ಬ್ರೇಕಿಂಗ್ ನ್ಯೂಸ್
13-08-21 08:59 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 13: "ಕಲ್ಲ ನಾಗರ ಕಂಡರೆ ಹಾಲನೆರೆ ಎಂಬರು ದಿಟದ ನಾಗರ ಕಂಡರೆ ಕೊಲ್ಲೆಂಬರಯ್ಯ" ಎನ್ನುವ ವಚನ ಒಂದಿದೆ. ಹೌದು.. ನೈಜ ನಾಗರ ಕಂಡರೆ ದೂರಕ್ಕೆ ಓಡುವವರೇ ಜಾಸ್ತಿ. ಹೀಗಾಗಿ ಕಲ್ಲಿನ ನಾಗನಿಗೆ ಮಾತ್ರ ಹಾಲೆರೆಯುವ ಪದ್ಧತಿ ಬಂದಿದೆ. ಹಾಗಂತಲೇ, ಹೆಡೆಯೆತ್ತುವ ಹಾವು ಕಂಡರೆ ಕೊಲ್ಲುವರು ಎಂದು ವಚನಕಾರರು ಹೇಳಿದ್ದರು. ಆದರೆ, ಈಗಿನ ಆಧುನಿಕ ಕಾಲದಲ್ಲಿ ಈ ವಚನ ಅಷ್ಟು ಒಗ್ಗಿಕೊಳ್ಳುವುದಿಲ್ಲವೋ ಏನೋ.. ಯಾಕಂದ್ರೆ ಇಲ್ಲೊಬ್ಬರು ನೈಜ ನಾಗನಿಗೇ ಹಾಲು, ಸೀಯಾಳ ಅಭಿಷೇಕ ಮಾಡಿ ಗಮನ ಸೆಳೆದಿದ್ದಾರೆ.
ನಾಗರ ಪಂಚಮಿಯ ದಿನ ನಾಗನ ಕಲ್ಲಿನ ಮೂರ್ತಿಗಳಿಗೆ ಹಾಲು ಎರೆಯುವುದು ಹಿಂದಿನಿಂದಲೂ ಬಂದ ಪದ್ಧತಿ. ಕರಾವಳಿಯಲ್ಲಂತೂ ನಾಗಬನ, ನಾಗನ ಕ್ಷೇತ್ರಗಳಿಗೆ ತೆರಳಿ, ಈ ದಿನ ಕಡ್ಡಾಯವಾಗಿ ಪೂಜೆ ಸಲ್ಲಿಸುತ್ತಾರೆ. ಈ ನಡುವೆ ಉಡುಪಿಯಲ್ಲಿ ಒಂದು ವಿಚಿತ್ರ ವಿದ್ಯಮಾನ ಸಂಭವಿಸಿದೆ. ಕೇವಲ ಕಲ್ಲನಾಗರನಿಗೆ ಮಾತ್ರವಲ್ಲದೆ ನಿಜವಾದ ನಾಗನಿಗೂ ಪೂಜೆ ಸಲ್ಲಿಕೆಯಾಗಿದೆ.
ಕಾಪು ತಾಲೂಕಿನ ಮಂಜೂರು ಎಂಬಲ್ಲಿ ವಿಶೇಷ ಪೂಜೆ ನಡೆದಿದೆ. ಇಲ್ಲಿನ ಪುರೋಹಿತ ವೃತ್ತಿ ನಡೆಸುವ ಗೋವರ್ಧನ ಭಟ್ ಗೋವಿನ ರೀತಿಯಲ್ಲೆ ನಾಗನ ಪ್ರೀತಿಯಿಂದ ನೋಡಿಕೊಂಡು ಬಂದವರು. ಗಾಯಗೊಂಡ ಹಾವುಗಳನ್ನು ಆರೈಕೆ ಮಾಡುವ ವಿಶೇಷ ಹವ್ಯಾಸ ಹೊಂದಿದ್ದಾರೆ. ಈ ಪರಿಸರದಲ್ಲಿ ಎಲ್ಲೇ ಗಾಯಾಳು ನಾಗರ ಹಾವು ಕಂಡುಬಂದರೆ, ಗೋವರ್ಧನ ಭಟ್ಟರಿಗೆ ತಿಳಿಸುತ್ತಾರೆ. ಹಾಗಾಗಿ ಇವರ ಮನೆಯಲ್ಲಿ ಯಾವತ್ತೂ ಗುಣಮುಖವಾದ ಹಾವುಗಳು ಇದ್ದೇ ಇರುತ್ತವೆ.
ಈ ಬಾರಿ ನಾಗರಪಂಚಮಿಯ ದಿನ, ತಾವು ಮನೆಯಲ್ಲೇ ಆರೈಕೆ ಮಾಡಿದ ನಾಗರ ಹಾವುಗಳಿಗೆ ಆರತಿ ಬೆಳಗಿ, ಸೀಯಾಳ ಅಭಿಷೇಕ ಮಾಡಿ ಪೂಜೆ ಸಲ್ಲಿಸಿದ್ದಾರೆ. ಹೀಗೆ ನೈಜ ನಾಗರನಿಗೆ ಪೂಜೆ ಮಾಡುವ ವಿಡಿಯೋ ವೈರಲ್ ಆಗಿದ್ದು ಜನರು ಅಚ್ಚರಿಗೆ ಒಳಗಾಗಿದ್ದಾರೆ. ದಿಟದ ನಾಗರ ಕಂಡರೆ ಕೊಲ್ಲೆಂಬರಯ್ಯ ಎಂಬ ವಚನವನ್ನು ಇನ್ನು ಬದಲಿಸಬೇಕು. ಹಾವು ಕಂಡರೆ ಓಡಬೇಕಿಲ್ಲ. ಅವುಗಳಿಗೂ ನೋವು ನಲಿವು ಇದೆ ಎಂಬುದನ್ನು ಕಂಡುಕೊಳ್ಳಬೇಕಿದೆ.
Real Nagara Snake worshipped at Home by Priests in Udupi for Nagara Panchami 2021.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
10-09-25 11:02 am
Mangalore Correspondent
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm