ಬ್ರೇಕಿಂಗ್ ನ್ಯೂಸ್
08-08-21 10:05 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 8: ಕಂಬಳದ ಅಪ್ಪಟ ಅಭಿಮಾನಿ, ಕಂಬಳ ಕೋಣಗಳ ಸಾಧಕ ಗುರುಪುರ ನಿವಾಸಿ ಕೆದುಬರಿ ಗುರುವಪ್ಪ ಪೂಜಾರಿ (78) ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ.
ಕಂಬಳದ ಸಾಧನೆಯೊಂದಿಗೆ ಸ್ವತಃ ಕೃಷಿಕನಾಗಿದ್ದ ಗುರುವಪ್ಪ ಪೂಜಾರಿ ದಿನವೂ ಹಾಲು ಡೈರಿಗೆ ಒಯ್ಯುವ ಕೆಲಸ ಮಾಡುತ್ತಿದ್ದರು. ಇಂದು ಸಂಜೆ ತನ್ನ ಸ್ಕೂಟಿಯಲ್ಲಿ ಹಾಲನ್ನು ಒಯ್ಯುತ್ತಿದ್ದಾಗ ಗುರುಪುರದ ಬಳಿಯ ಕುಕ್ಕುದಕಟ್ಟೆ ಎಂಬಲ್ಲಿ ಎದುರಿನಿಂದ ಬಂದ ಕಾರು ಡಿಕ್ಕಿಯಾಗಿದೆ. ಇದರಿಂದ ರಸ್ತೆಗೆ ಎಸೆಯಲ್ಪಟ್ಟ ಗುರುವಪ್ಪ ಪೂಜಾರಿಯವರು ತೀವ್ರ ಗಾಯಗೊಂಡಿದ್ದು ಬಳಿಕ ಆಸ್ಪತ್ರೆ ತಲುಪುವಷ್ಟರಲ್ಲಿ ನಿಧನರಾಗಿದ್ದಾರೆ.


ನಾಲ್ಕು ದಶಕಗಳಿಂದ ತಮ್ಮ ಕೃಷಿಯೊಂದಿಗೆ ಕೋಣಗಳನ್ನು ಸಾಕುತ್ತಾ ಕಂಬಳಕ್ಕೆ ಒಯ್ಯುತ್ತಿದ್ದ ಕೆದುಬರಿ ಗುರುವಪ್ಪ ಪೂಜಾರಿ ಕಂಬಳ ಕ್ಷೇತ್ರದ ಅನನ್ಯ ಸಾಧಕರು. ಕಂಬಳದ ಮೇಲಿದ್ದ ಪ್ರೇಮದಿಂದ ಕೋಣಗಳನ್ನು ಒಯ್ಯುತ್ತಿದ್ದರೇ ವಿನಾ ಅವರು ಪದಕ ಗೆಲ್ಲುವತ್ತ ಮನಸ್ಸು ನೆಟ್ಟಿರಲಿಲ್ಲ. ಹಗ್ಗ ಕಿರಿಯ, ಹಿರಿಯ, ನೇಗಿಲು ಹಿರಿಯ, ಕಿರಿಯ, ಅಡ್ಡ ಹಲಗೆ, ಕನೆಹಲಗೆ ಹೀಗೆ ಕಂಬಳದ ಎಲ್ಲ ಪ್ರಕಾರಗಳಲ್ಲೂ ಕೋಣಗಳನ್ನು ಓಡಿಸಿದ್ದ ಹಿರಿಮೆ ಅವರದ್ದು. ಹಾಗಿದ್ದರೂ ಬಿರುಸಿನ ಸ್ಪರ್ಧೆಯ ನಡುವೆ 50ಕ್ಕೂ ಹೆಚ್ಚು ಪದಕಗಳನ್ನು ಗೆದ್ದು ಕೆದುಬರಿ ಹೆಸರಿಗೆ ಗುರುವಪ್ಪ ಪೂಜಾರಿಯವರು ತನ್ನದೇ ಛಾಪು ಮೂಡಿಸಿದ್ದರು. ಪೂಜಾರಿಯವರ ನಿಧನ ಕಂಬಳಾಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ.
Mangalore Kambala Player Guruvappa Poojary dies of Road Accident
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm