ಬ್ರೇಕಿಂಗ್ ನ್ಯೂಸ್
25-07-21 11:03 pm Mangaluru Correspondent ಕರಾವಳಿ
ಮಂಗಳೂರು, ಜುಲೈ 25: ಟಿವಿ ಜಾಹೀರಾತಿನಲ್ಲಿ ಯುವತಿಯೊಬ್ಬಳು ತಾಯಿ ಜೊತೆಗೆ ಕಾರಿನಲ್ಲಿ ತೆರಳಿದ್ದಾಗ ಟೈರ್ ಪಂಕ್ಚರ್ ಆಗಿ ಬಳಿಕ ಯುವತಿಯೇ ಟೈರ್ ತೆಗೆದು ಹಾಕುತ್ತಾಳೆ. ಕೊನೆಯಲ್ಲಿ ಅಪ್ಪನನ್ನು ನೋಡಿದ್ದೆ ಎಂದುಸುರುತ್ತಾ ಟಾನಿಕ್ ಬಗ್ಗೆ ಹೇಳುತ್ತಾಳೆ. ಅದು ಜಾಹೀರಾತು. ನಿಜ ಜೀವನದಲ್ಲಿ ಯುವತಿ ಕಾರು ಡ್ರೈವ್ ಮಾಡುವಾಗ ಟೈರ್ ಪಂಕ್ಚರ್ ಆದರೆ ಏನು ಗತಿ ? ಇಂಥಾದ್ದೇ ಪ್ರಸಂಗ ಮಂಗಳೂರಿನಲ್ಲಿ ಇವತ್ತು ಆಗಿತ್ತು.
ಮಹಿಳೆ ಮತ್ತು ಮಗು ಮಾತ್ರ ಇದ್ದ ಕಾರೊಂದು ನಾಗುರಿಯಿಂದ ಪಂಪ್ವೆಲ್ ಕಡೆಗೆ ಬರುತ್ತಿದ್ದಾಗ ಟಯರ್ ಪಂಕ್ಚರ್ ಆಗಿತ್ತು. ಕೂಡಲೇ ಕಾರಿನಿಂದಿಳಿದ ಮಹಿಳೆ ಹೊರಗೆ ನಿಂತು ಏನು ಮಾಡುವುದೆಂದು ತೋಚದೆ ನಿಂತಿದ್ದರು. ಆಕೆ ಕುಂದಾಪುರ ಮೂಲದ ಮಹಿಳೆಯಾಗಿದ್ದರಿಂದ ಸಂಬಂಧಿಕರು ಹತ್ತಿರ ಇರಲಿಲ್ಲವೋ ಏನೋ..ಮಹಿಳೆಯ ಅಸಹಾಯಕತೆ ಗಮನಿಸಿದ ನಾಗುರಿ ಸಂಚಾರಿ ಠಾಣಾ ಪೊಲೀಸರು ತಾವೇ ಟೈರ್ ಬಿಚ್ಚಿಸಲು ನೆರವಾಗಿದ್ದಾರೆ. ರಸ್ತೆ ಬದಿ ಕಾರನ್ನು ಪಾರ್ಕ್ ಮಾಡಿ, ಟೈರ್ ತೆಗೆದು ಬೇರೆ ಸ್ಟೆಪಿನ್ ಟಯರ್ ಅಳವಡಿಸಿ ಮಾನವೀಯತೆ ಕಾರ್ಯ ಮಾಡಿದ್ದಾರೆ.
ಕುಂದಾಪುರ ಮೂಲದ ಮಹಿಳೆ ನಾಗುರಿ ಕಡೆಯಿಂದ ಮಂಗಳೂರು ನಗರದ ಕಡೆಗೆ ತೆರಳುತ್ತಿದ್ದಾಗ ಘಟನೆ ನಡೆದಿತ್ತು. ಇದೇ ಸಂದರ್ಭ ಹೈವೇ ಗಸ್ತಿನಲ್ಲಿದ್ದ ಪೊಲೀಸರು ಸ್ಥಳಕ್ಕೆ ಬಂದಿದ್ದರು. ಮಹಿಳೆಯ ಅಸಹಾಯಕತೆಯನ್ನು ಗಮನಿಸಿದ ಸಂಚಾರಿ ಪೊಲೀಸರು ತಕ್ಷಣ ಕಾರಿನತ್ತ ಧಾವಿಸಿ ನೆರವಿಗೆ ನಿಂತಿದ್ದಾರೆ. ನಾಗುರಿ ಸಂಚಾರಿ ಠಾಣೆ ಎಎಸ್ ಐ ಲಸ್ರಾದೋ, ಸಿಬ್ಬಂದಿ ಮಹೇಶ್ ಹಾಗೂ ಹೋಂಗಾಡ್೯ ಆಸಿಫ್ ಸೇರಿ ಮಾಡಿರುವ ಕಾರ್ಯ ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ.
Mangalore Kankandy Traffic Police help a woman fix the car tyre. Traffic police SI Lasrado, Mahesh and Home guard Asif help in fixing the punctured car. The Picture of this goes viral on social media.
07-08-25 10:18 pm
Bangalore Correspondent
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
07-08-25 11:01 pm
Mangalore Correspondent
ಉಳ್ಳಾಲದಲ್ಲಿ ನಿಯಂತ್ರಣ ತಪ್ಪಿ ಆವರಣ ಗೋಡೆಗೆ ಬಡಿದ ಸ...
07-08-25 10:45 pm
ಧರ್ಮಸ್ಥಳ ; 13ನೇ ಪಾಯಿಂಟ್ ಬಗ್ಗೆ ಕುತೂಹಲ, ಅಸ್ಥಿ ಪ...
07-08-25 10:29 pm
Surathkal-Nanthoor highway: ಇಂದಿನಿಂದ ಆ.13ರ ವರ...
07-08-25 07:55 pm
Dharmasthala, Attack on YouTubers: ಯೂಟ್ಯೂಬರ್...
07-08-25 03:26 pm
07-08-25 08:59 pm
Bangalore Correspondent
Kudla Rampage Attack, Ajay Anchan, Dharmastha...
06-08-25 08:02 pm
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am