ಬ್ರೇಕಿಂಗ್ ನ್ಯೂಸ್
06-08-21 04:28 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 6 : ಉಡುಪಿಗೆ ತೆರಳಬೇಕು, ಮಲ್ಪೆ ಸಮುದ್ರದ ಹಾಲ್ನೊರೆಯಲ್ಲಿ ತೇಲಬೇಕು ಅಂದ್ಕೊಂಡು ಟೂರ್ ಬುಕ್ ಮಾಡಿದ್ರೆ ಒಂಚೂರು ತಡೀರಿ. ಯಾಕಂದ್ರೆ, ಕಡಲ ಅಲೆಗಳ ಜೊತೆ ಆಟವಾಡೋದಕ್ಕೆ ಉಡುಪಿ ಜಿಲ್ಲಾಡಳಿತ ಬ್ರೇಕ್ ಹಾಕಿದೆ. ಜನರು ಸಮುದ್ರಕ್ಕೆ ಇಳಿಯಬಾರದು ಎಂದು ಸಮುದ್ರಕ್ಕೇ ಬೇಲಿ ಹಾಕಿದೆ.
ಎಚ್ಚರಿಕೆ ಬೋರ್ಡ್, ಎಚ್ಚರಿಸುವ ಹೋಮ್ ಗಾರ್ಡ್, ಆದಾಗ್ಯೂ ಸಮುದ್ರಕ್ಕೆ ಇಳಿದರೆ ದೊಡ್ಡ ಮೊತ್ತದ ದಂಡ ತೆರಬೇಕಾಗುತ್ತದೆ. ಇದು ಉಡುಪಿಯ ಮಲ್ಪೆ ಸಮುದ್ರ ತೀರದ ಸದ್ಯದ ಸ್ಥಿತಿ. ಇತ್ತೀಚೆಗೆ ಮಲ್ಪೆ ಸಮುದ್ರದಲ್ಲಿ ನಾಲ್ವರು ಪ್ರವಾಸಿಗರು ಸಮುದ್ರದಲ್ಲಿ ಕೊಚ್ಚಿ ಹೋಗಿದ್ದರು. ಕೊನೆಗೆ ಮೂವರು ಬದುಕುಳಿದು ಕೊಡಗು ಮೂಲದ ಓರ್ವ ಯುವತಿ ಸಾವನ್ನಪ್ಪಿದ್ದಳು. ಮಲ್ಪೆಯ ಜೀವ ರಕ್ಷಕ ತಂಡದ ಸಿಬ್ಬಂದಿ ಮಾತನ್ನು ಲೆಕ್ಕಿಸದೇ ಮೋಜಿನಲ್ಲಿ ತೊಡಗಿದ್ದರಿಂದ ರಕ್ಕಸ ಗಾತ್ರದ ಅಲೆಗೆ ಸಿಲುಕಿ ಯುವತಿ ಕೊಚ್ಚಿಕೊಂಡು ಹೋಗಿದ್ದಳು.



ಮಳೆಯಿಂದಾಗಿ ಸಮುದ್ರ ಬಿರುಸುಗೊಂಡಿದ್ದು ಸಾರ್ವಜನಿಕರು ಸಮುದ್ರಕ್ಕೆ ಇಳಿಯದಂತೆ, ದಡದ ಉದ್ದಕ್ಕೂ ಬಲೆಗಳಿಂದ ಬೇಲಿ ಹಾಕಲಾಗಿದೆ. ಸೂಚನೆ ಹೊರತಾಗಿಯೂ ಸಮುದ್ರಕ್ಕೆ ಇಳಿದರೆ 500 ರೂ. ಡಂಡ ವಿಧಿಸುವುದಾಗಿ ಎಚ್ಚರಿಸಿದೆ. ಈ ಆದೇಶ ಸೆಪ್ಟೆಂಬರ್ 15ರ ವರೆಗೆ ಈ ಆದೇಶ ಇರಲಿದೆ.
ಇದಲ್ಲದೆ, ಕರಾವಳಿಯ ದೇವಸ್ಥಾನಗಳಲ್ಲೂ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದೆ. ಪ್ರಸಿದ್ಧ ಕ್ಷೇತ್ರಗಳಾದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಹಾಗೂ ಕಟೀಲು ದೇವಸ್ಥಾನ ಸೇರಿದಂತೆ ಮುಂತಾದ ತೀರ್ಥ ಕ್ಷೇತ್ರಗಳಲ್ಲಿ ಕೊರೊನಾ ಸೋಂಕಿನ ಕಾರಣದಿಂದ ವಾರಾಂತ್ಯದಲ್ಲಿ ಪ್ರವೇಶ ನಿರ್ಬಂಧ ಇದೆ. ಇತರೇ ದಿನಗಳಲ್ಲಿ ದೇವರ ದರ್ಶನ ಮಾತ್ರ. ಸೇವೆ ನಡೆಸುವುದಕ್ಕೆ ನಿರ್ಬಂಧ ಹಾಕಲಾಗಿದೆ. ಹೀಗಾಗಿ ದೂರದ ಜನ ಟ್ರಾವೆಲ್ ಬುಕ್ ಮಾಡೋ ಮುನ್ನ ಚೂರು ಯೋಚಿಸಿ.
Udupi Maple beach closed for vistors due to heavy rains and rough sea waves
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm