾರ ಆಂಧ್ರ ಪ್ರದೇಶದ ಮೂಲದ ಶಶಿಧರ್ ರೆಡ್ಡಿ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಂಧ್ರ ಮೂಲದ ಶಶಿಧರ್ ರೆಡ್ಡಿ (27) ಮತ್ತು ಶಾನು ಭಾಝ್ (31) ಎಂಬವರು ತಲಪಾಡಿ ಟೋಲ್ ಪ್ಲಾಝಾದ ಸಿಬ್ಬಂದಿಗಳಾಗಿದ್ದು ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಉಚ್ಚಿಲದಲ್ಲಿ ಖಾಸಗಿ ಸಿಟಿ ಬಸ್ಸೊಂದು ಹಠಾತ್ತಾಗಿ ಬ್ರೇಕ್ ಹೊಡೆದ ಕಾರಣ ಹಿಂದಿನಿಂದ ಧಾವಿಸುತ್ತಿದ್ದ ಬೈಕ್ ಸವಾರರು ಡಿಕ್ಕಿ ಹೊಡೆದಿದ್ದಾರೆ. ಅಪಘಾತದ ತೀವ್ರತೆಗೆ ಬೈಕ್ ಸಂಪೂರ್ಣವಾಗಿ ಬಸ್ಸಿನ ಒಳಗೆ ನುಗ್ಗಿದೆ. ಬೈಕ್ ಸವಾರ ಶಶಿಧರ್ ತಲೆಗೆ ಗಂಭೀರ ಗಾಯಗಳಾಗಿದ್ದು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಹ ಸವಾರ ಶಾನು ಭಾಝ್ ಕೂಡ ಗಾಯಾಳುವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಉಚ್ಚಿಲ ಹೆದ್ದಾರಿಯಲ್ಲಿ ರಸ್ತೆಯಲ್ಲೇ ಅವೈಜ್ಞಾನಿಕವಾಗಿ ಬಸ್ಸುಗಳನ್ನು ನಿಲುಗಡೆ ಮಾಡುವುದರಿಂದ ಇಲ್ಲಿ ಅಪಘಾತಗಳಾಗುತ್ತಿವೆ. ಈ ಹಿಂದೆಯೂ ಇದೇ ರೀತಿ ಅಪಘಾತ ಆಗಿದ್ದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore Rider Critical after Bike rams Speeding Bus after sudden brake at Uchila Near Talapady.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm