ಬ್ರೇಕಿಂಗ್ ನ್ಯೂಸ್
25-07-21 11:03 pm Mangaluru Correspondent ಕರಾವಳಿ
ಮಂಗಳೂರು, ಜುಲೈ 25: ಟಿವಿ ಜಾಹೀರಾತಿನಲ್ಲಿ ಯುವತಿಯೊಬ್ಬಳು ತಾಯಿ ಜೊತೆಗೆ ಕಾರಿನಲ್ಲಿ ತೆರಳಿದ್ದಾಗ ಟೈರ್ ಪಂಕ್ಚರ್ ಆಗಿ ಬಳಿಕ ಯುವತಿಯೇ ಟೈರ್ ತೆಗೆದು ಹಾಕುತ್ತಾಳೆ. ಕೊನೆಯಲ್ಲಿ ಅಪ್ಪನನ್ನು ನೋಡಿದ್ದೆ ಎಂದುಸುರುತ್ತಾ ಟಾನಿಕ್ ಬಗ್ಗೆ ಹೇಳುತ್ತಾಳೆ. ಅದು ಜಾಹೀರಾತು. ನಿಜ ಜೀವನದಲ್ಲಿ ಯುವತಿ ಕಾರು ಡ್ರೈವ್ ಮಾಡುವಾಗ ಟೈರ್ ಪಂಕ್ಚರ್ ಆದರೆ ಏನು ಗತಿ ? ಇಂಥಾದ್ದೇ ಪ್ರಸಂಗ ಮಂಗಳೂರಿನಲ್ಲಿ ಇವತ್ತು ಆಗಿತ್ತು.
ಮಹಿಳೆ ಮತ್ತು ಮಗು ಮಾತ್ರ ಇದ್ದ ಕಾರೊಂದು ನಾಗುರಿಯಿಂದ ಪಂಪ್ವೆಲ್ ಕಡೆಗೆ ಬರುತ್ತಿದ್ದಾಗ ಟಯರ್ ಪಂಕ್ಚರ್ ಆಗಿತ್ತು. ಕೂಡಲೇ ಕಾರಿನಿಂದಿಳಿದ ಮಹಿಳೆ ಹೊರಗೆ ನಿಂತು ಏನು ಮಾಡುವುದೆಂದು ತೋಚದೆ ನಿಂತಿದ್ದರು. ಆಕೆ ಕುಂದಾಪುರ ಮೂಲದ ಮಹಿಳೆಯಾಗಿದ್ದರಿಂದ ಸಂಬಂಧಿಕರು ಹತ್ತಿರ ಇರಲಿಲ್ಲವೋ ಏನೋ..ಮಹಿಳೆಯ ಅಸಹಾಯಕತೆ ಗಮನಿಸಿದ ನಾಗುರಿ ಸಂಚಾರಿ ಠಾಣಾ ಪೊಲೀಸರು ತಾವೇ ಟೈರ್ ಬಿಚ್ಚಿಸಲು ನೆರವಾಗಿದ್ದಾರೆ. ರಸ್ತೆ ಬದಿ ಕಾರನ್ನು ಪಾರ್ಕ್ ಮಾಡಿ, ಟೈರ್ ತೆಗೆದು ಬೇರೆ ಸ್ಟೆಪಿನ್ ಟಯರ್ ಅಳವಡಿಸಿ ಮಾನವೀಯತೆ ಕಾರ್ಯ ಮಾಡಿದ್ದಾರೆ.

ಕುಂದಾಪುರ ಮೂಲದ ಮಹಿಳೆ ನಾಗುರಿ ಕಡೆಯಿಂದ ಮಂಗಳೂರು ನಗರದ ಕಡೆಗೆ ತೆರಳುತ್ತಿದ್ದಾಗ ಘಟನೆ ನಡೆದಿತ್ತು. ಇದೇ ಸಂದರ್ಭ ಹೈವೇ ಗಸ್ತಿನಲ್ಲಿದ್ದ ಪೊಲೀಸರು ಸ್ಥಳಕ್ಕೆ ಬಂದಿದ್ದರು. ಮಹಿಳೆಯ ಅಸಹಾಯಕತೆಯನ್ನು ಗಮನಿಸಿದ ಸಂಚಾರಿ ಪೊಲೀಸರು ತಕ್ಷಣ ಕಾರಿನತ್ತ ಧಾವಿಸಿ ನೆರವಿಗೆ ನಿಂತಿದ್ದಾರೆ. ನಾಗುರಿ ಸಂಚಾರಿ ಠಾಣೆ ಎಎಸ್ ಐ ಲಸ್ರಾದೋ, ಸಿಬ್ಬಂದಿ ಮಹೇಶ್ ಹಾಗೂ ಹೋಂಗಾಡ್೯ ಆಸಿಫ್ ಸೇರಿ ಮಾಡಿರುವ ಕಾರ್ಯ ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ.
Mangalore Kankandy Traffic Police help a woman fix the car tyre. Traffic police SI Lasrado, Mahesh and Home guard Asif help in fixing the punctured car. The Picture of this goes viral on social media.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm