ಬ್ರೇಕಿಂಗ್ ನ್ಯೂಸ್
30-07-21 10:29 pm Mangaluru Correspondent ಕರಾವಳಿ
ಮಂಗಳೂರು, ಜುಲೈ 30: ಕೇರಳದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಸಿಎಂ ಬಸವರಾಜ್ ಬೊಮ್ಮಾಯಿ ಗಡಿಭಾಗದಲ್ಲಿ ತಪಾಸಣೆ ಹೆಚ್ಚಿಸುವಂತೆ ಸೂಚನೆ ನೀಡಿದ್ದಾರೆ. ಇದರಂತೆ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಮತ್ತು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಇಂದು ಕೇರಳ ಗಡಿಭಾಗ ತಲಪಾಡಿಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಗಡಿಭಾಗದಲ್ಲಿ ಕೇರಳ ಕಡೆಯಿಂದ ಬರುವ ಮಂದಿ ಬಗ್ಗೆ ತಪಾಸಣೆ ತೀವ್ರಗೊಳಿಸುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.




ಈ ವೇಳೆ, ಮಾಧ್ಯಮಕ್ಕೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ., ಕೇರಳದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿದೆ. ಕೇರಳ ಕಡೆಯಿಂದ ವಿದ್ಯಾರ್ಥಿಗಳು ಮತ್ತು ಉದ್ಯೋಗಕ್ಕಾಗಿ ದಿನಂಪ್ರತಿ ಜನರು ಬರುತ್ತಾರೆ. ಈ ನಿಟ್ಟಿನಲ್ಲಿ ಅವರನ್ನು ಗಡಿಭಾಗದಲ್ಲಿ ತಪಾಸಣೆ ನಡೆಸಲು ಆರೋಗ್ಯ ಕಾರ್ಯಕರ್ತರನ್ನು ಗಡಿಯಲ್ಲಿ ನೇಮಕ ಮಾಡಲಾಗಿದೆ. ಅದರ ಜೊತೆಗೆ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯ ಮಾಡಲಾಗಿದೆ.
ಆದರೂ ಕೋವಿಡ್ ಲಸಿಕೆ ಒಂದು ಡೋಸ್ ಪಡೆದವರನ್ನು ಗಡಿಯಲ್ಲಿ ತಪಾಸಣೆ ನಡೆಸದೆ ಬಿಡಲಾಗುತ್ತಿದೆ. ಒಂದು ಡೋಸ್ ಪಡೆದವರಿಗೂ ಸೋಂಕು ಇರುವ ಸಾಧ್ಯತೆ ಇರುತ್ತದೆ. ಹೀಗಾಗಿ ಈ ಬಗ್ಗೆ ಹೊಸತಾಗಿ ಮಾರ್ಗಸೂಚಿ ಹೊರಡಿಸುವ ಅಗತ್ಯವಿದೆ. ಅಲ್ಲದೆ, ಸದ್ಯಕ್ಕೆ ಗಡಿಭಾಗದಲ್ಲಿ ಕೋವಿಡ್ ತಪಾಸಣೆ ನಡೆಸಿ ಒಳಬಿಡಲು ಅನುಮತಿ ನೀಡಲಾಗಿದೆ. ಈ ವಿಚಾರದ ಬಗ್ಗೆಯೂ ಪುನರ್ ವಿಮರ್ಶೆ ಮಾಡುವ ಅಗತ್ಯವಿದೆ. ಈ ಬಗ್ಗೆ ಯಾವ ರೀತಿಯ ನಿರ್ಧಾರ ಕೈಗೊಳ್ಳಬೇಕು ಎಂಬ ಬಗ್ಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇನೆ. ಶನಿವಾರ ಜನಪ್ರತಿನಿಧಿಗಳ ಜೊತೆ ಸಭೆ ಇದ್ದು ಆನಂತರ ನಿರ್ಧಾರ ಪ್ರಕಟಿಸುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಮತ್ತು ಕೇರಳದ ನಡುವೆ 16 ಕಡೆಗಳಲ್ಲಿ ಒಳದಾರಿ ಸೇರಿದಂತೆ ಚೆಕ್ ಪೋಸ್ಟ್ ಹಾಕಿದ್ದು ಎಲ್ಲ ಕಡೆಯೂ ಪೊಲೀಸರು ಮತ್ತು ಆರೋಗ್ಯ ಇಲಾಖೆ ಕಾರ್ಯಕರ್ತರು ಇರಲಿದ್ದಾರೆ. ಕೋವಿಡ್ ಹರಡದಂತೆ, ಮುಂಜಾಗ್ರತೆ ನೆಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾಗಿದೆ. ಕೇರಳದ ಗಡಿಭಾಗವನ್ನು ಮಂಗಳೂರು ಹಂಚಿಕೊಂಡಿರುವುದರಿಂದ ಜನರು ಕೂಡ ಕೋವಿಡ್ ಮಾರ್ಗಸೂಚಿಯನ್ನು ಕಡ್ಡಾಯ ಪಾಲನೆ ಮಾಡಬೇಕಿದೆ ಎಂದು ಇದೇ ವೇಳೆ ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.
As the districts in the state along Kerala border are witnessing a steady increase in the number of Covid-19 cases, Dakshina Kannada deputy commissioner (DC) Dr Rajendra K V and police commissioner N Shashi Kumar visited Talapady check post to review the Covid situation on Friday July 30.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm