ಬ್ರೇಕಿಂಗ್ ನ್ಯೂಸ್
13-08-21 09:45 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 13: ನಗರದ ಕೆಪಿಟಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸೆಮಿಸ್ಟರ್ ಪರೀಕ್ಷೆ ಆರಂಭಗೊಂಡಿದ್ದು, ಕೋವಿಡ್ ಸೋಂಕಿತ ಮತ್ತು ಇತರ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವಿಭಾಗ ಮಾಡದೆ ಅಲ್ಲಿನ ಸಿಬಂದಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಕೆಪಿಟಿ ಕಾಲೇಜಿನಲ್ಲಿ ಶುಕ್ರವಾರ ಸೆಮಿಸ್ಟರ್ ಪರೀಕ್ಷೆ ಆರಂಭಗೊಂಡಿತ್ತು. ಕೋವಿಡ್ ಸೋಂಕಿತರು ಕೂಡ ಪರೀಕ್ಷೆಯಲ್ಲಿ ಪಾಲ್ಗೊಳ್ಳಬಹುದು, ಅವರಿಗೆ ಪ್ರತ್ಯೇಕ ವಿಭಾಗ ಮಾಡುವ ನಿಟ್ಟಿನಲ್ಲಿ ಆಯಾ ಕಾಲೇಜು ಆಡಳಿತಕ್ಕೆ ಜಿಲ್ಲಾಡಳಿತದಿಂದ ನಿರ್ದೇಶನ ನೀಡಲಾಗಿತ್ತು. ಆದರೆ, ಕೆಪಿಟಿ ಕಾಲೇಜಿನಲ್ಲಿ ಈ ವಿಚಾರದಲ್ಲಿ ಸಿಬಂದಿ ನಿರ್ಲಕ್ಷ್ಯ ವಹಿಸಿದ್ದಾರೆ ಎನ್ನುವ ಮಾತು ಕೇಳಿಬಂದಿದೆ.
ಪರೀಕ್ಷೆಯಲ್ಲಿ ಪಾಲ್ಗೊಂಡಿದ್ದ ಒಬ್ಬ ವಿದ್ಯಾರ್ಥಿ ಕೋವಿಡ್ ಸೋಂಕು ಆಗಿರುವ ಬಗ್ಗೆ ಆಯಾ ವಿಭಾಗದ ಪ್ರಮುಖರಿಗೆ ಮಾಹಿತಿ ನೀಡಿದ್ದ. ಆಗಸ್ಟ್ 7ರಂದು ತಾನು ಪಾಸಿಟಿವ್ ಆಗಿರುವ ಬಗ್ಗೆ ಸಂದೇಶವನ್ನು ಕಾಲೇಜು ಪ್ರಮುಖರಿಗೆ ನೀಡಿದ್ದ. ಕಾಲೇಜಿನಲ್ಲಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗುತ್ತದೆ ಎನ್ನುವ ಸೂಚನೆ ನೀಡಿದ್ದರಿಂದ ಪರೀಕ್ಷೆಗೂ ಹಾಜರಾಗಿದ್ದ.
ಆದರೆ, ಪಾಸಿಟಿವ್ ಆಗಿದ್ದ ವಿದ್ಯಾರ್ಥಿಯನ್ನು ಪ್ರತ್ಯೇಕ ಹಾಲ್ ನಲ್ಲಿ ಕುಳಿತುಕೊಳ್ಳಲು ವ್ಯವಸ್ಥೆ ಮಾಡಿರಲಿಲ್ಲ. ಸಿಬಂದಿ ಮತ್ತು ಉಪನ್ಯಾಸಕರಿಗೆ ಈ ಬಗ್ಗೆ ಮಾಹಿತಿ ಇದ್ದರೂ, ಮಾರ್ಗಸೂಚಿಯ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದರೇ ಎನ್ನುವ ಅನುಮಾನ ಎದ್ದಿದೆ. ಕೆಲವು ವಿದ್ಯಾರ್ಥಿಗಳು ಪಾಸಿಟಿವ್ ಆಗಿದ್ದರೂ ಪರೀಕ್ಷೆಗೆ ಹಾಜರಾಗಿದ್ದರು. ಆದರೆ, ಕೆಲವರಿಗೆ ಮಾತ್ರ ಪ್ರತ್ಯೇಕ ಕೊಠಡಿ ಇದ್ದರೆ ಒಂದಷ್ಟು ಮಂದಿಯನ್ನು ಅಸ್ಪೃಶ್ಯರ ರೀತಿ ಇತರ ವಿದ್ಯಾರ್ಥಿಗಳ ನಡುವೆ ಹಾಲ್ ನಲ್ಲೇ ಒಂದು ಮೂಲೆಯಲ್ಲಿ ಕುಳ್ಳಿರಿಸಿದ ಪ್ರಸಂಗ ನಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಕೋವಿಡ್ ಸೋಂಕು ಹರಡದಂತೆ ನೋಡಿಕೊಳ್ಳಲು ಜಿಲ್ಲಾಡಳಿತ, ಸರಕಾರ ಏನೆಲ್ಲ ಕಸರತ್ತು ನಡೆಸುತ್ತಿದ್ದರೂ, ಅದರ ನಡುವೆಯೂ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಪರೀಕ್ಷೆಯನ್ನೂ ನಡೆಸಲಾಗುತ್ತಿದೆ. ಆತಂಕಗಳಿದ್ದರೂ, ಪರೀಕ್ಷೆಗೆ ಕೋವಿಡ್ ಸೋಂಕಿತರಿಗೂ ಅವಕಾಶ ನೀಡಲಾಗಿತ್ತು. ಆದರೆ, ಕೆಲವು ಕಾಲೇಜು ಪ್ರಮುಖರು ಈ ಬಗ್ಗೆ ಸೂಕ್ತ ಮುನ್ನೆಚ್ಚರಿಕೆ ವಹಿಸದೆ ಅಲ್ಲಿನ ಸಿಬಂದಿ ಮತ್ತು ಇತರ ವಿದ್ಯಾರ್ಥಿಗಳಿಗೂ ಸೋಂಕು ಹರಡಲು ಕಾರಣವಾಗುತ್ತಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.
KPT college in Mangalore is alleged of conducting Semister exams with students tested covid posting in the same examination hall. Students slam administration for negligence.
07-08-25 10:18 pm
Bangalore Correspondent
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
07-08-25 11:01 pm
Mangalore Correspondent
ಉಳ್ಳಾಲದಲ್ಲಿ ನಿಯಂತ್ರಣ ತಪ್ಪಿ ಆವರಣ ಗೋಡೆಗೆ ಬಡಿದ ಸ...
07-08-25 10:45 pm
ಧರ್ಮಸ್ಥಳ ; 13ನೇ ಪಾಯಿಂಟ್ ಬಗ್ಗೆ ಕುತೂಹಲ, ಅಸ್ಥಿ ಪ...
07-08-25 10:29 pm
Surathkal-Nanthoor highway: ಇಂದಿನಿಂದ ಆ.13ರ ವರ...
07-08-25 07:55 pm
Dharmasthala, Attack on YouTubers: ಯೂಟ್ಯೂಬರ್...
07-08-25 03:26 pm
07-08-25 08:59 pm
Bangalore Correspondent
Kudla Rampage Attack, Ajay Anchan, Dharmastha...
06-08-25 08:02 pm
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am