ಬ್ರೇಕಿಂಗ್ ನ್ಯೂಸ್
05-08-21 12:01 pm Udupi Police ಕರಾವಳಿ
ಉಡುಪಿ, ಆಗಸ್ಟ್ 5: ಕೊರೋನಾ ಸೋಂಕು ಹೆಚ್ಚಳಗೊಂಡ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಡಾ.ಜಗದೀಶ್ ಸೆಕ್ಷನ್ 144(3) ಜಾರಿ ಮಾಡಿದ್ದಾರೆ. ಇದರಂತೆ, ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆ ವರೆಗೆ ನೈಟ್ ಕರ್ಫ್ಯೂ ಇರಲಿದೆ. ಅಲ್ಲದೆ, ಸಾರ್ವಜನಿಕ ಚಟುವಟಿಕೆಗಳಿಗೆ ನಿಷೇಧ ಹೇರಿ ಆದೇಶ ಹೊರಡಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಯಾವುದೇ ರೀತಿಯ ಪಬ್ ಗಳಿಗೆ ಅವಕಾಶ ಇಲ್ಲ. ಈಜು ಕೊಳದಲ್ಲಿ ಕ್ರೀಡಾಪಟುಗಳಿಗೆ ತರಬೇತಿಗೆ ಮಾತ್ರ ಅವಕಾಶ, ಸಾರ್ವಜನಿಕ ಪ್ರವೇಶಕ್ಕೆ ಅನುಮತಿ ಇರುವುದಿಲ್ಲ. ಮೈದಾನ, ಕ್ರೀಡಾಂಗಣದಲ್ಲಿಯೂ ಕ್ರೀಡಾಪಟುಗಳಿಗೆ ಮಾತ್ರ ಅಭ್ಯಾಸಕ್ಕೆ ಅವಕಾಶ ನೀಡಲಾಗಿದೆ.


ಇದೇ ವೇಳೆ ಎಲ್ಲ ರೀತಿಯ ರಾಜಕೀಯ, ಸಾರ್ವಜನಿಕ ಸಭೆ, ಸಮಾರಂಭಗಳಿಗೆ ನಿಷೇಧ ಹೇರಿದ್ದಾರೆ. ಜನರು ಒಟ್ಟು ಸೇರುವುದನ್ನು ನಿಷೇಧಿಸುವ ಸಲುವಾಗಿ ಮದುವೆ ಇನ್ನಿತರ ಕೌಟುಂಬಿಕ ಕಾರ್ಯಕ್ರಮ 100 ಜನಕ್ಕೆ ಮಾತ್ರ ಅವಕಾಶ ನೀಡಲಾಗಿದೆ.
ದೇವಸ್ಥಾನದಲ್ಲಿ ಜನಸಂದಣಿ ಸೇರದಂತೆ ಜಾತ್ರೆ, ಉತ್ಸವ, ಮೆರವಣಿಗೆ ನಡೆಸುವುದನ್ನು ನಿಷೇಧ ಮಾಡಲಾಗಿದೆ. ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ನಿಂತು ಪ್ರಯಾಣಿಸುವಂತಿಲ್ಲ. ನಿಂತು ಪ್ರಯಾಣ ಮಾಡಿದಲ್ಲಿ ಅವರಿಗೆ ದಂಡ ವಿಧಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಚಿತ್ರಮಂದಿರದಲ್ಲಿ ಶೇಕಡಾ 50 ವೀಕ್ಷಕರಿಗೆ ಮಾತ್ರ ಅವಕಾಶ ಇರಲಿದೆ. ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಏರ್ಪಡಿಸಿ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.
Spike in corona cases Udupi district announces night curfew with strict rules.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm