ಬ್ರೇಕಿಂಗ್ ನ್ಯೂಸ್
08-08-21 10:05 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 8: ಕಂಬಳದ ಅಪ್ಪಟ ಅಭಿಮಾನಿ, ಕಂಬಳ ಕೋಣಗಳ ಸಾಧಕ ಗುರುಪುರ ನಿವಾಸಿ ಕೆದುಬರಿ ಗುರುವಪ್ಪ ಪೂಜಾರಿ (78) ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ.
ಕಂಬಳದ ಸಾಧನೆಯೊಂದಿಗೆ ಸ್ವತಃ ಕೃಷಿಕನಾಗಿದ್ದ ಗುರುವಪ್ಪ ಪೂಜಾರಿ ದಿನವೂ ಹಾಲು ಡೈರಿಗೆ ಒಯ್ಯುವ ಕೆಲಸ ಮಾಡುತ್ತಿದ್ದರು. ಇಂದು ಸಂಜೆ ತನ್ನ ಸ್ಕೂಟಿಯಲ್ಲಿ ಹಾಲನ್ನು ಒಯ್ಯುತ್ತಿದ್ದಾಗ ಗುರುಪುರದ ಬಳಿಯ ಕುಕ್ಕುದಕಟ್ಟೆ ಎಂಬಲ್ಲಿ ಎದುರಿನಿಂದ ಬಂದ ಕಾರು ಡಿಕ್ಕಿಯಾಗಿದೆ. ಇದರಿಂದ ರಸ್ತೆಗೆ ಎಸೆಯಲ್ಪಟ್ಟ ಗುರುವಪ್ಪ ಪೂಜಾರಿಯವರು ತೀವ್ರ ಗಾಯಗೊಂಡಿದ್ದು ಬಳಿಕ ಆಸ್ಪತ್ರೆ ತಲುಪುವಷ್ಟರಲ್ಲಿ ನಿಧನರಾಗಿದ್ದಾರೆ.


ನಾಲ್ಕು ದಶಕಗಳಿಂದ ತಮ್ಮ ಕೃಷಿಯೊಂದಿಗೆ ಕೋಣಗಳನ್ನು ಸಾಕುತ್ತಾ ಕಂಬಳಕ್ಕೆ ಒಯ್ಯುತ್ತಿದ್ದ ಕೆದುಬರಿ ಗುರುವಪ್ಪ ಪೂಜಾರಿ ಕಂಬಳ ಕ್ಷೇತ್ರದ ಅನನ್ಯ ಸಾಧಕರು. ಕಂಬಳದ ಮೇಲಿದ್ದ ಪ್ರೇಮದಿಂದ ಕೋಣಗಳನ್ನು ಒಯ್ಯುತ್ತಿದ್ದರೇ ವಿನಾ ಅವರು ಪದಕ ಗೆಲ್ಲುವತ್ತ ಮನಸ್ಸು ನೆಟ್ಟಿರಲಿಲ್ಲ. ಹಗ್ಗ ಕಿರಿಯ, ಹಿರಿಯ, ನೇಗಿಲು ಹಿರಿಯ, ಕಿರಿಯ, ಅಡ್ಡ ಹಲಗೆ, ಕನೆಹಲಗೆ ಹೀಗೆ ಕಂಬಳದ ಎಲ್ಲ ಪ್ರಕಾರಗಳಲ್ಲೂ ಕೋಣಗಳನ್ನು ಓಡಿಸಿದ್ದ ಹಿರಿಮೆ ಅವರದ್ದು. ಹಾಗಿದ್ದರೂ ಬಿರುಸಿನ ಸ್ಪರ್ಧೆಯ ನಡುವೆ 50ಕ್ಕೂ ಹೆಚ್ಚು ಪದಕಗಳನ್ನು ಗೆದ್ದು ಕೆದುಬರಿ ಹೆಸರಿಗೆ ಗುರುವಪ್ಪ ಪೂಜಾರಿಯವರು ತನ್ನದೇ ಛಾಪು ಮೂಡಿಸಿದ್ದರು. ಪೂಜಾರಿಯವರ ನಿಧನ ಕಂಬಳಾಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ.
Mangalore Kambala Player Guruvappa Poojary dies of Road Accident
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am