ಬ್ರೇಕಿಂಗ್ ನ್ಯೂಸ್
26-07-21 05:45 pm Mangalore Correspondent ಕರಾವಳಿ
ಮಂಗಳೂರು, ಜುಲೈ 26: ಆದಾಯ ಮೀರಿ ಅಪಾರ ಆಸ್ತಿ ಗಳಿಸಿದ್ದ ಮಂಗಳೂರು ಮಹಾನಗರ ಪಾಲಿಕೆಯ ಸಹಾಯಕ ಟೌನ್ ಪ್ಲಾನಿಂಗ್ ಆಫೀಸರ್ ಬಿ.ಪಿ. ಶಿವರಾಜುಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಐದು ವರ್ಷಗಳ ಶಿಕ್ಷೆ ಘೋಷಣೆ ಮಾಡಿದೆ.
2007ರ ಜುಲೈ 25 ರಂದು ಆಗಿನ ಲೋಕಾಯುಕ್ತ ಇನ್ಸ್ಪೆಕ್ಟರ್ ಪ್ರಸನ್ನ ವಿ. ರಾಜು ಮಾಹಿತಿ ಕಲೆ ಹಾಕಿದ್ದು, ಆಗಿನ ಲೋಕಾಯುಕ್ತ ಉಪಾಧೀಕ್ಷಕ ಪ್ರಭುದೇವ ಮಾಣೆ ಮತ್ತು ಅವರ ತಂಡ ಟೌನ್ ಪ್ಲಾನಿಂಗ್ ಅಧಿಕಾರಿ ಶಿವರಾಜು ಕುರಿತ ವಿವಿಧ ಕಡೆಯ ಆಸ್ತಿಗಳಿಗೆ ದಾಳಿ ನಡೆಸಿತ್ತು. ದಾಳಿ ಬಳಿಕ ಹಲವು ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದರು. ಸುಮಾರು ಮೂವತ್ತೆಂಟು ಲಕ್ಷದಷ್ಟು ಆದಾಯಕ್ಕಿಂತ ಹೆಚ್ಚಿನ ಆಸ್ತಿ ಪತ್ತೆಯಾಗಿತ್ತು. ತನಿಖೆಯನ್ನು ಪೂರ್ಣಗೊಳಿಸಿ ಡಿವೈಎಸ್ಪಿ ಆಗಿದ್ದ ಡಾ. ಪ್ರಭುದೇವ್ ಮಾಣೆ ಆರೋಪಿ ಶಿವರಾಜು ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಅಭಿಯೋಜನೆಯ ಪರವಾಗಿ 27 ಸಾಕ್ಷಿದಾರರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು ಹಾಗೂ 160 ದಾಖಲೆಗಳನ್ನು ಹಾಜರು ಪಡಿಸಲಾಗಿತ್ತು. ವಿಚಾರಣೆ ನಡೆಸಿದ ಮಂಗಳೂರು ಲೋಕಾಯುಕ್ತ ವಿಶೇಷ ನ್ಯಾಯಾಲಯವು ವಿಶೇಷ ಸರಕಾರಿ ಅಭಿಯೋಜಕ ಕೆ. ಎಸ್. ಎನ್. ರಾಜೇಶ್ ವಾದವನ್ನು ಪುರಸ್ಕರಿಸಿ, ಆರೋಪ ಸಾಬೀತಾಗಿದೆ ಎಂದು ತೀರ್ಮಾನಕ್ಕೆ ಬಂದಿದ್ದು, ಹದಿನೇಳು ಲಕ್ಷದಷ್ಟು ಆದಾಯಕ್ಕಿಂತ ಹೆಚ್ಚಿನ ಆಸ್ತಿಯನ್ನು ಸೇವೆಗೆ ಸೇರಿದ ವರ್ಷದಿಂದ ದಾಳಿ ನಡೆದ ದಿನಾಂಕದ ವರೆಗೆ ಆರೋಪಿ ಹೊಂದಿದ್ದ ಎಂದು ತೀರ್ಪು ನೀಡಿತ್ತು.
ಸುದೀರ್ಘ ವಿಚಾರಣೆ ಬಳಿಕ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ. ಜಕಾತಿ ಇಂದು ಶಿಕ್ಷೆ ಪ್ರಕಟಿಸಿದ್ದಾರೆ. ಭ್ರಷ್ಟಾಚಾರ ನಿಗ್ರಹ ಖಾಯಿದೆಯ ಕಲಂ 13 (1) (ಇ) ರ ಜೊತೆಗೆ 13(2) ರ ಅಡಿಯಲ್ಲಿ ಆರೋಪಿ ಶಿವರಾಜು ಅಪರಾಧ ಎಸಗಿದ್ದಾರೆಂದು 104 ಪುಟಗಳ ಆದೇಶದಲ್ಲಿ ತೀರ್ಪು ನೀಡಿದ್ದಾರೆ.
ಆರೋಪಿಯು ಅಸೌಖ್ಯದ ಕಾರಣ ನೀಡಿ ಶಿಕ್ಷೆ ಪ್ರಮಾಣ ಕಡಿಮೆ ಮಾಡಬೇಕೆಂದು ನ್ಯಾಯಾಲಯದಲ್ಲಿ ಬೇಡಿಕೆ ಸಲ್ಲಿಸಿದ್ದ. ಅದರೆ ವಿಶೇಷ ಸರಕಾರಿ ಅಭಿಯೋಜಕ ಪ್ರಬಲ ವಾದ ಮಂಡಿಸಿ ಭ್ರಷ್ಟಾಚಾರ ಪ್ರಕರಣವಾದ್ದರಿಂದ ಗರಿಷ್ಠ ಶಿಕ್ಷೆ ವಿಧಿಸುವಂತೆ ನ್ಯಾಯಾಲಯವನ್ನ ಕೋರಿದರು. ನ್ಯಾಯಾಧೀಶರು, ಅಪರಾಧಿಗೆ 5 ವರ್ಷ ಸಾದಾ ಸಜೆ ಮತ್ತು ರೂ 34,00,000/-ದಂಡ, ದಂಡ ತೆರಲು ತಪ್ಪಿದಲ್ಲಿ ಒಂದು ವರ್ಷ ಹೆಚ್ಚುವರಿ ಸಾದಾ ಸಜೆ ವಿಧಿಸಿದ್ದಾರೆ. ಅಲ್ಲದೆ, ತಮ್ಮ ಆದೇಶದಲ್ಲಿ ಭ್ರಷ್ಟಾಚಾರ ಎಂಬುದು ಸಮಾಜದಲ್ಲಿ ಕ್ಯಾನ್ಸರ್ ಪಿಡುಗಿನಂತೆ ಆಗಿದ್ದು ಅಪರಾಧಿಗೆ ಯಾವುದೇ ರಿಯಾಯಿತಿ ನೀಡುವುದು ಸರಿಯಲ್ಲ. ಮತ್ತು ಹದಿನಾಲ್ಕು ವರ್ಷಗಳಲ್ಲಿ ಅಕ್ರಮವಾಗಿ ರೂ. 17,00,000 ಆಸ್ತಿ ಮಾಡಿದ್ದರಿಂದ ಅದರ ಎರಡು ಪಟ್ಟು ದಂಡ ವಿಧಿಸುವುದು ಸೂಕ್ತ ಎಂದು 34,00,000 ರೂ. ದಂಡ ಪಾವತಿಸಲು ಆದೇಶಿಸಿದ್ದಾರೆ. ಭ್ರಷ್ಟಾಚಾರ ಪ್ರಕರಣಗಳಲ್ಲಿ ಅತ್ಯಂತ ಅಪರೂಪಕ್ಕೆ ಈ ರೀತಿಯ ಶಿಕ್ಷೆ ವಿಧಿಸಲಾಗಿದೆ. ಅಪರಾಧಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Mangalore city corporation Assistant Town planning BP Shivaraj found guilty in a corruption case in which Lokayukta court has ordered five years of jail term and fine of Rs 34 lakhs.
27-05-26 04:58 pm
HK News Staffer
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 01:30 pm
HK News Staffer
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm