ಬ್ರೇಕಿಂಗ್ ನ್ಯೂಸ್
30-07-21 12:18 pm Mangaluru Correspondent ಕರಾವಳಿ
ಬಂಟ್ವಾಳ, ಜುಲೈ 30: ತಾಲೂಕಿನ ಬ್ರಹ್ಮರಕೂಟ್ಲು ಬಳಿಯ ಕಳ್ಳಿಗೆ ಗ್ರಾಮದಲ್ಲಿ ಯುವಕನೊಬ್ಬನ ಶವ ರೈಲು ಬಡಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಕಳ್ಳಿಗೆ ಗ್ರಾಮದ ದೇವಂದಬೆಟ್ಟು ನಿವಾಸಿ ಕಾರ್ತಿಕ್ (25) ನಿನ್ನೆ ಸಂಜೆ ಮನೆಯಿಂದ ಹೊರಗೆ ತೆರಳಿದ್ದ. ರಾತ್ರಿ 11 ಗಂಟೆಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಮನೆಯವರು ಹುಡುಕಾಟ ನಡೆಸಿದ್ದರು. ಫೋನ್ ಕೂಡ ಸ್ವಿಚ್ ಆಫ್ ಆಗಿತ್ತು. ಮುಂಜಾನೆ 3 ಗಂಟೆಯ ವೇಳೆಗೆ ಕಾರ್ತಿಕ್ ಮೃತದೇಹ ಮನೆ ಬಳಿಯ ದೇವಂದಬೆಟ್ಟು ಪರಿಸರದ ರೈಲ್ವೇ ಹಳಿಯಲ್ಲಿ ಪತ್ತೆಯಾಗಿದೆ. ರೈಲು ಬಡಿದು ದೂರಕ್ಕೆ ಎಸೆಯಲ್ಪಟ್ಟ ರೀತಿ ಶವ ಕಂಡುಬಂದಿದೆ. ಕೈ ತುಂಡಾಗಿ ದೂರಕ್ಕೆ ಬಿದ್ದಿದ್ದರೆ, ತಲೆಯ ಹಿಂಭಾಗ ಒಡೆದ ಸ್ಥಿತಿಯಲ್ಲಿ ದೇಹ ಮತ್ತೊಂದು ಕಡೆಗೆ ಬಿದ್ದಿತ್ತು.
ಬಂಟ್ವಾಳ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಬಂದಿದ್ದು ಪರಿಶೀಲನೆ ನಡೆಸಿದ್ದಾರೆ. ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಸ್ಥಳೀಯರ ಬಳಿ, ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆಯೇ ಅಥವಾ ಯಾರಾದ್ರೂ ರೈಲು ಹಳಿಗೆ ತಳ್ಳಿ ಕೊಲೆ ಮಾಡಿದ್ದಾರೆಯೇ ಎಂಬ ಪ್ರಶ್ನೆಗೆ ಸೂಕ್ತ ಉತ್ತರ ದೊರಕಿಲ್ಲ. ಕೊಲೆ ಅಥವಾ ಆತ್ಮಹತ್ಯೆ ಸಾಧ್ಯತೆ ಇಲ್ಲ ಎನ್ನುತ್ತಾರೆ ಸ್ಥಳೀಯರು. ಕಾರ್ತಿಕ್ ಸಾಮಾನ್ಯವಾಗಿ ಮನೆ ಬಳಿಯಿರುವ ರೈಲು ಹಳಿಯಲ್ಲಿ ಸಂಜೆ ಹೊತ್ತಿಗೆ ಕುಳಿತುಕೊಳ್ಳುವ ಅಭ್ಯಾಸ ಇಟ್ಟುಕೊಂಡಿದ್ದ. ಕಿವಿಗೆ ಇಯರ್ ಫೋನ್ ಹಾಕ್ಕೊಂಡು ಮಾತಾಡುತ್ತಿದ್ದ ವೇಳೆ ರೈಲು ಬಂದು ಡಿಕ್ಕಿಯಾಗಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ನೇರವಾಗಿ ಹಳಿಗೆ ಬೀಳುತ್ತಿದ್ದರೆ ಶವ ಪೂರ್ತಿ ಛಿದ್ರ ಆಗುತ್ತಿತ್ತು. ಇಲ್ಲಿ ರೈಲು ಬಡಿದು ದೂರಕ್ಕೆ ಎಸೆಯಲ್ಪಟ್ಟ ರೀತಿ ಶವ ಕಂಡುಬಂದಿದ್ದು ಅಕಸ್ಮಾತ್ ಘಟನೆ ಸಂಭವಿಸಿದ ಬಗ್ಗೆ ಸಂಶಯ ಕಂಡುಬಂದಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
The mortal remains of a youth was found on the railway track at Devandabettu here in the wee hours of Friday July 30. Suspicion behind the death is expressed by the family members of the deceased. The deceased has been identified as Karthik (25), son of Laxman of Kallige village.
07-08-25 10:18 pm
Bangalore Correspondent
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
07-08-25 11:01 pm
Mangalore Correspondent
ಉಳ್ಳಾಲದಲ್ಲಿ ನಿಯಂತ್ರಣ ತಪ್ಪಿ ಆವರಣ ಗೋಡೆಗೆ ಬಡಿದ ಸ...
07-08-25 10:45 pm
ಧರ್ಮಸ್ಥಳ ; 13ನೇ ಪಾಯಿಂಟ್ ಬಗ್ಗೆ ಕುತೂಹಲ, ಅಸ್ಥಿ ಪ...
07-08-25 10:29 pm
Surathkal-Nanthoor highway: ಇಂದಿನಿಂದ ಆ.13ರ ವರ...
07-08-25 07:55 pm
Dharmasthala, Attack on YouTubers: ಯೂಟ್ಯೂಬರ್...
07-08-25 03:26 pm
07-08-25 08:59 pm
Bangalore Correspondent
Kudla Rampage Attack, Ajay Anchan, Dharmastha...
06-08-25 08:02 pm
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am