ಬ್ರೇಕಿಂಗ್ ನ್ಯೂಸ್
19-07-21 11:06 pm Mangaluru Correspondent ಕರಾವಳಿ
ಉಳ್ಳಾಲ, ಜು.19: ಕಾಂಗ್ರೆಸ್ ಆಡಳಿತದಲ್ಲಿ ಕಾಶ್ಮೀರದಿಂದ ಹಿಡಿದು ಉಳ್ಳಾಲದ ವರೆಗೂ ಭಯೋತ್ಪಾದನೆ ಹಬ್ಬಿತ್ತು. ಕಾಂಗ್ರೆಸ್ ಅಧಿಕಾರದಲ್ಲಿದ್ರೂ ಇಲ್ಲದಿದ್ದರೂ ಅದು ದೇಶಕ್ಕೆ ಅಪಾಯಕಾರಿ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಸಿಂಹ ನಾಯಕ್ ಕುಹಕವಾಡಿದ್ದಾರೆ.
ಅಂಬಿಕಾ ರೋಡಿನ ಗಟ್ಟಿ ಸಮಾಜ ಭವನದಲ್ಲಿ ಇಂದು ನಡೆದ ಭಾರತೀಯ ಜನತಾ ಪಾರ್ಟಿಯ ಮಂಗಳೂರು ಮಂಡಲ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಅವರು ಉದ್ಘಾಟಿಸಿ ಮಾತನಾಡಿದರು.


ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಕಾಶ್ಮೀರದಿಂದ ಉಳ್ಳಾಲದ ವರೆಗೂ ಭಯೋತ್ಪಾದನೆ ಹಬ್ಬಿತ್ತು. ಕಳೆದ ಏಳು ವರುಷದಲ್ಲಿ ಕೇಂದ್ರದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ನಂತರ ಭಯೋತ್ಪಾದನೆಯನ್ನು ನಿಗ್ರಹಿಸಲಾಗಿದೆ. ಅಲ್ಲದೆ ವೈರಿಗಳ ನೆಲಕ್ಕೆ ನುಗ್ಗಿ ಹೊಡೆಯಲು ಸೈನಿಕರಿಗೆ ತಾಕತ್ತು ಬಂದಿದೆ. ಕಾಂಗ್ರೆಸ್ ಮಾತ್ರ ಎಲ್ಲದಕ್ಕೂ ಸಾಕ್ಷಿ ಕೇಳಿ ಭಾರತೀಯ ಸೈನಿಕರ ಆತ್ಮ ಸ್ಥೈರ್ಯವನ್ನು ಪ್ರಶ್ನಿಸೋ ಕಾರ್ಯ ನಡೆಸಿದೆ. ಕೋವಿಡ್ ಲಸಿಕೆಯ ಕುರಿತೇ ಕಾಂಗ್ರೆಸ್ ಗೊಂದಲ ಅಪಪ್ರಚಾರ ಮೂಡಿಸಿ ಲಸಿಕೆ ತಗೊಂಡರೆ ಮಕ್ಕಳೇ ಆಗಲ್ಲ ಎಂದಿತ್ತು. ಇದೀಗ ಅಂತಹ ಗೊಂದಲ ಸೃಷ್ಟಿಸಿದವರೇ ತಮ್ಮ ಮನೆಗೆ ಲಸಿಕೆ ತರಿಸಿ ಹಾಕುತ್ತಿದ್ದು ಅದಕ್ಕೆ ಉಳ್ಳಾಲದವರೂ ಹೊರತಾಗಿಲ್ಲ ಎಂದರು.
ಸತತ ಸೋಲಿನಿಂದ ಕಾಂಗ್ರೆಸ್ ನೀರಿನಿಂದ ಹೊರಬಿದ್ದ ಮೀನಿನಂತಾಗಿರುವುದು ಸ್ಪಷ್ಟ. ಎಷ್ಟೋ ರಾಜ್ಯಗಳಲ್ಲಿ ತನ್ನ ಅಸ್ತಿತ್ವವನ್ನೇ ಕಳಕೊಂಡು ಹತಾಶರಾದ ಕಾಂಗ್ರೆಸಿಗರು ಬಿಜೆಪಿ ವಿರುದ್ದ ಇಲ್ಲ ಸಲ್ಲದ ಮಿಥ್ಯಾರೋಪಗಳನ್ನು ಮಾಡುವುದರಲ್ಲೇ ತಲ್ಲೀಣರಾಗಿದ್ದಾರೆಂದರು.
ಮುಂಬರುವ ತಾ.ಪಂ, ಜಿಲ್ಲಾ ಪಂ, ವಿಧಾನ ಪರಿಷತ್ ಚುನಾವಣೆಗೆ ಕಾರ್ಯಕರ್ತರು ಸನ್ನದ್ಧರಾಗಿ ಎಂದು ಕರೆ ನೀಡಿದರು. ಸಭೆಯಲ್ಲಿ ಅಗಲಿದ ಬಿಜೆಪಿ ಕಾರ್ಯಕರ್ತರಿಗೆ ಸಾಮೂಹಿಕ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಅಂತರ್ಜಲ ವೃದ್ಧಿಗಾಗಿ ಸಾಮೂಹಿಕ ಸಂಕಲ್ಪವನ್ನೂ ತೊಡಲಾಯಿತು. ಬಿಜೆಪಿ ಜಿಲ್ಲಾ ಸಹಪ್ರಭಾರಿ ರಾಜೇಶ್ ಕಾವೇರಿ, ಜಿಲ್ಲಾ ಉಪಾಧ್ಯಕ್ಷರುಗಳಾದ ಈಶ್ವರ್ ಕಟೀಲು,ಕಸ್ತೂರಿ ಪಂಜ, ಕ್ಷೇತ್ರಾಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್ ಮೊದಲಾದವರು ಇದ್ದರು.
Congress Party is dangerous even if it excis or not slams BJP Prathap Simha Nayak in ullal
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm