ಬ್ರೇಕಿಂಗ್ ನ್ಯೂಸ್
29-07-21 10:41 pm Udupi Correspondent ಕರಾವಳಿ
ಉಡುಪಿ, ಜುಲೈ 29: ನಾನು ಸಚಿವ ಸ್ಥಾನವನ್ನು ಯಾರ ಬಳಿಯೂ ಕೇಳಲು ಹೋಗುವುದಿಲ್ಲ. ನನ್ನ ಶ್ವಾಸ ಇರೋ ವರೆಗೂ ನಾನು ಬೆಂಗಳೂರಿಗೆ ಸಚಿವ ಸ್ಥಾನ ಕೇಳಲು ಹೋಗುವುದಿಲ್ಲ. ಯಾರ ಕಾಲಿಗೂ ಬೀಳುವುದಿಲ್ಲ. ಯಾವ ನಾಯಕನ ಹಿಂದೆ ಸುತ್ತಿಕೊಂಡು ತಿರುಗಾಡೋಕೂ ಹೋಗುವುದಿಲ್ಲ. ಹೀಗೆಂದು ಕುಂದಾಪುರದ ವಾಜಪೇಯಿ ಅಂತಲೇ ಹೆಸರಾಗಿರುವ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಶಪಥ ಮಾಡಿದ್ದಾರೆ.
ನಾನು ರಾಜಕೀಯದಲ್ಲಿ ಸಮತೋಲನ ಕಳೆದುಕೊಳ್ಳುವುದಿಲ್ಲ. ನಾನು ರಾಜಕೀಯದಲ್ಲಿ ಸ್ವಾಭಿಮಾನ ಬಿಟ್ಟಿಲ್ಲ. ಬಿಡೋದೂ ಇಲ್ಲ. ಈ ಹಿಂದೆ ನನ್ನನ್ನು ಕರೆದು ತಪ್ಪು ಮಾಡಿದ್ದರು. ಆಗಲೂ ನಾನು ಸಚಿವ ಸ್ಥಾನ ಕೇಳಿರಲಿಲ್ಲ.
ರಾಜಕೀಯ ಲಾಬಿ ಜಾತಿವಾದಿತನ ಕೆಲಸ ನಾನು ಮಾಡುವುದಿಲ್ಲ. ಯಾರ ಕಾಲಿಗೂ ಬಿದ್ದು ನಾನು ಕೆಲಸ ತೆಗೆದುಕೊಳ್ಳುವುದಿಲ್ಲ. ಕೆಲಸ ಕೊಟ್ಟರೆ ನಾನು ಅದನ್ನು ನಿಭಾಯಿಸುತ್ತೇನೆ. ಹಾಗಂತ, ನಾನು ಮಂತ್ರಿಯಾದರೆ ಸರಕಾರಿ ಕಾರು ತೆಗೆದುಕೊಳ್ಳುವುದಿಲ್ಲ. ನಾನು ಪೊಲೀಸರ ಎಸ್ಕಾರ್ಟ್ ತೆಗೆದುಕೊಳ್ಳುವುದಿಲ್ಲ. ನಾನು ಗನ್ ಮ್ಯಾನ್ ಇಟ್ಟುಕೊಳ್ಳುವುದೂ ಇಲ್ಲ ಎಂದು ಶ್ರೀನಿವಾಸ ಶೆಟ್ಟಿ ಹೇಳಿದ್ದಾರೆ.
ನನಗೆ ಈವರೆಗೆ ಯಾವುದೇ ಕರೆಗಳು, ಮಾಹಿತಿಗಳು ಬಂದಿಲ್ಲ. ಕರೆ ಬಂದರೆ ನಾನು ಇದನ್ನು ಹೇಳಲು ಸಿದ್ದ ಇದ್ದೇನೆ. ಹಾಗೆಂದು ನನ್ನನ್ನು ಹೆಡ್ಡ ರಾಜಕಾರಣಿ ಅನ್ನಬೇಡಿ. ನನ್ನದು ನೇರನುಡಿಯ ರಾಜಕಾರಣ. ದುರಹಂಕಾರ ಅಲ್ಲ, ನಾನು ಯಾರ ಭಯದಲ್ಲೂ ಇಲ್ಲ. ಮತದಾರರ ಮತ್ತು ಕಾರ್ಯಕರ್ತರ ಋಣದಲ್ಲಿ ಮಾತ್ರ ನಾನಿರೋದು. ಯಾರನ್ನೋ ಕೇಳಿ ಸಚಿವ ಸ್ಥಾನವನ್ನ ಪಡೆಯುವುದು ಪ್ರಜಾಪ್ರಭುತ್ವ ವ್ಯವಸ್ಥೆ ಅಲ್ಲ. ಕೇಳಿ ಅಧಿಕಾರವನ್ನು ಪಡೆಯುವುದು ಪ್ರಜಾಪ್ರಭುತ್ವ ವ್ಯವಸ್ಥೆಯೇ ಅಲ್ಲ.
ನಾನು ಜಾತ್ಯಾತೀತ ರಾಜಕಾರಣಿ. ನನ್ನ ಹುಟ್ಟಿನಿಂದ ನಾನು ಜಾತಿ ಸಂಘಕ್ಕೆ ಹೋಗಿಲ್ಲ. ಪ್ರಬಲ ಜಾತಿಯಲ್ಲಿ ಹುಟ್ಟಿದ್ದು ಆಕಸ್ಮಿಕ. ಎಲ್ಲಾ ಜಾತಿಯವರು ಮತ ಹಾಕಿ ನನ್ನನ್ನು ಗೆಲ್ಲಿಸಿದ್ದಾರೆ. ಒಂದು ಜಾತಿಯ ಉದ್ದಾರಕ್ಕಾಗಿ ಜನ ನನ್ನನ್ನು ಗೆಲ್ಲಿಸಿದ್ದಲ್ಲ. ಜಾತಿವಾದಿಗಳು ಜಾತಿಯ ಸಂಘಕ್ಕೆ ಸಚಿವರಾಗಬೇಕು. ಜಾತಿವಾದಿಗಳು ಯಾವುದೇ ಕಾರಣಕ್ಕೂ ಶಾಸಕರಾಗಬಾರದು. ಜಾತಿವಾದಿಗಳು ಸಾರ್ವತ್ರಿಕ ಚುನಾವಣೆಗೆ ಬರಬಾರದು. ನನ್ನಲ್ಲಿ ಯಾವುದೇ ನಾಟಕೀಯ ಮಾತುಗಳು ಇಲ್ಲ. ಉಪಯೋಗಕ್ಕೆ ಇಲ್ಲದ್ದನ್ನ ಕೊಟ್ಟರೆ ಕಿಸೆಗೆ ಹಾಕಿಕೊಂಡು ಬರುವುದಿಲ್ಲ. ಶಾಸಕರು ಹೆರಿಗೆ ಕೋಣೆಯ ದಾದಿಯ ರೀತಿಯಲ್ಲಿ ಕೆಲಸ ಮಾಡಬೇಕು ಎಂದು ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲೊಂದು ಓಯಸಿಸ್ ಅನ್ನುವ ರೀತಿ ಮಾರ್ಮಿಕ ಮಾತುಗಳನ್ನು ಆಡಿದ್ದಾರೆ.
ಕುಂದಾಪುರ ಕ್ಷೇತ್ರದಲ್ಲಿ ಬಿಜೆಪಿಯಿಂದ ನಾಲ್ಕು ಬಾರಿ ಮತ್ತು ಒಮ್ಮೆ ಪಕ್ಷೇತರನಾಗಿ ಸ್ಪರ್ಧಿಸಿ ಗೆದ್ದಿರುವ ಹಾಲಾಡಿ ಶ್ರೀನಿವಾಸ ಶೆಟ್ಟಿಯವರಿಗೆ ಈವರೆಗೂ ಸಚಿವ ಸ್ಥಾನ ಸಿಕ್ಕಿಲ್ಲ. ಶೆಟ್ಟರಿಗೆ ಈ ಬಾರಿಯಾದರೂ ಸಚಿವ ಸ್ಥಾನ ಸಿಗಲೇಬೇಕು ಎಂದು ಜಾಲತಾಣದಲ್ಲಿ ಅಭಿಯಾನ ಆರಂಭಗೊಂಡಿದೆ.
New cabinet expansion Kundapura MLA Halady Srinivas Shetty says wont beg for any post. Karnataka chief minister Basavaraj Bommai on Thursday hinted at a delay in the state cabinet’s expansion and said that the decision regarding it will be taken following his meeting with the Bharatiya Janata Party’s (BJP) central leadership in Delhi.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am