ಬ್ರೇಕಿಂಗ್ ನ್ಯೂಸ್
12-08-21 11:45 pm Bengaluru Correspondent ಕರಾವಳಿ
ಬೆಂಗಳೂರು, ಆಗಸ್ಟ್ 12: ಕೊರೊನಾ ಮೂರನೇ ಅಲೆಯಲ್ಲಿ ಮಕ್ಕಳಿಗೆ ಸೋಂಕು ಎದುರಾಗಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿರುವಾಗಲೇ ಬೆಂಗಳೂರಿನಲ್ಲಿ ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದ್ದು ಪತ್ತೆಯಾಗಿದೆ. ಕಳೆದ ಹತ್ತು ದಿನಗಳಲ್ಲಿ ಬೆಂಗಳೂರು ನಗರ ಭಾಗದಲ್ಲಿ 499 ಕ್ಕೂ ಹೆಚ್ಚು ಮಕ್ಕಳಿಗೆ ಸೋಂಕು ತಗಲಿರುವುದನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.
ಆರೋಗ್ಯ ಇಲಾಖೆಯ ಹೆಲ್ತ್ ಬುಲೆಟಿನ್ ಪ್ರಕಾರ, 9 ವರ್ಷದ ಒಳಗಿನ 88 ಮಕ್ಕಳು ಆಗಸ್ಟ್ 1ರಿಂದ 10 ರ ನಡುವೆ ಸೋಂಕಿಗೆ ಒಳಗಾಗಿದ್ದಾರೆ. 10 ರಿಂದ 19 ವರ್ಷದೊಳಗಿನ 305 ಮಕ್ಕಳು ಕೊರೊನಾ ಪಾಸಿಟಿವ್ ಆಗಿದ್ದಾರೆ. ವರದಿಯಾದ 499 ಪ್ರಕರಣಗಳ ಪೈಕಿ 263 ಕಳೆದ 5 ದಿನಗಳಲ್ಲಿ ಕಂಡುಬಂದಿದೆ. ಈ ಪೈಕಿ 88 ಪ್ರಕರಣಗಳು 9 ವರ್ಷದ ಒಳಗಿನದ್ದು ಮತ್ತು 175 ಪ್ರಕರಣಗಳು 10 ರಿಂದ 19 ವರ್ಷದ ಒಳಗಿನ ಮಕ್ಕಳದ್ದಿದೆ.
ಇದು ಮೂರನೇ ಅಲೆಯ ಮುನ್ಸೂಚನೆ ಎನ್ನಲಾಗುತ್ತಿದ್ದು ಈಗಾಗ್ಲೇ ಈ ಬಗ್ಗೆ ಆರೋಗ್ಯ ಇಲಾಖೆಯಿಂದ ಎಚ್ಚರಿಕೆ ವಹಿಸಲಾಗಿದೆ. ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ, ಕಳೆದ ಕೆಲವು ವಾರಗಳಲ್ಲಿ ಮಕ್ಕಳಿಗೆ ಸೋಂಕು ತಗಲುತ್ತಿರುವುದು ದುಪ್ಪಟ್ಟು ಆಗುತ್ತಿರುವುದು ಕಂಡುಬಂದಿದೆ. ಹೆತ್ತವರು ಸ್ವತಃ ಎರಡು ಡೋಸ್ ಲಸಿಕೆ ಪಡೆಯುವುದರ ಜೊತೆಗೆ ಮಕ್ಕಳನ್ನು ಜನರ ಗುಂಪಿನಿಂದ ದೂರ ಇಡುವುದನ್ನು ಮಾಡಬೇಕಾಗಿದೆ. ರಾಜ್ಯದಲ್ಲಿ ದಿನಕ್ಕೆ 1500 ಕ್ಕೂ ಹೆಚ್ಚು ಪ್ರಕರಣಗಳು ಸದ್ಯಕ್ಕೆ ವರದಿಯಾಗುತ್ತಿದೆ.
ಈವರೆಗೆ 15,919 ಮಂದಿ ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಸಾವು ಕಂಡಿದ್ದಾರೆ. ಇದರಲ್ಲಿ ಒಂಬತ್ತು ವರ್ಷದ ಒಳಗಿನ ಮಕ್ಕಳು 19 ಮಂದಿ ಇದ್ದಾರೆ. 10 ರಿಂದ 19 ವರ್ಷದ ಒಳಗಿನ 26 ಮಂದಿ ಮಕ್ಕಳು ಇದ್ದಾರೆ. 20 ರಿಂದ 30 ವರ್ಷದ ಒಳಗಿನ 279 ಮಂದಿ ಸಾವು ಕಂಡಿದ್ದಾಗಿ ಆರೋಗ್ಯ ಇಲಾಖೆಯ ಅಂಕಿ ಅಂಶಗಳು ಹೇಳುತ್ತವೆ.
More than 300 children below the age of 19 years have tested positive for Covid-19 in the past six days in Bengaluru, putting the city on alert. This is one of the highest number of cases among children reported in Karnataka so far.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am