ಬ್ರೇಕಿಂಗ್ ನ್ಯೂಸ್
11-08-21 10:43 pm Mangaluru Correspondent ಕರಾವಳಿ
ಉಡುಪಿ, ಆ.11: ಮಂಗಳೂರು ಸೆಂಟ್ರಲ್- ಮಡಗಾಂವ್ ಜಂಕ್ಷನ್- ಮಂಗಳೂರು ಸೆಂಟ್ರಲ್ ದೈನಂದಿನ ವಿಶೇಷ ರೈಲು ಆ.16ರಿಂದ ಮತ್ತೆ ತನ್ನ ಸಂಚಾರವನ್ನು ಪ್ರಾರಂಭಿಸಲಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ಮೂಲಕ ತಿಳಿಸಿದೆ.
ರೈಲು ನಂ.06602 ಮಂಗಳೂರು ಸೆಂಟ್ರಲ್- ಮಡಗಾಂವ್ ಜಂಕ್ಷನ್ ದೈನಂದಿನ ವಿಶೇಷ ರೈಲು ಆ.16ರಿಂದ ಪ್ರತಿದಿನ ಮುಂಜಾನೆ 5:30ಕ್ಕೆ ಮಂಗಳೂರು ಸೆಂಟ್ರಲ್ನಿಂದ ನಿರ್ಗಮಿಸಲಿದ್ದು, ಅದೇ ದಿನ ಅಪರಾಹ್ನ 2 ಗಂಟೆಗೆ ಮಡಗಾಂವ್ ಜಂಕ್ಷನ್ ತಲುಪಲಿದೆ.
ಹಾಗೆಯೇ ರೈಲು ನಂ.06601 ಮಡಗಾಂವ್ ಜಂಕ್ಷನ್- ಮಂಗಳೂರು ಸೆಂಟ್ರಲ್ ದೈನಂದಿನ ವಿಶೇಷ ರೈಲು ಆ.16ರಿಂದ ಪ್ರತಿದಿನ ಅಪರಾಹ್ನ 2:30ಕ್ಕೆ ಮಡಗಾಂವ್ ಜಂಕ್ಷನ್ನಿಂದ ನಿರ್ಗಮಿಸಲಿದ್ದು, ಅದೇ ದಿನ ರಾತ್ರಿ 9:40ಕ್ಕೆ ಮಂಗಳೂರು ಸೆಂಟ್ರಲ್ ತಲುಪಲಿದೆ.
ಈ ರೈಲಿಗೆ ಮಂಗಳೂರು ಜಂಕ್ಷನ್, ತೋಕೂರು, ಸುರತ್ಕಲ್, ಮೂಲ್ಕಿ, ನಂದಿಕೂರು, ಪಡುಬಿದ್ರಿ, ಇನ್ನಂಜೆ, ಉಡುಪಿ, ಬಾರಕೂರು, ಕುಂದಾಪುರ, ಸೇನಾಪುರ, ಬಿಜೂರು, ಮುಕಾಂಬಿಕಾ ರೋಡ್, ಬೈಂದೂರು, ಶಿರೂರು, ಭಟ್ಕಳ, ಚಿತ್ರಾಪುರ, ಮುರ್ಡೇಶ್ವರ, ಮಂಕಿ, ಹೊನ್ನಾವರ, ಕುಮಟಾ, ಮಿರ್ಜಾನ, ಗೋಕರ್ಣ ರೋಡ್, ಅಂಕೋಲ, ಹಾರವಾಡ, ಕಾರವಾರ, ಅಸ್ಗೋಟಿ, ಲೋಯಿಮ್, ಕಾನಕೋನಾ ಹಾಗೂ ಬಲ್ಲಿ ಸ್ಟೇಶನ್ಗಳಲ್ಲಿ ನಿಲುಗಡೆ ಇರುತ್ತದೆ.
ಸಂಪೂರ್ಣ ರಿಸರ್ವೇಶನ್ ಸೀಟುಗಳ ಮೂಲಕ ಸಂಚರಿಸುವ ಈ ರೈಲು ಒಟ್ಟು 12 ಕೋಚ್ಗಳನ್ನು ಹೊಂದಿರುತ್ತದೆ. ಪ್ರಯಾಣಿಕರು ಟಿಕೆಟ್ ಕಾದಿರಿಸಿ ಸಂಚರಿಸುವುದರೊಂದಿಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಕೋವಿಡ್-19 ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಕೊಂಕಣ ರೈಲ್ವೆ ಪ್ರಕಟಣೆ ಹೇಳಿದೆ.
A daily special train will be operated between Mangalore and Madgaon from August 16. Train no 06602 will leave Mangalore Central at 05.30 hrs on and from 16th August and reach Madgaon at 14.00 hrs (at 13.10 hrs Non-Monsoon) the same day until further advice. Train no 06601 will leave Madgaon at 14.30 hrs (at 14.00 hrs Non-Monsoon) on and from 16th August and reach Mangalore Central at 21.40 hrs (at 21.05 hrs Non-Monsoon) the same day.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm