ಬ್ರೇಕಿಂಗ್ ನ್ಯೂಸ್
18-07-21 07:41 pm Mangaluru Correspondent ಕರಾವಳಿ
ಮಂಗಳೂರು, ಜುಲೈ 18: ಕಂಬಳ ಪ್ರಸಿದ್ಧಿಗೆ ಬರುತ್ತಿದ್ದಂತೆ ಏಕರೂಪ ನಿಯಮಗಳನ್ನು ಜಾರಿಗೆ ತರಲು ಮತ್ತು ಕಂಬಳ ವಿಳಂಬವಾಗಿ ಮುಗಿಯುವುದನ್ನು ತಪ್ಪಿಸಲು ಕೆಲವೊಂದು ಹೊಸ ನಿಯಮಗಳನ್ನು ಜಾರಿಗೆ ತರಲು ಕಂಬಳ ಶಿಸ್ತು ಪಾಲನಾ ಸಮಿತಿ ನಿರ್ಧರಿಸಿದೆ.
ಹೊಸ ಪ್ರತಿಭೆಗಳಿಗೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಒಬ್ಬ ಓಟಗಾರನಿಗೆ ಒಂದು ಕಂಬಳದಲ್ಲಿ ಮೂರು ಜೊತೆ ಕೋಣಗಳನ್ನು ಓಡಿಸಲು ಮಾತ್ರ ಅವಕಾಶ ನೀಡಲಾಗಿದೆ. ಆದರೆ ಒಂದೇ ತಂಡದ ಎರಡು ಜೊತೆಯ ಕೋಣಗಳಿದ್ದರೆ ಮಾತ್ರ 4 ಜೊತೆ ಕೋಣಗಳನ್ನು ಓಡಿಸಬಹುದಾಗಿದೆ. ಇದರಿಂದ ಹೊಸ ಓಟಗಾರರಿಗೆ ಅವಕಾಶ ನೀಡುವುದರ ಜೊತೆಗೆ ವಿಳಂಬವಾಗುವುದನ್ನು ತಪ್ಪಿಸಬಹುದು ಎನ್ನುವ ತೀರ್ಮಾನ ಸಮಿತಿಯದ್ದು.
ಇನ್ನು ಕಂಬಳವನ್ನು 24 ಗಂಟೆಯೊಳಗೆ ಮುಗಿಸಲು ಕಂಬಳ ಶಿಸ್ತು ಪಾಲನಾ ಸಮಿತಿ ನಿರ್ಧಾರ ಮಾಡಿದೆ. ಬೆಳಗ್ಗೆ 9 ಗಂಟೆಗೆ ಕಂಬಳ ಆರಂಭಿಸಿ ಮರುದಿನ ಬೆಳಗ್ಗೆ 9 ಗಂಟೆಗೆ ಕಂಬಳವನ್ನು ಮುಗಿಸಬೇಕೆಂದು ತೀರ್ಮಾನ ಮಾಡಲಾಗಿದೆ. ಅಲ್ಲದೆ, ಕಂಬಳ ಸ್ಪರ್ಧೆಯ ವಿಳಂಬವನ್ನು ತಪ್ಪಿಸಲು ಕಂಬಳ ಕೋಣಗಳನ್ನು 5 ನಿಮಿಷದ ಒಳಗೆ ಕಂಬಳದ ಗದ್ದೆಗೆ ತರಬೇಕೆಂಬ ನಿಯಮ ಮಾಡಲಾಗಿದೆ. ತಡವಾದರೆ ಆ ತಂಡವನ್ನು ಕೈಬಿಟ್ಟು ವಾಕ್ ಓವರ್ ಅಂತಾ ಘೋಷಣೆ ಮಾಡಲು ನಿರ್ಧಾರ ಮಾಡಲಾಗಿದೆ.
ಕಂಬಳದ ತೀರ್ಪುಗಾರರು ಮದ್ಯಪಾನ ಮಾಡಿ ಬರುವಂತಿಲ್ಲ ಎಂದು ನಿರ್ಣಯಿಸಲಾಗಿದೆ. ಕಂಬಳದ ಬಗ್ಗೆ ಯಾವುದೇ ದೂರುಗಳಿದ್ದರೂ, ಜಿಲ್ಲಾ ಕಂಬಳ ಸಮಿತಿಯ ಗಮನಕ್ಕೆ ತರಬೇಕು.
ಯಾವುದಾದರೂ ತಂಡದ ತಪ್ಪು ಸಾಬೀತಾದರೆ ಒಂದು ವರ್ಷ ಕಾಲ ಆ ತಂಡವನ್ನು ಕಂಬಳದಿಂದ ಅಮಾನತು ಮಾಡುವ ಕಠಿಣ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಕಂಬಳ ಓಟಗಾರರು ಮತ್ತು ಕೋಣಗಳ ಯಜಮಾನರು ಕಂಬಳ ಸಮಿತಿಯ ಸದಸ್ಯತ್ವ ಪಡೆಯಬೇಕೆಂಬ ನಿರ್ಧಾರವನ್ನೂ ಮಾಡಲಾಗಿದೆ.
New Kambala Board has implemented new rules playing Karavali Kambala in coastal Karnataka.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 01:19 pm
HK News Staffer
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am