ಬ್ರೇಕಿಂಗ್ ನ್ಯೂಸ್
16-07-21 01:30 pm Mangalore Correspondent ಕರಾವಳಿ
ಮಂಗಳೂರು, ಜುಲೈ 16: ಮಂಗಳೂರು – ಮುಂಬೈ ರೈಲ್ವೇ ಹಳಿಯ ಕುಲಶೇಖರ – ತೋಕೂರು ಮಧ್ಯೆ ಗುಡ್ಡ ಕುಸಿದು ಹಳಿಗೆ ಬಿದ್ದಿದ್ದು, ರೈಲು ಸಂಚಾರಕ್ಕೆ ತೊಡಕಾಗಿದೆ. ಭಾರೀ ಮಳೆಯಿಂದಾಗಿ ಗುಡ್ಡಕ್ಕೆ ಕಟ್ಟಿದ್ದ ತಡೆಗೋಡೆ ಸೇರಿದಂತೆ ಗುಡ್ಡ ಕುಸಿದು ಹಳಿಗೆ ಬಿದ್ದು ಮಣ್ಣು ಮುಚ್ಚಿದೆ.
ಇದರಿಂದಾಗಿ ಮಂಗಳೂರಿನಿಂದ ಕೊಂಕಣ ರೈಲ್ವೇ ಮೂಲಕ ಕಾರವಾರ, ಮುಂಬೈ ಸಾಗುವ ರೈಲುಗಳ ಸಂಚಾರಕ್ಕೆ ತೊಡಕಾಗಿದೆ. ಇಂದು ಬೆಳಗ್ಗೆ ಗುಡ್ಡ ಕುಸಿದ ಘಟನೆ ನಡೆದಿದ್ದು, ಈ ಭಾಗದಲ್ಲಿ ಸಂಚರಿಸುವ ರೈಲುಗಳನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಲಾಗಿದೆ. ಇದೇ ವೇಳೆ, ರೈಲು ಹಳಿಯಿಂದ ಮಣ್ಣು ತೆರವು ಮಾಡುವ ಕಾರ್ಯ ನಡೆಸಲಾಗುತ್ತಿದೆ.




ರೈಲ್ವೇ ಮೂಲಗಳ ಪ್ರಕಾರ, ಇಂದು ಈ ಹಳಿಯಿಂದ ಸಂಚರಿಸುವ ಒಂಬತ್ತು ರೈಲುಗಳ ಸಂಚಾರಕ್ಕೆ ತೊಂದರೆಯಾಗಿದೆ. ಮಧ್ಯಾಹ್ನ ಮಂಗಳೂರಿನಿಂದ ಮುಂಬೈಗೆ ಹೊರಡಲಿದ್ದ ಮತ್ಸ್ಯಗಂಧ ರೈಲು ನಾಲ್ಕು ಗಂಟೆ ತಡವಾಗಿ ಸಂಚರಿಸಲಿದೆ ಎನ್ನುವ ಮಾಹಿತಿ ನೀಡಲಾಗಿದೆ.
ರೈಲು ಹಳಿಯ ಉದ್ದಕ್ಕೆ ಗುಡ್ಡದ ಬದಿಗೆ ಕಾಂಕ್ರೀಟ್ ತಡೆಗೋಡೆ ಕಟ್ಟಲಾಗಿತ್ತು. ಕಾಂಕ್ರೀಟ್ ಗೋಡೆಯೇ ಕುಸಿದು ಬಿದ್ದಿದ್ದು , ಹಳಿಯ ಬದಿಯಲ್ಲಿ ಮಳೆ ನೀರು ಹರಿಯುತ್ತಿದೆ. ಸಂಜೆ ಹೊತ್ತಿಗೆ ಮಣ್ಣು ತೆರವು ಕಾರ್ಯಾಚರಣೆ ಮುಗಿಯಬಹುದು ಎನ್ನುವ ಮಾಹಿತಿಯನ್ನು ರೈಲ್ವೇ ಅಧಿಕಾರಿಗಳು ನೀಡಿದ್ದಾರೆ. ಕೊಂಕಣ ರೈಲ್ವೇ ಮೂಲಕ ದೆಹಲಿಗೆ ತೆರಳುವ ನಿಜಾಮುದ್ದೀನ್ ಎಕ್ಸ್ ಪ್ರೆಸ್ ಸೇರಿದಂತೆ ಕೇರಳದಿಂದ ಮಂಗಳೂರು- ಮುಂಬೈಗೆ ಸಂಚರಿಸುವ ರೈಲುಗಳನ್ನು ಕಣ್ಣೂರಿನಲ್ಲಿ ಡೈವರ್ಟ್ ಮಾಡಲಾಗಿದ್ದು, ಮೈಸೂರು ಮೂಲಕ ಸಾಗಲಿದೆ.
ಹಜ್ರತ್ ನಿಜಾಮುದ್ದೀನ್ ರಾಜಧಾನಿ ಎಕ್ಸ್ ಪ್ರೆಸ್, ಜಾಮ್ ನಗರ್ ಎಕ್ಸ್ ಪ್ರೆಸ್, ಪುಣೆ ಸೂಪರ್ ಫಾಸ್ಟ್, ಮುಂಬೈ ಸಿಎಸ್ ಟಿ, ಕಾರವಾರ ಯಶವಂತಪುರ ಸ್ಪೆಷಲ್ ಟ್ರೈನ್(ವಿಳಂಬ), ಮಂಗಳಾ ಲಕ್ಷದ್ವೀಪ ಎಕ್ಸ್ ಪ್ರೆಸ್ (ದೆಹಲಿ), ಇಂದೋರ್ ಎಕ್ಸ್ ಪ್ರೆಸ್, ನೇತ್ರಾವತಿ ಮತ್ತು ಪಂಚಗಂಗಾ ಎಕ್ಸ್ ಪ್ರೆಸ್ ರೈಲುಗಳ ಸಂಚಾರಕ್ಕೆ ತೊಡಕಾಗಿದ್ದು ಮಂಗಳೂರು ರೈಲು ನಿಲ್ದಾಣಕ್ಕೆ ಬರದೆ ಬೇರೆ ಬೇರೆ ಹಾದಿಗಳಲ್ಲಿ ಅದನ್ನು ಡೈವರ್ಟ್ ಮಾಡಲಾಗಿದೆ.
Video:
Due to Heavy Rain Landslide Happened near Thokur Mangalore Konkan railway Trains Affected.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm