ಬ್ರೇಕಿಂಗ್ ನ್ಯೂಸ್
08-08-21 08:49 pm Mangaluru Correspondent ಕರಾವಳಿ
ಸುಳ್ಯ, ಆಗಸ್ಟ್ 8: ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದ ಮಗುವನ್ನು ರಕ್ಷಿಸಲು ಕೆರೆಗೆ ಹಾರಿದ ತಾಯಿ ಮಗುವಿನೊಂದಿಗೆ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ನೆಲ್ಲೂರು ಕೇಮ್ರಾಜೆ ಗ್ರಾಮದಲ್ಲಿ ನಡೆದಿದೆ.
ನೆಲ್ಲೂರು ಕೇಮ್ರಾಜೆ ಗ್ರಾಮದ ಮಾಪಲಕಜೆಯಲ್ಲಿ ತವರು ಮನೆ ಹೊಂದಿರುವ ಮೆಲ್ಕಾರ್ ನಿವಾಸಿ ಅಮಿತ್ ಎಂಬವರ ಪತ್ನಿ ಸಂಗೀತಾ(30) ಮತ್ತು ಆಕೆಯ ಮಗು ನಾಲ್ಕು ವರ್ಷದ ಅಭಿಮನ್ಯು ಮೃತರು.
ಎರಡು ದಿನಗಳ ಹಿಂದೆ ತವರು ಮನೆಗೆ ಪೂಜೆಯ ನಿಮಿತ್ತವಾಗಿ ಬಂದಿದ್ದು, ನಾಳೆ ಮೆಲ್ಕಾರ್ಗೆ ಹೋಗುವವರಿದ್ದರು.
ಪಕ್ಕದ ನೆಂಟರೋರ್ವರ ಮನೆಗೆ ಹೋಗುವಾಗ ಮಗು ಆಕಸ್ಮಿಕವಾಗಿ ಕಾಲುಜಾರಿ ಕೆರೆಗೆ ಬಿದ್ದಿದೆ ಎನ್ನಲಾಗಿದೆ. ಮಗು ಕೆರೆಗೆ ಬಿದ್ದಿದ್ದನ್ನು ನೋಡಿದ ತಾಯಿ ಸಂಗೀತಾ ಅವರು ಮಗುವನ್ನು ರಕ್ಷಿಸಲು ಕೆರೆಗೆ ಹಾರಿದ್ದಾರೆ. ಆದರೆ ಈಜಲು ಬಾರದ ಸಂಗೀತಾ ಅವರು ಮಗುವನ್ನು ರಕ್ಷಿಸಲೂ ಆಗದೆ ಇತ್ತ ತನ್ನ ಪ್ರಾಣವನ್ನೂ ರಕ್ಷಿಸಿಕೊಳ್ಳಲಾಗದೇ ಮೃತಪಟ್ಟಿದ್ದಾರೆ. ಸುಳ್ಯ ಅಗ್ನಿಶಾಮಕ ದಳದ ನೇತೃತ್ವದಲ್ಲಿ ಸಂಗೀತಾ ಹಾಗೂ ಮಗುವಿನ ಮೃತದೇಹಗಳನ್ನು ಮೇಲೆತ್ತಲಾಗಿದ್ದು ಸ್ಥಳಕ್ಕೆ ಸುಳ್ಯ ತಹಸೀಲ್ದಾರ್ ಅನಿತಾಲಕ್ಷ್ಮಿ ಹಾಗೂ ಸುಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, a woman lost her life while trying to save her drowning child at Kemraje, Nellur here on Sunday August 8. Both the child and the mother died in the incident. The deceased have been identified as Sangeeta (30) and her son Abhimanyu (3), residents of Kemraje.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm