ಬ್ರೇಕಿಂಗ್ ನ್ಯೂಸ್
13-08-21 08:59 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 13: "ಕಲ್ಲ ನಾಗರ ಕಂಡರೆ ಹಾಲನೆರೆ ಎಂಬರು ದಿಟದ ನಾಗರ ಕಂಡರೆ ಕೊಲ್ಲೆಂಬರಯ್ಯ" ಎನ್ನುವ ವಚನ ಒಂದಿದೆ. ಹೌದು.. ನೈಜ ನಾಗರ ಕಂಡರೆ ದೂರಕ್ಕೆ ಓಡುವವರೇ ಜಾಸ್ತಿ. ಹೀಗಾಗಿ ಕಲ್ಲಿನ ನಾಗನಿಗೆ ಮಾತ್ರ ಹಾಲೆರೆಯುವ ಪದ್ಧತಿ ಬಂದಿದೆ. ಹಾಗಂತಲೇ, ಹೆಡೆಯೆತ್ತುವ ಹಾವು ಕಂಡರೆ ಕೊಲ್ಲುವರು ಎಂದು ವಚನಕಾರರು ಹೇಳಿದ್ದರು. ಆದರೆ, ಈಗಿನ ಆಧುನಿಕ ಕಾಲದಲ್ಲಿ ಈ ವಚನ ಅಷ್ಟು ಒಗ್ಗಿಕೊಳ್ಳುವುದಿಲ್ಲವೋ ಏನೋ.. ಯಾಕಂದ್ರೆ ಇಲ್ಲೊಬ್ಬರು ನೈಜ ನಾಗನಿಗೇ ಹಾಲು, ಸೀಯಾಳ ಅಭಿಷೇಕ ಮಾಡಿ ಗಮನ ಸೆಳೆದಿದ್ದಾರೆ.
ನಾಗರ ಪಂಚಮಿಯ ದಿನ ನಾಗನ ಕಲ್ಲಿನ ಮೂರ್ತಿಗಳಿಗೆ ಹಾಲು ಎರೆಯುವುದು ಹಿಂದಿನಿಂದಲೂ ಬಂದ ಪದ್ಧತಿ. ಕರಾವಳಿಯಲ್ಲಂತೂ ನಾಗಬನ, ನಾಗನ ಕ್ಷೇತ್ರಗಳಿಗೆ ತೆರಳಿ, ಈ ದಿನ ಕಡ್ಡಾಯವಾಗಿ ಪೂಜೆ ಸಲ್ಲಿಸುತ್ತಾರೆ. ಈ ನಡುವೆ ಉಡುಪಿಯಲ್ಲಿ ಒಂದು ವಿಚಿತ್ರ ವಿದ್ಯಮಾನ ಸಂಭವಿಸಿದೆ. ಕೇವಲ ಕಲ್ಲನಾಗರನಿಗೆ ಮಾತ್ರವಲ್ಲದೆ ನಿಜವಾದ ನಾಗನಿಗೂ ಪೂಜೆ ಸಲ್ಲಿಕೆಯಾಗಿದೆ.



ಕಾಪು ತಾಲೂಕಿನ ಮಂಜೂರು ಎಂಬಲ್ಲಿ ವಿಶೇಷ ಪೂಜೆ ನಡೆದಿದೆ. ಇಲ್ಲಿನ ಪುರೋಹಿತ ವೃತ್ತಿ ನಡೆಸುವ ಗೋವರ್ಧನ ಭಟ್ ಗೋವಿನ ರೀತಿಯಲ್ಲೆ ನಾಗನ ಪ್ರೀತಿಯಿಂದ ನೋಡಿಕೊಂಡು ಬಂದವರು. ಗಾಯಗೊಂಡ ಹಾವುಗಳನ್ನು ಆರೈಕೆ ಮಾಡುವ ವಿಶೇಷ ಹವ್ಯಾಸ ಹೊಂದಿದ್ದಾರೆ. ಈ ಪರಿಸರದಲ್ಲಿ ಎಲ್ಲೇ ಗಾಯಾಳು ನಾಗರ ಹಾವು ಕಂಡುಬಂದರೆ, ಗೋವರ್ಧನ ಭಟ್ಟರಿಗೆ ತಿಳಿಸುತ್ತಾರೆ. ಹಾಗಾಗಿ ಇವರ ಮನೆಯಲ್ಲಿ ಯಾವತ್ತೂ ಗುಣಮುಖವಾದ ಹಾವುಗಳು ಇದ್ದೇ ಇರುತ್ತವೆ.
ಈ ಬಾರಿ ನಾಗರಪಂಚಮಿಯ ದಿನ, ತಾವು ಮನೆಯಲ್ಲೇ ಆರೈಕೆ ಮಾಡಿದ ನಾಗರ ಹಾವುಗಳಿಗೆ ಆರತಿ ಬೆಳಗಿ, ಸೀಯಾಳ ಅಭಿಷೇಕ ಮಾಡಿ ಪೂಜೆ ಸಲ್ಲಿಸಿದ್ದಾರೆ. ಹೀಗೆ ನೈಜ ನಾಗರನಿಗೆ ಪೂಜೆ ಮಾಡುವ ವಿಡಿಯೋ ವೈರಲ್ ಆಗಿದ್ದು ಜನರು ಅಚ್ಚರಿಗೆ ಒಳಗಾಗಿದ್ದಾರೆ. ದಿಟದ ನಾಗರ ಕಂಡರೆ ಕೊಲ್ಲೆಂಬರಯ್ಯ ಎಂಬ ವಚನವನ್ನು ಇನ್ನು ಬದಲಿಸಬೇಕು. ಹಾವು ಕಂಡರೆ ಓಡಬೇಕಿಲ್ಲ. ಅವುಗಳಿಗೂ ನೋವು ನಲಿವು ಇದೆ ಎಂಬುದನ್ನು ಕಂಡುಕೊಳ್ಳಬೇಕಿದೆ.
Real Nagara Snake worshipped at Home by Priests in Udupi for Nagara Panchami 2021.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm