ಬ್ರೇಕಿಂಗ್ ನ್ಯೂಸ್
13-08-21 08:59 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 13: "ಕಲ್ಲ ನಾಗರ ಕಂಡರೆ ಹಾಲನೆರೆ ಎಂಬರು ದಿಟದ ನಾಗರ ಕಂಡರೆ ಕೊಲ್ಲೆಂಬರಯ್ಯ" ಎನ್ನುವ ವಚನ ಒಂದಿದೆ. ಹೌದು.. ನೈಜ ನಾಗರ ಕಂಡರೆ ದೂರಕ್ಕೆ ಓಡುವವರೇ ಜಾಸ್ತಿ. ಹೀಗಾಗಿ ಕಲ್ಲಿನ ನಾಗನಿಗೆ ಮಾತ್ರ ಹಾಲೆರೆಯುವ ಪದ್ಧತಿ ಬಂದಿದೆ. ಹಾಗಂತಲೇ, ಹೆಡೆಯೆತ್ತುವ ಹಾವು ಕಂಡರೆ ಕೊಲ್ಲುವರು ಎಂದು ವಚನಕಾರರು ಹೇಳಿದ್ದರು. ಆದರೆ, ಈಗಿನ ಆಧುನಿಕ ಕಾಲದಲ್ಲಿ ಈ ವಚನ ಅಷ್ಟು ಒಗ್ಗಿಕೊಳ್ಳುವುದಿಲ್ಲವೋ ಏನೋ.. ಯಾಕಂದ್ರೆ ಇಲ್ಲೊಬ್ಬರು ನೈಜ ನಾಗನಿಗೇ ಹಾಲು, ಸೀಯಾಳ ಅಭಿಷೇಕ ಮಾಡಿ ಗಮನ ಸೆಳೆದಿದ್ದಾರೆ.
ನಾಗರ ಪಂಚಮಿಯ ದಿನ ನಾಗನ ಕಲ್ಲಿನ ಮೂರ್ತಿಗಳಿಗೆ ಹಾಲು ಎರೆಯುವುದು ಹಿಂದಿನಿಂದಲೂ ಬಂದ ಪದ್ಧತಿ. ಕರಾವಳಿಯಲ್ಲಂತೂ ನಾಗಬನ, ನಾಗನ ಕ್ಷೇತ್ರಗಳಿಗೆ ತೆರಳಿ, ಈ ದಿನ ಕಡ್ಡಾಯವಾಗಿ ಪೂಜೆ ಸಲ್ಲಿಸುತ್ತಾರೆ. ಈ ನಡುವೆ ಉಡುಪಿಯಲ್ಲಿ ಒಂದು ವಿಚಿತ್ರ ವಿದ್ಯಮಾನ ಸಂಭವಿಸಿದೆ. ಕೇವಲ ಕಲ್ಲನಾಗರನಿಗೆ ಮಾತ್ರವಲ್ಲದೆ ನಿಜವಾದ ನಾಗನಿಗೂ ಪೂಜೆ ಸಲ್ಲಿಕೆಯಾಗಿದೆ.



ಕಾಪು ತಾಲೂಕಿನ ಮಂಜೂರು ಎಂಬಲ್ಲಿ ವಿಶೇಷ ಪೂಜೆ ನಡೆದಿದೆ. ಇಲ್ಲಿನ ಪುರೋಹಿತ ವೃತ್ತಿ ನಡೆಸುವ ಗೋವರ್ಧನ ಭಟ್ ಗೋವಿನ ರೀತಿಯಲ್ಲೆ ನಾಗನ ಪ್ರೀತಿಯಿಂದ ನೋಡಿಕೊಂಡು ಬಂದವರು. ಗಾಯಗೊಂಡ ಹಾವುಗಳನ್ನು ಆರೈಕೆ ಮಾಡುವ ವಿಶೇಷ ಹವ್ಯಾಸ ಹೊಂದಿದ್ದಾರೆ. ಈ ಪರಿಸರದಲ್ಲಿ ಎಲ್ಲೇ ಗಾಯಾಳು ನಾಗರ ಹಾವು ಕಂಡುಬಂದರೆ, ಗೋವರ್ಧನ ಭಟ್ಟರಿಗೆ ತಿಳಿಸುತ್ತಾರೆ. ಹಾಗಾಗಿ ಇವರ ಮನೆಯಲ್ಲಿ ಯಾವತ್ತೂ ಗುಣಮುಖವಾದ ಹಾವುಗಳು ಇದ್ದೇ ಇರುತ್ತವೆ.
ಈ ಬಾರಿ ನಾಗರಪಂಚಮಿಯ ದಿನ, ತಾವು ಮನೆಯಲ್ಲೇ ಆರೈಕೆ ಮಾಡಿದ ನಾಗರ ಹಾವುಗಳಿಗೆ ಆರತಿ ಬೆಳಗಿ, ಸೀಯಾಳ ಅಭಿಷೇಕ ಮಾಡಿ ಪೂಜೆ ಸಲ್ಲಿಸಿದ್ದಾರೆ. ಹೀಗೆ ನೈಜ ನಾಗರನಿಗೆ ಪೂಜೆ ಮಾಡುವ ವಿಡಿಯೋ ವೈರಲ್ ಆಗಿದ್ದು ಜನರು ಅಚ್ಚರಿಗೆ ಒಳಗಾಗಿದ್ದಾರೆ. ದಿಟದ ನಾಗರ ಕಂಡರೆ ಕೊಲ್ಲೆಂಬರಯ್ಯ ಎಂಬ ವಚನವನ್ನು ಇನ್ನು ಬದಲಿಸಬೇಕು. ಹಾವು ಕಂಡರೆ ಓಡಬೇಕಿಲ್ಲ. ಅವುಗಳಿಗೂ ನೋವು ನಲಿವು ಇದೆ ಎಂಬುದನ್ನು ಕಂಡುಕೊಳ್ಳಬೇಕಿದೆ.
Real Nagara Snake worshipped at Home by Priests in Udupi for Nagara Panchami 2021.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am