ಬ್ರೇಕಿಂಗ್ ನ್ಯೂಸ್
14-08-21 11:56 am Mangaluru Correspondent ಕರಾವಳಿ
ಉಡುಪಿ, ಆ.14 : ಸೌದಿ ಅರೇಬಿಯಾದಲ್ಲಿ ಅಲ್ಲಿನ ರಾಜನ ಬಗ್ಗೆ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ ತಾನು ಮಾಡದ ತಪ್ಪಿಗೆ ಜೈಲು ವಾಸ ಅನುಭವಿಸಿದ್ದ ಕುಂದಾಪುರ ತಾಲೂಕಿನ ಹರೀಶ್ ಬಂಗೇರ ಬಿಡುಗಡೆಯಾಗಿದ್ದು ಆ.18ರಂದು ಬೆಂಗಳೂರು ತಲುಪಲಿದ್ದಾರೆ ಎಂದು ಉಡುಪಿ ಸಂಸದೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಹರೀಶ್ ಬಂಗೇರ ತಾಯ್ನಾಡಿಗೆ ಮರಳಲು ಮಾಡಬೇಕಾಗಿದ್ದ ಅಗತ್ಯ ನಿಯಮಗಳನ್ನು ಪೂರೈಸಿದ್ದು ಆ.17ರಂದು ಸೌದಿ ಅರೇಬಿಯಾದ ದಮ್ಮಾಮ್ ವಿಮಾನ ನಿಲ್ದಾಣದಿಂದ ದೋಹಾ ಹೊರಟು ಆ.18 ರಂದು ಬೆಂಗಳೂರು ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ ಎಂದು ಸೌದಿ ಅರೇಬಿಯಾದ ರಿಯಾದ್ ನಲ್ಲಿರುವ ಭಾರತೀಯ ದೂತವಾಸದಿಂದ ತನಗೆ ಅಧಿಕೃತ ಮಾಹಿತಿ ಬಂದಿದೆ ಎಂದು ಸಚಿವೆ ಶೋಭಾ ಕರಂದ್ಲಾಜೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಫೇಸ್ ಬುಕ್ ನಲ್ಲಿ ಹರೀಶ್ ಬಂಗೇರ ಹೆಸರಲ್ಲಿ ನಕಲಿ ಖಾತೆ ತೆರೆದು ಸೌದಿ ದೊರೆ ಹಾಗೂ ಮಕ್ಕಾದ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಲಾಗಿತ್ತು. ಪ್ರಕರಣ ಸಂಬಂಧಿಸಿ ಹರೀಶ್ ಬಂಗೇರ ಅವರನ್ನು ಸೌದಿ ಪೊಲೀಸರು 2019ರ ಡಿಸೆಂಬರ್ ನಲ್ಲಿ ಬಂಧಿಸಿದ್ದರು. ಈ ನಡುವೆ ಹರೀಶ್ ಬಂಗೇರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಬಗ್ಗೆ ಉಡುಪಿ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಮೂಡುಬಿದ್ರೆ ಮೂಲದ ಇಬ್ಬರನ್ನು ಪೊಲೀಸರು ಬಂಧಿಸಿದ್ದರು. ಇದಾಗುತ್ತಿದ್ದಂತೆ, ಪೊಲೀಸರು ಆರೋಪಿಗಳನ್ನು ಬಂಧಿಸಿರುವ ವರದಿಯನ್ನು ಸೌದಿ ಅರೇಬಿಯಾದ ಪೊಲೀಸರಿಗೆ ನೀಡಲಾಗಿತ್ತು. ಇದರಂತೆ, ಸಂತ್ರಸ್ತ ಹರೀಶ್ ಬಂಗೇರ ಅವರನ್ನು ಕೊನೆಗೂ ಸೌದಿ ಪೊಲೀಸರು ಜೈಲಿನಿಂದ ಬಿಡುಗಡೆ ಮಾಡಿದ್ದಾರೆ.
Harish Bangera, native of Udupi, who was arrested and imprisoned by the Saudi authorities for allegedly making blasphemous comments on the Saudi Crown Prince and Mecca, the holy site of Muslims across the world and released recently, will reach Bengaluru on August 18. This information was given by Shobha Karandlaje, union minister for agriculture and farmers’ welfare.
09-06-25 04:41 pm
HK News Desk
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
09-06-25 11:03 pm
Mangalore Correspondent
Mangalore BY Vijayendra, BJP: ಕಾಂಗ್ರೆಸ್ ಆಡಳಿತ...
09-06-25 09:56 pm
Suhas Shetty Murder, NIA, Mangalore: ಸುಹಾಸ್ ಶ...
08-06-25 10:51 pm
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
09-06-25 09:20 pm
HK News Desk
ತನ್ನನ್ನು ಕಾರ್ಡಿಯೋಲಜಿಸ್ಟ್ ಅಂತ ಹೇಳಿಕೊಂಡು 50ಕ್ಕೂ...
08-06-25 10:29 pm
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm