ಬ್ರೇಕಿಂಗ್ ನ್ಯೂಸ್
31-07-21 09:51 pm Mangaluru Correspondent ಕರಾವಳಿ
ಮಂಜೇಶ್ವರ, ಜುಲೈ 31: ಬಂಟ್ವಾಳ ಬಳಿಯ ಪಾಣೆಮಂಗಳೂರಿನ ನೇತ್ರಾವತಿ ಸೇತುವೆಯ ಬಳಿ ಚಾಲನೆ ಸ್ಥಿತಿಯಲ್ಲಿ ಬೈಕನ್ನು ಬಿಟ್ಟು ನದಿಗೆ ಹಾರಿದ್ದ ಯುವಕನ ಶವ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಬಳಿಯ ಕಣ್ವತೀರ್ಥ ಸಮುದ್ರ ಕಿನಾರೆಯಲ್ಲಿ ಪತ್ತೆಯಾಗಿದೆ.
ಬೆಂಗಳೂರಿನ ದಾಸರಹಳ್ಳಿಯ ನಿವಾಸಿ ಸತ್ಯವೇಲು (28) ಎಂಬ ಯುವಕ ಜುಲೈ 28ರಂದು ರಾತ್ರಿ ಬಿ.ಸಿ.ರೋಡಿನ ಪಾಣೆಮಂಗಳೂರು ಸೇತುವೆ ಬಳಿಗೆ ಬೈಕಿನಲ್ಲಿ ಬಂದಿದ್ದು, ಬೈಕನ್ನು ಚಾಲನೆ ಸ್ಥಿತಿಯಲ್ಲೇ ಬಿಟ್ಟು ನದಿಗೆ ಹಾರಿದ್ದ ಎನ್ನಲಾಗಿತ್ತು. ಬಳಿಕ ಆತನ ಹುಡುಕಾಟ ನಡೆಸಿದ್ದರೂ, ಶವ ಸಿಕ್ಕಿರಲಿಲ್ಲ.
ಜುಲೈ 30ರಂದು ಮಂಜೇಶ್ವರ ಸಮುದ್ರ ಕಿನಾರೆಯಲ್ಲಿ ಶವ ಪತ್ತೆಯಾಗಿದ್ದು, ಪೊಲೀಸರು ಬಂಟ್ವಾಳ ಪೊಲೀಸರ ಮೂಲಕ ಆತನ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದರು. ಕುಟುಂಬಸ್ಥರು ಬಂದು ಶವದ ಗುರುತು ಹಚ್ಚಿದ್ದಾರೆ. ಮಂಜೇಶ್ವರ ಪೊಲೀಸರು ಶವವನ್ನು ಕಾಸರಗೋಡು ಸರಕಾರಿ ಆಸ್ಪತ್ರೆಗೆ ಒಯ್ದು ಪೋಸ್ಟ್ ಮಾರ್ಟಂ ನಡೆಸಿದ್ದು, ಬಳಿಕ ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದಾರೆ.
ಸತ್ಯವೇಲು ಇತ್ತೀಚೆಗೆ ಎರಡು ವಾರಗಳ ಹಿಂದೆಯೂ ಇದೇ ರೀತಿ ಪಾಣೆಮಂಗಳೂರಿನಲ್ಲಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ. ಆನಂತರ ಸ್ಥಳೀಯರು ಗಮನಿಸಿ, ಆತನ ರಕ್ಷಣೆ ಮಾಡಿ ಪೊಲೀಸರಿಗೆ ಒಪ್ಪಿಸಿದ್ದರು. ಪೊಲೀಸರು ಕುಟುಂಬಸ್ಥರನ್ನು ಕರೆಸಿ, ವಶಕ್ಕೆ ನೀಡಿದ್ದರು. ಇದೀಗ ಮತ್ತೆ ಜುಲೈ 28ರಂದು ಸತ್ಯವೇಲು ಬೆಂಗಳೂರಿನ ಮನೆಯನ್ನು ಬಿಟ್ಟು ಬಂದಿದ್ದ. ಈ ಬಗ್ಗೆ ಆತನ ತಾಯಿ ಪೊಲೀಸ್ ದೂರು ನೀಡಿದ್ದರು.
ಬೆಂಗಳೂರಿನ ಯುವಕ ನೇತ್ರಾವತಿ ನದಿಗೆ ಹಾರಿದ ಶಂಕೆ ; ಬಿ.ಸಿ.ರೋಡ್ ಸೇತುವೆಯಲ್ಲಿ ಬೈಕ್ ಪತ್ತೆ !
The mortal remains of the man who left his bike engine running and went missing from Netravati bridge at Panemangalore on July 28 morning, was found later at Manjeshwar Kanwatheertha sea shore. The person is identified as Sathyavelu (29), a resident of Dasarahalli in Bengaluru.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm