ಬ್ರೇಕಿಂಗ್ ನ್ಯೂಸ್
26-07-21 05:45 pm Mangalore Correspondent ಕರಾವಳಿ
ಮಂಗಳೂರು, ಜುಲೈ 26: ಆದಾಯ ಮೀರಿ ಅಪಾರ ಆಸ್ತಿ ಗಳಿಸಿದ್ದ ಮಂಗಳೂರು ಮಹಾನಗರ ಪಾಲಿಕೆಯ ಸಹಾಯಕ ಟೌನ್ ಪ್ಲಾನಿಂಗ್ ಆಫೀಸರ್ ಬಿ.ಪಿ. ಶಿವರಾಜುಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಐದು ವರ್ಷಗಳ ಶಿಕ್ಷೆ ಘೋಷಣೆ ಮಾಡಿದೆ.
2007ರ ಜುಲೈ 25 ರಂದು ಆಗಿನ ಲೋಕಾಯುಕ್ತ ಇನ್ಸ್ಪೆಕ್ಟರ್ ಪ್ರಸನ್ನ ವಿ. ರಾಜು ಮಾಹಿತಿ ಕಲೆ ಹಾಕಿದ್ದು, ಆಗಿನ ಲೋಕಾಯುಕ್ತ ಉಪಾಧೀಕ್ಷಕ ಪ್ರಭುದೇವ ಮಾಣೆ ಮತ್ತು ಅವರ ತಂಡ ಟೌನ್ ಪ್ಲಾನಿಂಗ್ ಅಧಿಕಾರಿ ಶಿವರಾಜು ಕುರಿತ ವಿವಿಧ ಕಡೆಯ ಆಸ್ತಿಗಳಿಗೆ ದಾಳಿ ನಡೆಸಿತ್ತು. ದಾಳಿ ಬಳಿಕ ಹಲವು ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದರು. ಸುಮಾರು ಮೂವತ್ತೆಂಟು ಲಕ್ಷದಷ್ಟು ಆದಾಯಕ್ಕಿಂತ ಹೆಚ್ಚಿನ ಆಸ್ತಿ ಪತ್ತೆಯಾಗಿತ್ತು. ತನಿಖೆಯನ್ನು ಪೂರ್ಣಗೊಳಿಸಿ ಡಿವೈಎಸ್ಪಿ ಆಗಿದ್ದ ಡಾ. ಪ್ರಭುದೇವ್ ಮಾಣೆ ಆರೋಪಿ ಶಿವರಾಜು ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಅಭಿಯೋಜನೆಯ ಪರವಾಗಿ 27 ಸಾಕ್ಷಿದಾರರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು ಹಾಗೂ 160 ದಾಖಲೆಗಳನ್ನು ಹಾಜರು ಪಡಿಸಲಾಗಿತ್ತು. ವಿಚಾರಣೆ ನಡೆಸಿದ ಮಂಗಳೂರು ಲೋಕಾಯುಕ್ತ ವಿಶೇಷ ನ್ಯಾಯಾಲಯವು ವಿಶೇಷ ಸರಕಾರಿ ಅಭಿಯೋಜಕ ಕೆ. ಎಸ್. ಎನ್. ರಾಜೇಶ್ ವಾದವನ್ನು ಪುರಸ್ಕರಿಸಿ, ಆರೋಪ ಸಾಬೀತಾಗಿದೆ ಎಂದು ತೀರ್ಮಾನಕ್ಕೆ ಬಂದಿದ್ದು, ಹದಿನೇಳು ಲಕ್ಷದಷ್ಟು ಆದಾಯಕ್ಕಿಂತ ಹೆಚ್ಚಿನ ಆಸ್ತಿಯನ್ನು ಸೇವೆಗೆ ಸೇರಿದ ವರ್ಷದಿಂದ ದಾಳಿ ನಡೆದ ದಿನಾಂಕದ ವರೆಗೆ ಆರೋಪಿ ಹೊಂದಿದ್ದ ಎಂದು ತೀರ್ಪು ನೀಡಿತ್ತು.
ಸುದೀರ್ಘ ವಿಚಾರಣೆ ಬಳಿಕ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ. ಜಕಾತಿ ಇಂದು ಶಿಕ್ಷೆ ಪ್ರಕಟಿಸಿದ್ದಾರೆ. ಭ್ರಷ್ಟಾಚಾರ ನಿಗ್ರಹ ಖಾಯಿದೆಯ ಕಲಂ 13 (1) (ಇ) ರ ಜೊತೆಗೆ 13(2) ರ ಅಡಿಯಲ್ಲಿ ಆರೋಪಿ ಶಿವರಾಜು ಅಪರಾಧ ಎಸಗಿದ್ದಾರೆಂದು 104 ಪುಟಗಳ ಆದೇಶದಲ್ಲಿ ತೀರ್ಪು ನೀಡಿದ್ದಾರೆ.
ಆರೋಪಿಯು ಅಸೌಖ್ಯದ ಕಾರಣ ನೀಡಿ ಶಿಕ್ಷೆ ಪ್ರಮಾಣ ಕಡಿಮೆ ಮಾಡಬೇಕೆಂದು ನ್ಯಾಯಾಲಯದಲ್ಲಿ ಬೇಡಿಕೆ ಸಲ್ಲಿಸಿದ್ದ. ಅದರೆ ವಿಶೇಷ ಸರಕಾರಿ ಅಭಿಯೋಜಕ ಪ್ರಬಲ ವಾದ ಮಂಡಿಸಿ ಭ್ರಷ್ಟಾಚಾರ ಪ್ರಕರಣವಾದ್ದರಿಂದ ಗರಿಷ್ಠ ಶಿಕ್ಷೆ ವಿಧಿಸುವಂತೆ ನ್ಯಾಯಾಲಯವನ್ನ ಕೋರಿದರು. ನ್ಯಾಯಾಧೀಶರು, ಅಪರಾಧಿಗೆ 5 ವರ್ಷ ಸಾದಾ ಸಜೆ ಮತ್ತು ರೂ 34,00,000/-ದಂಡ, ದಂಡ ತೆರಲು ತಪ್ಪಿದಲ್ಲಿ ಒಂದು ವರ್ಷ ಹೆಚ್ಚುವರಿ ಸಾದಾ ಸಜೆ ವಿಧಿಸಿದ್ದಾರೆ. ಅಲ್ಲದೆ, ತಮ್ಮ ಆದೇಶದಲ್ಲಿ ಭ್ರಷ್ಟಾಚಾರ ಎಂಬುದು ಸಮಾಜದಲ್ಲಿ ಕ್ಯಾನ್ಸರ್ ಪಿಡುಗಿನಂತೆ ಆಗಿದ್ದು ಅಪರಾಧಿಗೆ ಯಾವುದೇ ರಿಯಾಯಿತಿ ನೀಡುವುದು ಸರಿಯಲ್ಲ. ಮತ್ತು ಹದಿನಾಲ್ಕು ವರ್ಷಗಳಲ್ಲಿ ಅಕ್ರಮವಾಗಿ ರೂ. 17,00,000 ಆಸ್ತಿ ಮಾಡಿದ್ದರಿಂದ ಅದರ ಎರಡು ಪಟ್ಟು ದಂಡ ವಿಧಿಸುವುದು ಸೂಕ್ತ ಎಂದು 34,00,000 ರೂ. ದಂಡ ಪಾವತಿಸಲು ಆದೇಶಿಸಿದ್ದಾರೆ. ಭ್ರಷ್ಟಾಚಾರ ಪ್ರಕರಣಗಳಲ್ಲಿ ಅತ್ಯಂತ ಅಪರೂಪಕ್ಕೆ ಈ ರೀತಿಯ ಶಿಕ್ಷೆ ವಿಧಿಸಲಾಗಿದೆ. ಅಪರಾಧಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Mangalore city corporation Assistant Town planning BP Shivaraj found guilty in a corruption case in which Lokayukta court has ordered five years of jail term and fine of Rs 34 lakhs.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am