ಬ್ರೇಕಿಂಗ್ ನ್ಯೂಸ್
14-07-21 03:01 pm Mangalore Correspondent ಕರಾವಳಿ
ಸುಬ್ರಹ್ಮಣ್ಯ, ಜುಲೈ 14 : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದು ಕುಮಾರಧಾರಾ, ನೇತ್ರಾವತಿ ನದಿ ತುಂಬಿ ಹರಿಯತೊಡಗಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಬಳಿಯ ಕುಮಾರಧಾರಾ ಸ್ನಾನ ಘಟ್ಟ ಸಂಪೂರ್ಣ ಮುಳುಗಡೆಯಾಗಿದೆ.
ಶಿರಾಡಿ ಘಾಟಿ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ನಾಲ್ಕು ದಿನಗಳಿಂದ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕುಮಾರಧಾರಾ, ನೇತ್ರಾವತಿ, ಪಯಸ್ವಿನಿ, ಗುಂಡ್ಯ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ.




ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿದ ಭಕ್ತಾದಿಗಳು ಕುಮಾರಧಾರಾ ನದಿಗೆ ಇಳಿಯಲಾಗದೆ ರಸ್ತೆಗೆ ಬಂದಿರುವ ನೆರೆನೀರಿನಲ್ಲಿ ತೀರ್ಥಸ್ನಾನ ನೆರವೇರಿಸುತ್ತಿದ್ದಾರೆ. ನದಿಯ ದಡದಲ್ಲಿ ತೀರ್ಥಸ್ನಾನ ಮಾಡಲು ಭಕ್ತರಿಗೆ ಅವಕಾಶ ನೀಡಲಾಗಿದ್ದು, ನದಿಗೆ ಇಳಿಯದಂತೆ ಎಚ್ಚರಿಕೆ ಸಂದೇಶ ನೀಡಲಾಗಿದೆ. ಸ್ಥಳದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಹಾಗೆಯೇ ಧರ್ಮಸ್ಥಳದಲ್ಲಿಯೂ ನೇತ್ರಾವತಿ ನದಿಯಲ್ಲಿ ನೀರು ಏರಿಕೆಯಾಗಿದ್ದು ತೀರ್ಥಸ್ನಾನ ಮಾಡುವವರಿಗೆ ನದಿಗಿಳಿಯದಂತೆ ಸ್ಥಳದಲ್ಲಿ ಸಿಬಂದಿ ಸೂಚನೆ ನೀಡುತ್ತಿದ್ದಾರೆ. ಘಟ್ಟ ಪ್ರದೇಶಗಳಲ್ಲಿ ಮಳೆಯಾದ ವೇಳೆ ನದಿಯಲ್ಲಿ ಆಗಿಂದಾಗ್ಗೆ ನೆರೆನೀರು ಬರುವುದರಿಂದ ನದಿಗೆ ಇಳಿಯುವುದು, ಈಜಾಡುವುದಕ್ಕೆ ಅವಕಾಶ ನೀಡಿಲ್ಲ. ಭಕ್ತರು ಜಾಗ್ರತೆ ವಹಿಸುವಂತೆ ಸ್ಥಳದಲ್ಲಿ ಬಂದೋಬಸ್ತ್ ಮಾಡಲಾಗಿದೆ.
Video:
Following bountiful rain in the catchment area of River Kumaradhara, the inflow of water to the river has increased and the bathing ghat (snanaghatta) at Kukke Subrahmanya Temple was inundated on Wednesday
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am