ಬ್ರೇಕಿಂಗ್ ನ್ಯೂಸ್
27-07-21 02:23 pm Mangalore Correspondent ಕರಾವಳಿ
ಮಂಗಳೂರು, ಜುಲೈ 27: ಕುಸಿದು ನಿಂತಿದ್ದ ಮರವೂರು ಸೇತುವೆಯನ್ನು ಮತ್ತೆ ಎತ್ತರಿಸುವ ಕೆಲಸ ಮಾಡಲಾಗಿದ್ದು, ದುರಸ್ತಿ ಕಾಮಗಾರಿ ಪೂರ್ಣಗೊಂಡಿದೆ. ಮಂಗಳೂರಿನಿಂದ ಬಜ್ಪೆ ಏರ್ಪೋರ್ಟ್ ಮತ್ತು ಕಟೀಲು ಕಡೆಗೆ ಸಂಪರ್ಕಿಸುವ ರಾಜ್ಯ ಹೆದ್ದಾರಿ ತಿಂಗಳ ಹಿಂದೆ ಕುಸಿದಿತ್ತು. ಇನ್ನೊಂದು ಹೊಸ ಸೇತುವೆ ನಿರ್ಮಾಣ ಸಂದರ್ಭದಲ್ಲಿ ನದಿಗೆ ಮಣ್ಣು ಹಾಕಿದ್ದರಿಂದ ಒಂದು ಭಾಗದಲ್ಲಿ ಮಾತ್ರ ನೀರು ರಭಸವಾಗಿ ಹರಿದ ಪರಿಣಾಮ ಅಲ್ಲಿನ ಹಳೆ ಸೇತುವೆಯ ಪಿಲ್ಲರ್ ಕುಸಿದು ನಿಂತಿತ್ತು. ಹೀಗಾಗಿ ಸೇತುವೆ ಎರಡು ಪಿಲ್ಲರ್ ಗಳ ನಡುವೆ ಒಂದೂವರೆ ಅಡಿಯಷ್ಟು ಸ್ಲಾಬ್ ಕುಸಿದಿತ್ತು.




ಇದೀಗ ಸೇತುವೆಯನ್ನು ಪರ್ಯಾಯ ಇಂಜಿನಿಯರಿಂಗ್ ಕೆಲಸದ ಮೂಲಕ ಎತ್ತರಿಸಲಾಗಿದ್ದು, ತಾತ್ಕಾಲಿಕವಾಗಿ ವಾಹನ ಸಂಚಾರಕ್ಕೆ ಅನುವಾಗುವಂತೆ ಮಾಡಲಾಗಿದೆ. ಪಿಡಬ್ಲ್ಯುಡಿ ಇಲಾಖೆಯ ಇಂಜಿನಿಯರುಗಳು ಮತ್ತು ಅಧಿಕಾರಿಗಳ ಸಲಹೆಯಂತೆ ಮುಗ್ರೋಡಿ ಕನ್ ಸ್ಟ್ರಕ್ಷನ್ ಕಂಪನಿಯವರೇ ಈ ಕೆಲಸವನ್ನು ಮಾಡಿದ್ದಾರೆ. ಕಾಮಗಾರಿ ಪೂರ್ಣಗೊಂಡಿದ್ದು, ಜುಲೈ 30ರಿಂದ ಲಘು ವಾಹನಗಳ ಸಂಚಾರಕ್ಕೆ ಮುಕ್ತ ಮಾಡುವ ಸಾಧ್ಯತೆಯಿದೆ.




ಜುಲೈ 29ರಂದು ಸೇತುವೆಯಲ್ಲಿ ಬಸ್ ಸೇರಿದಂತೆ ಲಘು ವಾಹನಗಳು ಸಾಗಬಹುದೇ ಎನ್ನುವ ಬಗ್ಗೆ ಪಿಡಬ್ಲ್ಯುಡಿ ಇಲಾಖೆಯ ಅಧಿಕಾರಿಗಳು ಪರೀಕ್ಷೆ ನಡೆಸಲಿದ್ದಾರೆ. ಆನಂತರವಷ್ಟೇ ವಾಹನಗಳು ಸಾಗುವುದಕ್ಕೆ ಅವಕಾಶ ನೀಡುವ ಬಗ್ಗೆ ನಿರ್ಧರಿಸಲಿದ್ದಾರೆ. ಕಳೆದ ಜೂನ್ 15ರಂದು ರಾತ್ರಿ ಭಾರೀ ಮಳೆಯ ನಡುವೆ ಸೇತುವೆಯ ಒಂದು ಭಾಗದಲ್ಲಿ ಬಿರುಕು ಬಿಟ್ಟಿದ್ದು ಕಂಡುಬಂದಿತ್ತು. ಆನಂತರ ಅಲ್ಲಿಂದ ವಾಹನ ಸಂಚಾರವನ್ನು ಕಡಿತ ಮಾಡಲಾಗಿತ್ತು. ಇದರಿಂದಾಗಿ ಬಜ್ಪೆ ವಿಮಾನ ನಿಲ್ದಾಣ, ಕಟೀಲು, ಅದ್ಯಪಾಡಿಗೆ ತೆರಳುವವರು ಸಂಚಾರಕ್ಕೆ ತೊಂದರೆಗೀಡಾಗಿದ್ದರು. ಮಂಗಳೂರಿನಿಂದ ತೆರಳುವ ಮಂದಿ ಜೋಕಟ್ಟೆ ಅಥವಾ ಕೈಕಂಬದ ಮೂಲಕ ಸುತ್ತುಬಳಸಿ ಬಜ್ಪೆಗೆ ತೆರಳಬೇಕಾಗಿತ್ತು.
Repair and restoration work on a pillar of the Maravoor bridge built across River Phalguni on Mangaluru-Atrady state highway that had jerked a little has almost been finished. The bridge is likely to be thrown open for light motor vehicle movement from July 30 onwards.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm