ಬ್ರೇಕಿಂಗ್ ನ್ಯೂಸ್
18-07-21 11:25 am Mangaluru Correspondent ಕರಾವಳಿ
ಮಂಗಳೂರು, ಜುಲೈ 18: ಕುಲಶೇಖರ ಬಳಿ ರೈಲ್ವೆ ಹಳಿಗೆ ಕುಸಿದು ಬಿದ್ದ ಮಣ್ಣನ್ನು ಎರಡು ದಿನಗಳ ಕಾರ್ಯಾಚರಣೆ ಬಳಿಕ ತೆರವು ಮಾಡಲಾಗಿದೆ. ಹಳಿಗೆ ಬಿದ್ದಿರುವ ಬಂಡೆ ಕಲ್ಲು, ತಡೆಗೋಡೆಯ ಕಾಂಕ್ರೀಟ್ ಸಾಮಗ್ರಿ, ಮಣ್ಣನ್ನು ತೆರವು ಮಾಡಲಾಗಿದ್ದು ಭಾನುವಾರ ಬೆಳಗ್ಗೆ ರೈಲು ಸಂಚಾರ ಪುನಾರಂಭಗೊಂಡಿದೆ.
ಮಂಗಳೂರಿನಿಂದ ಕಾರವಾರ, ಮುಂಬೈ ಕಡೆಗೆ ತೆರಳುವ ಪ್ರಮುಖ ಹಳಿಯಾಗಿದ್ದರಿಂದ ಹಲವು ರೈಲುಗಳ ಸಂಚಾರಕ್ಕೆ ತೊಡಕಾಗಿತ್ತು. ಎರಡು ದಿನಗಳಿಂದ ಕಾರವಾರ ರೈಲು ಮಂಗಳೂರಿಗೆ ಬರಲು ಸಾಧ್ಯವಾಗಲಿಲ್ಲ. ಅಲ್ಲದೆ, ಮುಂಬೈನಿಂದ ಮಂಗಳೂರು- ಕೇರಳಕ್ಕೆ ಸಾಗುವ ರೈಲುಗಳ ಸಂಚಾರಕ್ಕೂ ತೊಡಕಾಗಿತ್ತು. ಹೀಗಾಗಿ ಮಳೆಯ ನಡುವೆಯೇ ಭರದ ಕಾಮಗಾರಿ ನಡೆಸಲಾಗಿದ್ದು ಇಂದು ಬೆಳಗ್ಗೆ ಕೆಲಸ ಪೂರ್ಣಗೊಂಡಿದೆ. ಅದರಂತೆ ಇಂದು ಬೆಳಗ್ಗೆ 8.45ರ ಹೊತ್ತಿಗೆ ಮೊದಲ ರೈಲು ಸಾಗಿದ್ದು ಎರ್ನಾಕುಲಂ - ಅಜ್ಮೀರ್ ರೈಲು ಹಳಿಯಿಂದ ಸಂಚರಿಸಿದೆ. ಮಣ್ಣು ಕುಸಿತಗೊಂಡ ಕುಲಶೇಖರ ಪ್ರದೇಶದಲ್ಲಿ ರೈಲು ತೆರಳುವ ವೇಳೆ ರೈಲ್ವೆ ಇಲಾಖೆ ಸಿಬ್ಬಂದಿ, ಅಧಿಕಾರಿಗಳು ಉಪಸ್ಥಿತರಿದ್ದು, ವೀಕ್ಷಣೆ ಮಾಡಿದರು.

ರೈಲು ಸಂಚಾರವನ್ನು ಭಾನುವಾರದಿಂದ ಆರಂಭಿಸಲೇಬೇಕು ಎನ್ನುವ ಉದ್ದೇಶದಿಂದ ಕಾರ್ಯಾಚರಣೆ ಶನಿವಾರ ತಡರಾತ್ರಿಯ ವರೆಗೂ ನಡೆದಿತ್ತು. ತಡೆಗೋಡೆ ಕುಸಿತ ಪ್ರದೇಶದಿಂದ ಮಣ್ಣು, ಬೃಹತ್ ಗಾತ್ರದ ಕಲ್ಲುಗಳನ್ನು ಹಿಟಾಚಿ ಬಳಸಿ ತೆಗೆಯಲಾಯಿತು. ರೈಲ್ವೆ ಹಳಿಗೆ ವಾಲಿದ ತಡೆಗೋಡೆಯನ್ನು ಯಂತ್ರ ಬಳಸಿ ಕಟ್ಟಿಂಗ್ ಮಾಡಲಾಗಿದೆ. ಮೇಲ್ಬಾಗದಲ್ಲಿರುವ ಮಣ್ಣು, ಕಲ್ಲುಗಳು ಮತ್ತೆ ಕುಸಿತವಾಗದಂತೆ ತೆರವು ಮಾಡಲಾಗಿದೆ.
ಎರಡು ದಿನಗಳ ಹಿಂದೆ, ಕುಲಶೇಖರ ಬಳಿಯ ಸುರಂಗದಿಂದ ಸ್ವಲ್ಪ ದೂರಕ್ಕೆ ಭಾರೀ ಮಳೆಗೆ ಗುಡ್ಡ ಕುಸಿದು ಹಳಿಗೆ ಬಿದ್ದಿತ್ತು. ಇದರಿಂದಾಗಿ ಮಂಗಳೂರಿನಿಂದ ಕೊಂಕಣ ರೈಲ್ವೇ ಹಾದಿಯಲ್ಲಿ ಸಂಚಾರ ಸ್ಥಗಿತ ಮಾಡಲಾಗಿತ್ತು.
Read: ಕೊಂಕಣ ರೈಲ್ವೇಯ ತೋಕೂರು ಬಳಿ ರೈಲು ಹಳಿಗೆ ಗುಡ್ಡ ಕುಸಿತ ; 9 ರೈಲುಗಳ ಸಂಚಾರಕ್ಕೆ ತೊಡಕು
The work on removal of mud and debris, that had fallen on the railway track between Padil and Kulshekhar due to the landslide and collapse of retainer wall, was almost completed on Saturday, July 17. The trains are likely to resume on this stretch after track inspection and electric line restoration on Sunday, July 18.
27-05-26 01:41 pm
HK News Staffer
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 01:30 pm
HK News Staffer
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm