ಬ್ರೇಕಿಂಗ್ ನ್ಯೂಸ್
21-07-21 12:54 pm Mangalore Correspondent ಕರಾವಳಿ
ಮಂಗಳೂರು, ಜು.21 : ನಕಲಿ ಪಾಸ್ಪೋರ್ಟ್ ಪ್ರಕರಣದ ಆರೋಪಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮುರಲೀಧರ ಪೈ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಕಾಸರಗೋಡು ಜಿಲ್ಲೆಯ ಕಾಞಂಗಾಡ್ ನಿವಾಸಿ ಅಬ್ದುಲ್ ಬಶೀರ್ (45) ಶಿಕ್ಷೆಗೊಳಗಾದ ಆರೋಪಿ.
2010ರ ಆಗಸ್ಟ್ 17ರಂದು ಬೇರೊಬ್ಬರ ಪಾಸ್ಪೋರ್ಟ್ಗೆ ತನ್ನ ಭಾವಚಿತ್ರವನ್ನು ಲಗತ್ತಿಸಿ ಮಂಗಳೂರು ವಿಮಾನ ನಿಲ್ದಾಣದ ಮೂಲಕ ದುಬೈಗೆ ತೆರಳಿದ್ದ. ದುಬೈನಲ್ಲಿ ಇಮಿಗ್ರೇಷನ್ ಅಧಿಕಾರಿಗಳು ಪರಿಶೀಲನೆ ನಡೆಸಿದ ಸಂದರ್ಭ ಸಿಕ್ಕಿಬಿದ್ದಿದ್ದು ಬಳಿಕ ಮಂಗಳೂರಿಗೆ ವಾಪಸ್ ಕಳುಹಿಸಿದ್ದರು. ಇಲ್ಲಿ ಪಾಸ್ಪೋರ್ಟ್ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
ಪ್ರಕರಣದಲ್ಲಿ ಸಹಕರಿಸಿದ ಉಕ್ಕಾಸ್, ಮುಹಮ್ಮದ್ ಕುಂಞಿ ಮತ್ತು ಮುನೀರ್ ಕೆ. ಎಂಬವರ ವಿರುದ್ಧ ಕೂಡ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿತ್ತು. ಅಬ್ದುಲ್ ಬಶೀರ್ ವಿಚಾರಣೆಗೆ ಹಾಜರಾಗಿದ್ದ. ಉಳಿದವರು ತಲೆಮರೆಸಿಕೊಂಡಿದ್ದರು. ಹಾಗಾಗಿ ಪ್ರಕರಣವನ್ನು ವಿಭಜಿಸಿ ಅಬ್ದುಲ್ ಬಶೀರ್ನನ್ನು ವಿಚಾರಣೆಗೆ ಒಳಪಡಿಸಲಾಗಿತ್ತು.
ವಿಚಾರಣೆ ನಡೆಸಿದ ಒಂದನೇ ಹೆಚ್ಚುವರಿ ಹಿರಿಯ ನ್ಯಾಯಿಕ ದಂಡಾಧಿಕಾರಿ 2019ರ ಫೆಬ್ರವರಿ 19ರಂದು ಅಬ್ದುಲ್ ಬಶೀರ್ ಬಿಡುಗಡೆಗೆ ಆದೇಶಿಸಿದ್ದರು. ಈ ಆದೇಶ ಪ್ರಶ್ನಿಸಿ ಸರಕಾರದ ಪರವಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು.
ಮೇಲ್ಮನವಿಯನ್ನು ಭಾಗಶಃ ಪುರಸ್ಕರಿಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮುರಲೀಧರ ಪೈ ಬಿ. ಆರೋಪಿಗೆ ನಾಲ್ಕು ಅಪರಾಧಗಳಿಗೆ ತಲಾ ಒಂದು ವರ್ಷ ಶಿಕ್ಷೆ ಮತ್ತು 1,000 ರೂ. ದಂಡ ವಿಧಿಸಿ (ಏಕಕಾಲದಲ್ಲಿ ಅನುಭವಿಸುವಂತೆ) ತೀರ್ಪು ನೀಡಿದ್ದಾರೆ. ಸರಕಾರದ ಪರವಾಗಿ ಸರಕಾರಿ ಅಭಿಯೋಜಕ ರಾಜು ಪೂಜಾರಿ ಬನ್ನಾಡಿ ವಾದಿಸಿದ್ದಾರೆ.
The chief district and sessions court here has awarded punishment to a person who was accused of using a fake passport after the charge was found to have been proved. Judge of the court, Muraleedhar Pai, announced the judgment. The person who was found guilty and sentenced in the case happens to be Abdul Basheer alias Basheer (45), residing near Kanhangad beach in Kasargod district.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm