ಬ್ರೇಕಿಂಗ್ ನ್ಯೂಸ್
19-07-21 11:22 pm Mangaluru Correspondent ಕರಾವಳಿ
ಉಳ್ಳಾಲ, ಜು.18: ದೈವಾರಾಧನೆಗೆ ಅಗತ್ಯವುಳ್ಳ ಹೂವುಗಳಲ್ಲಿ ಅತ್ಯಂತ ಪ್ರಮುಖ ಸ್ಥಾನ ಹೊಂದಿರುವ ನಾಟಿ ಕೇಪುಳ ಅಳಿವಿನಂಚಿನಲ್ಲಿದೆ. ಕೇಪುಳ ಹೂವಿನ ವೃದ್ಧಿಗಾಗಿ ತೊಕ್ಕೊಟ್ಟಿನ ಸಾಯಿ ಪರಿವಾರ್ ಟ್ರಸ್ಟ್ ನಿಂದ ಉಳ್ಳಾಲದಲ್ಲಿ ಕೇಪುಳ ಹೂವಿನ ತೋಟ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ.
ಉಳ್ಳಾಲ ಬಂಡಿಕೊಟ್ಯದ ಮಲರಾಯ ದೈವಸ್ಥಾನದಲ್ಲಿ ತೊಕ್ಕೊಟ್ಟು ಸಾಯಿ ಪರಿವಾರ್ ಟ್ರಸ್ಟ್ ನಿಂದ ಕೇಪುಳ ತೋಟದ ನಿರ್ಮಾಣ ಯೋಜನೆಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ದಯಾನಂದ ಜಿ.ಕತ್ತಲ್ ಸಾರ್ ಚಾಲನೆ ನೀಡಿದರು.


ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು ತುಳುನಾಡಿನ ದೈವಗಳಿಗೆ ನಾಟಿ ಕೇಪುಳ, ತೋಡಿನ ನೀರು, ತೋಟದ ಹಾಲೆ ಅತಿ ಪ್ರಾಮುಖ್ಯ. ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿರುವ ತುಳುನಾಡಿನ ದೈವಾರಾಧನೆಯಲ್ಲಿ ಕೇಪುಳ ಮೇಲ್ಪಂಕ್ತಿ ಹೊಂದಿದೆ. ಕೇಪುಳ ಹೂವುಗಳ ಅಭಾವದಲ್ಲಿ ದೈವಾರಾಧನೆ ಕೈಂಕರ್ಯಗಳು ಅಸಾಧ್ಯ. ಈಗಿನ ಕಾಂಕ್ರೀಟ್ ಜಗತ್ತಿನಿಂದಾಗಿ ನಾಟಿ ಕೇಪುಳ ಹೂವಿನ ಗಿಡಗಳು ಅಳಿವಿನ ಅಂಚಿಗೆ ಸಾಗುತ್ತಿರುವ ಸಂದರ್ಭದಲ್ಲಿ ಅಂತಹ ಪಾವಿತ್ರ್ಯದ ಗಿಡಗಳನ್ನು ದೈವಸ್ಥಾನಗಳಲ್ಲಿ ನೆಡುವ ಮೂಲಕ ದೈವೀ ಕಾರ್ಯವನ್ನು ಸಾಯಿ ಪರಿವಾರ್ ಟ್ರಸ್ಟ್ ಮಾಡಿದೆ ಎಂದರು.
ಸಾಯಿ ಪರಿವಾರ್ ಟ್ರಸ್ಟ್ ನ ಮಾರ್ಗದರ್ಶಕ, ಚಂದ್ರಹಾಸ್ ಪಂಡಿತ್ ಹೌಸ್ ಶುಭ ಹಾರೈಸಿದರು. ಪರಿಸರವಾದಿ ಮಾಧವ ಉಳ್ಳಾಲ್, ಓವರ್ ಬ್ರಿಡ್ಜ್ ಕೊರಗಜ್ಜ ಸೇವಾ ಸಮಿತಿಯ ಸ್ಥಾಪಕರಾದ ರಾಜೇಶ್ ಕಾಪಿಕಾಡ್, ಬಂಡಿಕೊಟ್ಯ ಮಲರಾಯ ದೈವಸ್ಥಾನದ ಪ್ರಮುಖರಾದ ಲತೀಶ್ ಪೂಜಾರಿ, ಮುಖಂಡರಾದ ದಯಾನಂದ ತೊಕ್ಕೊಟ್ಟು, ಗೋಪಾಲ ಯು.ಕೆ, ಉಳ್ಳಾಲ, ದೇವಕಿ ಆರ್. ಉಳ್ಳಾಲ, ಉದಯ ಆರ್.ಕೆ, ಗಣೇಶ್ ಪೂಜಾರಿ, ಹರ್ಷರಾಜ್ ಕುಂಪಲ, ಹರ್ಷವರ್ಧನ, ಮೋಹಿತ್ ಉಳ್ಳಾಲ, ಸುನಿತ್ ಬಂಡಿಕೊಟ್ಯ, ಸಾಗರ್ ಬಂಡಿಕೊಟ್ಯ, ಪ್ರಶಾಂತ್ ಸುವರ್ಣ, ಉಳ್ಳಾಲ ಕೊರಗಜ್ಜ ಸೇವಾ ಸಮಿತಿಯ ಲತೀಶ್ ಕೊಟ್ಟಾರ, ಶಾನ್ ಉಳ್ಳಾಲ, ಸಾಯಿ ಪರಿವಾರ್ ಟ್ರಸ್ಟಿನ ಪ್ರವೀಣ್ ಎಸ್ ಕುಂಪಲ, ಪುರುಷೋತ್ತಮ ಕಲ್ಲಾಪು, ಗಣೇಶ್ ಅಂಚನ್, ಗಣೇಶ್ ಪಂಡಿತ್ ಮುಳಿಹಿತ್ಲು, ದೀಕ್ಷಿತ್ ಪೂಜಾರಿ, ಸಂಪತ್ ಧರ್ಮನಗರ, ಸೂರ್ಯ ಕುಂಪಲ, ಸಂಪತ್ ಪಿಲಾರ್, ಕೌಶಿಕ್ ಸೇವಂತಿಗುಡ್ಡೆ, ಶೈಲೇಶ್ ಸೇವಂತಿಗುಡ್ಡೆ, ಶವಿತ್ ಉಚ್ಚಿಲ್, ಸಂತೋಷ್ ಅಂಬ್ಲಮೊಗರು, ಕುಶಾಲ್ ರಾಜ್ ಮೊದಲಾದವರು ಉಪಸ್ಥಿತರಿದ್ದರು.
27-05-26 04:58 pm
HK News Staffer
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 01:30 pm
HK News Staffer
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm