ಬ್ರೇಕಿಂಗ್ ನ್ಯೂಸ್
26-07-21 05:45 pm Mangalore Correspondent ಕರಾವಳಿ
ಮಂಗಳೂರು, ಜುಲೈ 26: ಆದಾಯ ಮೀರಿ ಅಪಾರ ಆಸ್ತಿ ಗಳಿಸಿದ್ದ ಮಂಗಳೂರು ಮಹಾನಗರ ಪಾಲಿಕೆಯ ಸಹಾಯಕ ಟೌನ್ ಪ್ಲಾನಿಂಗ್ ಆಫೀಸರ್ ಬಿ.ಪಿ. ಶಿವರಾಜುಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಐದು ವರ್ಷಗಳ ಶಿಕ್ಷೆ ಘೋಷಣೆ ಮಾಡಿದೆ.
2007ರ ಜುಲೈ 25 ರಂದು ಆಗಿನ ಲೋಕಾಯುಕ್ತ ಇನ್ಸ್ಪೆಕ್ಟರ್ ಪ್ರಸನ್ನ ವಿ. ರಾಜು ಮಾಹಿತಿ ಕಲೆ ಹಾಕಿದ್ದು, ಆಗಿನ ಲೋಕಾಯುಕ್ತ ಉಪಾಧೀಕ್ಷಕ ಪ್ರಭುದೇವ ಮಾಣೆ ಮತ್ತು ಅವರ ತಂಡ ಟೌನ್ ಪ್ಲಾನಿಂಗ್ ಅಧಿಕಾರಿ ಶಿವರಾಜು ಕುರಿತ ವಿವಿಧ ಕಡೆಯ ಆಸ್ತಿಗಳಿಗೆ ದಾಳಿ ನಡೆಸಿತ್ತು. ದಾಳಿ ಬಳಿಕ ಹಲವು ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದರು. ಸುಮಾರು ಮೂವತ್ತೆಂಟು ಲಕ್ಷದಷ್ಟು ಆದಾಯಕ್ಕಿಂತ ಹೆಚ್ಚಿನ ಆಸ್ತಿ ಪತ್ತೆಯಾಗಿತ್ತು. ತನಿಖೆಯನ್ನು ಪೂರ್ಣಗೊಳಿಸಿ ಡಿವೈಎಸ್ಪಿ ಆಗಿದ್ದ ಡಾ. ಪ್ರಭುದೇವ್ ಮಾಣೆ ಆರೋಪಿ ಶಿವರಾಜು ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಅಭಿಯೋಜನೆಯ ಪರವಾಗಿ 27 ಸಾಕ್ಷಿದಾರರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು ಹಾಗೂ 160 ದಾಖಲೆಗಳನ್ನು ಹಾಜರು ಪಡಿಸಲಾಗಿತ್ತು. ವಿಚಾರಣೆ ನಡೆಸಿದ ಮಂಗಳೂರು ಲೋಕಾಯುಕ್ತ ವಿಶೇಷ ನ್ಯಾಯಾಲಯವು ವಿಶೇಷ ಸರಕಾರಿ ಅಭಿಯೋಜಕ ಕೆ. ಎಸ್. ಎನ್. ರಾಜೇಶ್ ವಾದವನ್ನು ಪುರಸ್ಕರಿಸಿ, ಆರೋಪ ಸಾಬೀತಾಗಿದೆ ಎಂದು ತೀರ್ಮಾನಕ್ಕೆ ಬಂದಿದ್ದು, ಹದಿನೇಳು ಲಕ್ಷದಷ್ಟು ಆದಾಯಕ್ಕಿಂತ ಹೆಚ್ಚಿನ ಆಸ್ತಿಯನ್ನು ಸೇವೆಗೆ ಸೇರಿದ ವರ್ಷದಿಂದ ದಾಳಿ ನಡೆದ ದಿನಾಂಕದ ವರೆಗೆ ಆರೋಪಿ ಹೊಂದಿದ್ದ ಎಂದು ತೀರ್ಪು ನೀಡಿತ್ತು.
ಸುದೀರ್ಘ ವಿಚಾರಣೆ ಬಳಿಕ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ. ಜಕಾತಿ ಇಂದು ಶಿಕ್ಷೆ ಪ್ರಕಟಿಸಿದ್ದಾರೆ. ಭ್ರಷ್ಟಾಚಾರ ನಿಗ್ರಹ ಖಾಯಿದೆಯ ಕಲಂ 13 (1) (ಇ) ರ ಜೊತೆಗೆ 13(2) ರ ಅಡಿಯಲ್ಲಿ ಆರೋಪಿ ಶಿವರಾಜು ಅಪರಾಧ ಎಸಗಿದ್ದಾರೆಂದು 104 ಪುಟಗಳ ಆದೇಶದಲ್ಲಿ ತೀರ್ಪು ನೀಡಿದ್ದಾರೆ.
ಆರೋಪಿಯು ಅಸೌಖ್ಯದ ಕಾರಣ ನೀಡಿ ಶಿಕ್ಷೆ ಪ್ರಮಾಣ ಕಡಿಮೆ ಮಾಡಬೇಕೆಂದು ನ್ಯಾಯಾಲಯದಲ್ಲಿ ಬೇಡಿಕೆ ಸಲ್ಲಿಸಿದ್ದ. ಅದರೆ ವಿಶೇಷ ಸರಕಾರಿ ಅಭಿಯೋಜಕ ಪ್ರಬಲ ವಾದ ಮಂಡಿಸಿ ಭ್ರಷ್ಟಾಚಾರ ಪ್ರಕರಣವಾದ್ದರಿಂದ ಗರಿಷ್ಠ ಶಿಕ್ಷೆ ವಿಧಿಸುವಂತೆ ನ್ಯಾಯಾಲಯವನ್ನ ಕೋರಿದರು. ನ್ಯಾಯಾಧೀಶರು, ಅಪರಾಧಿಗೆ 5 ವರ್ಷ ಸಾದಾ ಸಜೆ ಮತ್ತು ರೂ 34,00,000/-ದಂಡ, ದಂಡ ತೆರಲು ತಪ್ಪಿದಲ್ಲಿ ಒಂದು ವರ್ಷ ಹೆಚ್ಚುವರಿ ಸಾದಾ ಸಜೆ ವಿಧಿಸಿದ್ದಾರೆ. ಅಲ್ಲದೆ, ತಮ್ಮ ಆದೇಶದಲ್ಲಿ ಭ್ರಷ್ಟಾಚಾರ ಎಂಬುದು ಸಮಾಜದಲ್ಲಿ ಕ್ಯಾನ್ಸರ್ ಪಿಡುಗಿನಂತೆ ಆಗಿದ್ದು ಅಪರಾಧಿಗೆ ಯಾವುದೇ ರಿಯಾಯಿತಿ ನೀಡುವುದು ಸರಿಯಲ್ಲ. ಮತ್ತು ಹದಿನಾಲ್ಕು ವರ್ಷಗಳಲ್ಲಿ ಅಕ್ರಮವಾಗಿ ರೂ. 17,00,000 ಆಸ್ತಿ ಮಾಡಿದ್ದರಿಂದ ಅದರ ಎರಡು ಪಟ್ಟು ದಂಡ ವಿಧಿಸುವುದು ಸೂಕ್ತ ಎಂದು 34,00,000 ರೂ. ದಂಡ ಪಾವತಿಸಲು ಆದೇಶಿಸಿದ್ದಾರೆ. ಭ್ರಷ್ಟಾಚಾರ ಪ್ರಕರಣಗಳಲ್ಲಿ ಅತ್ಯಂತ ಅಪರೂಪಕ್ಕೆ ಈ ರೀತಿಯ ಶಿಕ್ಷೆ ವಿಧಿಸಲಾಗಿದೆ. ಅಪರಾಧಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Mangalore city corporation Assistant Town planning BP Shivaraj found guilty in a corruption case in which Lokayukta court has ordered five years of jail term and fine of Rs 34 lakhs.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm