ಬ್ರೇಕಿಂಗ್ ನ್ಯೂಸ್
31-07-21 09:51 pm Mangaluru Correspondent ಕರಾವಳಿ
ಮಂಜೇಶ್ವರ, ಜುಲೈ 31: ಬಂಟ್ವಾಳ ಬಳಿಯ ಪಾಣೆಮಂಗಳೂರಿನ ನೇತ್ರಾವತಿ ಸೇತುವೆಯ ಬಳಿ ಚಾಲನೆ ಸ್ಥಿತಿಯಲ್ಲಿ ಬೈಕನ್ನು ಬಿಟ್ಟು ನದಿಗೆ ಹಾರಿದ್ದ ಯುವಕನ ಶವ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಬಳಿಯ ಕಣ್ವತೀರ್ಥ ಸಮುದ್ರ ಕಿನಾರೆಯಲ್ಲಿ ಪತ್ತೆಯಾಗಿದೆ.
ಬೆಂಗಳೂರಿನ ದಾಸರಹಳ್ಳಿಯ ನಿವಾಸಿ ಸತ್ಯವೇಲು (28) ಎಂಬ ಯುವಕ ಜುಲೈ 28ರಂದು ರಾತ್ರಿ ಬಿ.ಸಿ.ರೋಡಿನ ಪಾಣೆಮಂಗಳೂರು ಸೇತುವೆ ಬಳಿಗೆ ಬೈಕಿನಲ್ಲಿ ಬಂದಿದ್ದು, ಬೈಕನ್ನು ಚಾಲನೆ ಸ್ಥಿತಿಯಲ್ಲೇ ಬಿಟ್ಟು ನದಿಗೆ ಹಾರಿದ್ದ ಎನ್ನಲಾಗಿತ್ತು. ಬಳಿಕ ಆತನ ಹುಡುಕಾಟ ನಡೆಸಿದ್ದರೂ, ಶವ ಸಿಕ್ಕಿರಲಿಲ್ಲ.
ಜುಲೈ 30ರಂದು ಮಂಜೇಶ್ವರ ಸಮುದ್ರ ಕಿನಾರೆಯಲ್ಲಿ ಶವ ಪತ್ತೆಯಾಗಿದ್ದು, ಪೊಲೀಸರು ಬಂಟ್ವಾಳ ಪೊಲೀಸರ ಮೂಲಕ ಆತನ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದರು. ಕುಟುಂಬಸ್ಥರು ಬಂದು ಶವದ ಗುರುತು ಹಚ್ಚಿದ್ದಾರೆ. ಮಂಜೇಶ್ವರ ಪೊಲೀಸರು ಶವವನ್ನು ಕಾಸರಗೋಡು ಸರಕಾರಿ ಆಸ್ಪತ್ರೆಗೆ ಒಯ್ದು ಪೋಸ್ಟ್ ಮಾರ್ಟಂ ನಡೆಸಿದ್ದು, ಬಳಿಕ ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದಾರೆ.
ಸತ್ಯವೇಲು ಇತ್ತೀಚೆಗೆ ಎರಡು ವಾರಗಳ ಹಿಂದೆಯೂ ಇದೇ ರೀತಿ ಪಾಣೆಮಂಗಳೂರಿನಲ್ಲಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ. ಆನಂತರ ಸ್ಥಳೀಯರು ಗಮನಿಸಿ, ಆತನ ರಕ್ಷಣೆ ಮಾಡಿ ಪೊಲೀಸರಿಗೆ ಒಪ್ಪಿಸಿದ್ದರು. ಪೊಲೀಸರು ಕುಟುಂಬಸ್ಥರನ್ನು ಕರೆಸಿ, ವಶಕ್ಕೆ ನೀಡಿದ್ದರು. ಇದೀಗ ಮತ್ತೆ ಜುಲೈ 28ರಂದು ಸತ್ಯವೇಲು ಬೆಂಗಳೂರಿನ ಮನೆಯನ್ನು ಬಿಟ್ಟು ಬಂದಿದ್ದ. ಈ ಬಗ್ಗೆ ಆತನ ತಾಯಿ ಪೊಲೀಸ್ ದೂರು ನೀಡಿದ್ದರು.
ಬೆಂಗಳೂರಿನ ಯುವಕ ನೇತ್ರಾವತಿ ನದಿಗೆ ಹಾರಿದ ಶಂಕೆ ; ಬಿ.ಸಿ.ರೋಡ್ ಸೇತುವೆಯಲ್ಲಿ ಬೈಕ್ ಪತ್ತೆ !
The mortal remains of the man who left his bike engine running and went missing from Netravati bridge at Panemangalore on July 28 morning, was found later at Manjeshwar Kanwatheertha sea shore. The person is identified as Sathyavelu (29), a resident of Dasarahalli in Bengaluru.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm