ಬ್ರೇಕಿಂಗ್ ನ್ಯೂಸ್
13-08-21 08:59 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 13: "ಕಲ್ಲ ನಾಗರ ಕಂಡರೆ ಹಾಲನೆರೆ ಎಂಬರು ದಿಟದ ನಾಗರ ಕಂಡರೆ ಕೊಲ್ಲೆಂಬರಯ್ಯ" ಎನ್ನುವ ವಚನ ಒಂದಿದೆ. ಹೌದು.. ನೈಜ ನಾಗರ ಕಂಡರೆ ದೂರಕ್ಕೆ ಓಡುವವರೇ ಜಾಸ್ತಿ. ಹೀಗಾಗಿ ಕಲ್ಲಿನ ನಾಗನಿಗೆ ಮಾತ್ರ ಹಾಲೆರೆಯುವ ಪದ್ಧತಿ ಬಂದಿದೆ. ಹಾಗಂತಲೇ, ಹೆಡೆಯೆತ್ತುವ ಹಾವು ಕಂಡರೆ ಕೊಲ್ಲುವರು ಎಂದು ವಚನಕಾರರು ಹೇಳಿದ್ದರು. ಆದರೆ, ಈಗಿನ ಆಧುನಿಕ ಕಾಲದಲ್ಲಿ ಈ ವಚನ ಅಷ್ಟು ಒಗ್ಗಿಕೊಳ್ಳುವುದಿಲ್ಲವೋ ಏನೋ.. ಯಾಕಂದ್ರೆ ಇಲ್ಲೊಬ್ಬರು ನೈಜ ನಾಗನಿಗೇ ಹಾಲು, ಸೀಯಾಳ ಅಭಿಷೇಕ ಮಾಡಿ ಗಮನ ಸೆಳೆದಿದ್ದಾರೆ.
ನಾಗರ ಪಂಚಮಿಯ ದಿನ ನಾಗನ ಕಲ್ಲಿನ ಮೂರ್ತಿಗಳಿಗೆ ಹಾಲು ಎರೆಯುವುದು ಹಿಂದಿನಿಂದಲೂ ಬಂದ ಪದ್ಧತಿ. ಕರಾವಳಿಯಲ್ಲಂತೂ ನಾಗಬನ, ನಾಗನ ಕ್ಷೇತ್ರಗಳಿಗೆ ತೆರಳಿ, ಈ ದಿನ ಕಡ್ಡಾಯವಾಗಿ ಪೂಜೆ ಸಲ್ಲಿಸುತ್ತಾರೆ. ಈ ನಡುವೆ ಉಡುಪಿಯಲ್ಲಿ ಒಂದು ವಿಚಿತ್ರ ವಿದ್ಯಮಾನ ಸಂಭವಿಸಿದೆ. ಕೇವಲ ಕಲ್ಲನಾಗರನಿಗೆ ಮಾತ್ರವಲ್ಲದೆ ನಿಜವಾದ ನಾಗನಿಗೂ ಪೂಜೆ ಸಲ್ಲಿಕೆಯಾಗಿದೆ.



ಕಾಪು ತಾಲೂಕಿನ ಮಂಜೂರು ಎಂಬಲ್ಲಿ ವಿಶೇಷ ಪೂಜೆ ನಡೆದಿದೆ. ಇಲ್ಲಿನ ಪುರೋಹಿತ ವೃತ್ತಿ ನಡೆಸುವ ಗೋವರ್ಧನ ಭಟ್ ಗೋವಿನ ರೀತಿಯಲ್ಲೆ ನಾಗನ ಪ್ರೀತಿಯಿಂದ ನೋಡಿಕೊಂಡು ಬಂದವರು. ಗಾಯಗೊಂಡ ಹಾವುಗಳನ್ನು ಆರೈಕೆ ಮಾಡುವ ವಿಶೇಷ ಹವ್ಯಾಸ ಹೊಂದಿದ್ದಾರೆ. ಈ ಪರಿಸರದಲ್ಲಿ ಎಲ್ಲೇ ಗಾಯಾಳು ನಾಗರ ಹಾವು ಕಂಡುಬಂದರೆ, ಗೋವರ್ಧನ ಭಟ್ಟರಿಗೆ ತಿಳಿಸುತ್ತಾರೆ. ಹಾಗಾಗಿ ಇವರ ಮನೆಯಲ್ಲಿ ಯಾವತ್ತೂ ಗುಣಮುಖವಾದ ಹಾವುಗಳು ಇದ್ದೇ ಇರುತ್ತವೆ.
ಈ ಬಾರಿ ನಾಗರಪಂಚಮಿಯ ದಿನ, ತಾವು ಮನೆಯಲ್ಲೇ ಆರೈಕೆ ಮಾಡಿದ ನಾಗರ ಹಾವುಗಳಿಗೆ ಆರತಿ ಬೆಳಗಿ, ಸೀಯಾಳ ಅಭಿಷೇಕ ಮಾಡಿ ಪೂಜೆ ಸಲ್ಲಿಸಿದ್ದಾರೆ. ಹೀಗೆ ನೈಜ ನಾಗರನಿಗೆ ಪೂಜೆ ಮಾಡುವ ವಿಡಿಯೋ ವೈರಲ್ ಆಗಿದ್ದು ಜನರು ಅಚ್ಚರಿಗೆ ಒಳಗಾಗಿದ್ದಾರೆ. ದಿಟದ ನಾಗರ ಕಂಡರೆ ಕೊಲ್ಲೆಂಬರಯ್ಯ ಎಂಬ ವಚನವನ್ನು ಇನ್ನು ಬದಲಿಸಬೇಕು. ಹಾವು ಕಂಡರೆ ಓಡಬೇಕಿಲ್ಲ. ಅವುಗಳಿಗೂ ನೋವು ನಲಿವು ಇದೆ ಎಂಬುದನ್ನು ಕಂಡುಕೊಳ್ಳಬೇಕಿದೆ.
Real Nagara Snake worshipped at Home by Priests in Udupi for Nagara Panchami 2021.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 01:30 pm
HK News Staffer
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm