ಬ್ರೇಕಿಂಗ್ ನ್ಯೂಸ್
06-08-21 02:05 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 6: ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಈ ಬಾರಿ ಸಚಿವ ಸ್ಥಾನವೇ ಸಿಗಲ್ಲ ಎನ್ನಲಾಗಿತ್ತು. ಆದರೆ ಕೊನೆಕ್ಷಣದಲ್ಲಿ ಕೋಟರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿದ್ದು ಕರಾವಳಿಯಲ್ಲಿ ಅವರ ಅಭಿಮಾನಿಗಳಿಗೆ ಮಾತ್ರವಲ್ಲ, ವಿರೋಧ ಪಕ್ಷದ ಅಭಿಮಾನಿಗಳಿಗೂ ಖುಷಿಯಾಗಿದೆ. ಎಷ್ಟರಮಟ್ಟಿಗೆ ಅಂದರೆ, ರಾಜಕೀಯ ವಿರೋಧಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕೂಡ ಬ್ಯಾನರ್ ಹಾಕಿ ಶುಭ ಹಾರೈಕೆ ಮಾಡಿದ್ದಾರೆ.
ಹೀಗಾಗಿ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಬಿಜೆಪಿಯಲ್ಲಿ ಮಾತ್ರವಲ್ಲ. ವಿರೋಧ ಪಕ್ಷಗಳಲ್ಲೂ ಅಭಿಮಾನಿಗಳಿದ್ದಾರೆ ಅನ್ನುವಂತಾಗಿದೆ. ಹೆಬ್ರಿ ತಾಲೂಕಿನ ಶೇಡಿಮನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಎಂದೇ ನಮೂದಿಸಿ ಕೋಟ ಶ್ರೀನಿವಾಸ ಪೂಜಾರಿಗೆ ಶುಭಾಶಯ ಕೋರಿ ಬ್ಯಾನರ್ ಹಾಕಿದ್ದಾರೆ. ಸದ್ಯ ಈ ಫೊಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಎಷ್ಟೇ ಕಚ್ಚಾಡಿದರೂ ವಿರೋಧಿ ಪಕ್ಷಗಳ ರಾಜಕೀಯ ನಾಯಕರು ಪರಸ್ಪರ ಮುಖಾಮುಖಿಯಾದರೆ ಕುಶಲೋಪರಿ ಮಾತನಾಡಿ ಖುಷಿ ಪಡೋದನ್ನು ನೋಡಿದ್ದೇವೆ, ಆದರೆ ಕಾರ್ಯಕರ್ತರು ಮಾತ್ರ ಕಚ್ಚಾಡಿಕೊಂಡೇ ಇರ್ತಾರೆ. ಕೋಟ ಶ್ರೀನಿವಾಸರ ವಿಚಾರದಲ್ಲಿ ಮಾತ್ರ ಹಾಗಲ್ಲ, ಅನ್ಯ ಪಕ್ಷಗಳ ಕಾರ್ಯಕರ್ತರೂ ಬಹಿರಂಗವಾಗಿ ಅಭಿಮಾನ ತೋರಿಸುತ್ತಿರುವುದು ಎಲ್ಲರ ಗಮನಸೆಳೆದಿದೆ.
ಕೋಟ ಶ್ರೀನಿವಾಸ ಪೂಜಾರಿ ಇತರ ರಾಜಕಾರಣಿಗಳ ರೀತಿಯಲ್ಲ. ಅತ್ಯಂತ ಸರಳ ಜೀವಿಯೆಂದೇ ಹೆಸರು ಮಾಡಿರುವ ಪೂಜಾರಿ ಕಳೆದ ಬಾರಿ ಯಡಿಯೂರಪ್ಪ ಸರಕಾರದಲ್ಲಿ ಮುಜರಾಯಿ, ಮೀನುಗಾರಿಕೆ ಸಚಿವರಾಗಿ, ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆಲಸ ಮಾಡಿದ್ದರು. ಈ ವೇಳೆ, ಪಕ್ಷ ಭೇದ ಇಲ್ಲದೆ ಯಾವುದೇ ಸಾಮಾನ್ಯ ಕಾರ್ಯಕರ್ತ ಭೇಟಿಗೆ ಬಂದರೂ ಅಹವಾಲು ಕೇಳುತ್ತಿದ್ದ ಪರಿ ಅವರನ್ನು ಜನಮಾನಸದಲ್ಲಿ ವಿನೀತ ಭಾವ ಸೃಷ್ಟಿಸಿದೆ. ಇದಕ್ಕಾಗಿಯೇ ಬಿಜೆಪಿ ಹೊರತಾಗಿಯೂ ಶ್ರೀನಿವಾಸ ಪೂಜಾರಿಗೆ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ.
Udupi Congress members place banners congratulating Kota Poojary for being appointed into Cabinet. Kota simplicity has gained huge fans even in congress party.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am