ಬ್ರೇಕಿಂಗ್ ನ್ಯೂಸ್
03-08-21 06:05 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 3: ನೂತನ ಸಿಎಂ ಬೊಮ್ಮಾಯಿ ಸಂಪುಟಕ್ಕೆ ಹೊಸಬರು ಸೇರಲಿದ್ದಾರೆ ಎಂಬ ವದಂತಿ ದಟ್ಟವಾಗಿ ಹಬ್ಬಿದೆ. ಇನ್ನೆರಡು ದಿನದಲ್ಲಿ ಹೊಸ ಸಚಿವರು ಪ್ರಮಾಣವಚನ ಸ್ವೀಕರಿಸುತ್ತಾರೆ ಎನ್ನುವ ಮಾಹಿತಿಗಳೂ ಇವೆ. ಈ ನಡುವೆ, ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಗೆ ಮಂತ್ರಿಸ್ಥಾನ ಕೊಡಬೇಕು ಎಂಬ ಕೂಗು ಜೋರಾಗಿದೆ. ಹಾಲಾಡಿ ಅಭಿಮಾನಿಗಳು ಮಾಜಿ ಸಿಎಂ ಯಡಿಯೂರಪ್ಪ ಮತ್ತು ಬಿಜೆಪಿ ನಾಯಕರಿಗೆ ಬಹಿರಂಗ ಪತ್ರ ಬರೆದಿದ್ದು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಮಾಡುವ ಮೂಲಕ ಅಭಿಮಾನ ಮೆರೆದಿದ್ದಾರೆ.
ಬೆಂಗಳೂರಿಗೆ ಹೋಗಿ ಯಾರದ್ದೋ ಕೈಕಾಲು ಹಿಡಿದು ಮಂತ್ರಿ ಸ್ಥಾನವನ್ನು ಕೇಳುವುದಿಲ್ಲ. ನನ್ನ ಉಸಿರು ಇದ್ದರೆ ನಾನು ಕಾಡಿಬೇಡಿ ಮಂತ್ರಿಯಾಗುವುದಿಲ್ಲ ಎಂದು ಹಾಲಾಡಿ ಶ್ರೀನಿವಾಸ್ ಶೆಟ್ಟಿ ಹೇಳಿಕೆ ನೀಡಿದ್ದಾರೆ. ಈ ನಡುವೆ ಹಾಲಾಡಿ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿಗರಿಗೆ ಪತ್ರ ಅಭಿಯಾನ ನಡೆಸುತ್ತಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಬರೆದ ಪತ್ರದಲ್ಲಿ ಹಳೆಯ ಎಲ್ಲಾ ನೆನಪುಗಳನ್ನು ಕೆದಕಿದ್ದಾರೆ.


ಬೆಂಗಳೂರಿಗೆ ಕರೆಸಿ ಮಂತ್ರಿ ಸ್ಥಾನ ತಪ್ಪಿದಾಗ ಯಡಿಯೂರಪ್ಪ ಮಾತುಕತೆ ಮಾಡಿ ಸಿಹಿಸುದ್ದಿ ಕೊಡುವುದಾಗಿ ಹೇಳಿದ್ದರು. ಅದನ್ನು ಯಾಕೆ ಮರೆತಿದ್ದೀರಿ? ನೀವು ಕಿಂಗ್ ಮೇಕರ್. ಸದಾನಂದಗೌಡ, ಶೆಟ್ಟರ್, ಬೊಮ್ಮಾಯಿ ಅವರನ್ನು ಸಿಎಂ ಮಾಡಿದ್ದೀರಿ. ಹಾಲಾಡಿಯನ್ನು ಮಂತ್ರಿ ಮಾಡಬೇಕೆಂದು ಅನ್ನಿಸಲಿಲ್ಲವಾ? ಕೋಟಾ ಶ್ರೀನಿವಾಸ ಪೂಜಾರಿಗೆ ಸ್ಥಾನ ಕೊಟ್ಟದ್ದು ಯಾಕೆ ಎಂಬುದನ್ನು ನಾವು ಇನ್ನೂ ಮರೆತಿಲ್ಲ. ಶೋಭಾ ಕರಂದ್ಲಾಜೆಗೆ ಹಾಲಾಡಿ ಕ್ಷೇತ್ರದಲ್ಲಿ ಅತಿ ಹೆಚ್ಚು ಲೀಡ್ ಕೊಡಿಸಿದ್ದು ನಿಮಗೆ ಮರೆತುಹೋಯಿತೆ? ಹಾಲಾಡಿ ಜಿಲ್ಲೆಯ ಏಕೈಕ ಶಾಸಕರಾಗಿದ್ದ ದಿನಗಳನ್ನು ನೀವು ಮರೆಯಬೇಡಿ.
ಪಕ್ಷೇತರರಾಗಿದ್ದಾಗ ನಿರ್ಮಲಾ ಸೀತಾರಾಮನ್ ಗೆ ಮತ ಹಾಕಿದ್ದು ನಿಮಗೆ ನೆನಪಿಲ್ಲವೇ? ಹಾಲಾಡಿಗೆ ಸಚಿವ ಸ್ಥಾನ ಸಿಗದಿದ್ದರೆ ನಮಗೆ ಬೇಸರವಿಲ್ಲ. ಆದರೆ ಲಕ್ಷಾಂತರ ಮಂದಿಯ ಶಾಪ ನಿಮಗೆ ತಟ್ಟಲಿದೆ ಎಂದು ಅಭಿಮಾನಿಗಳು ಕಿಡಿಕಾರಿದ್ದಾರೆ. ಈ ಪತ್ರ ಸಾಮಾಜಿಕ ಜಾಲತಾಣದಲ್ಲಿ ಎಲ್ಲಾ ಕಡೆ ಓಡಾಡುತ್ತಿದೆ. ಕೆಲವು ಅಭಿಮಾನಿಗಳು ಪ್ರಿಂಟ್ ತೆಗೆದು ಯಡಿಯೂರಪ್ಪನವರಿಗೆ ಪೋಸ್ಟ್ ಮಾಡುತ್ತಿದ್ದಾರೆ.
ಡಿಯರ್ ಬಿಜೆಪಿ, ಮಂತ್ರಿಯಾಗಲೇಬೇಕು ಹಾಲಾಡಿ, ಇದು ನಮ್ಮ ಒಡಲ ನುಡಿ, ನೀವದನ್ನು ನಡೆಸಿಕೊಡಿ ಎನ್ನುವ ಟ್ಯಾಗ್ ಲೈನಲ್ಲಿ ಮಾಡಿರುವ ಅಭಿಯಾನ ಟೀಮ್ ಹಾಲಾಡಿ, ಥೀಮ್ ಹಾಲಾಡಿ ಹೆಸರಲ್ಲಿ ಭಾರೀ ವೈರಲ್ ಆಗಿದೆ.
Kundapur MLA Halady Srinivas Shetty fans have started twitter campaign stating has BJP party forgotten the good works of our leader on twitter.
27-05-26 04:58 pm
HK News Staffer
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 01:30 pm
HK News Staffer
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm