ಬ್ರೇಕಿಂಗ್ ನ್ಯೂಸ್
14-08-21 01:56 pm Udupi Correspondent ಕರಾವಳಿ
ಉಡುಪಿ, ಆ.14: ಕೋವಿಡ್ ಕಾರಣದಿಂದ ಸಂಚಾರವನ್ನು ಮೊಟಕುಗೊಳಿಸಿದ್ದ ಬೆಂಗಳೂರು ಯಶವಂತಪುರ- ಕಾರವಾರ (ರೈಲು ನಂ. 06211/12) ಸಂಚರಿಸುವ ಬೆಳಗಿನ ರೈಲು, ಆ.16ರಿಂದ ಹೊಸ ವಿಸ್ಟಾಡೋಮ್ ಕೋಚ್ ಸಹಿತ ಪುನರಾರಂಭಗೊಳ್ಳಲಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಕೋವಿಡ್ ಕಾರಣದಿಂದ ಬೆಂಗಳೂರು- ಕಾರವಾರ ಬೆಳಗಿನ ರೈಲು ಸಂಚಾರವನ್ನು ಕಳೆದ ಮೇ 3 ರಿಂದ ಮಂಗಳೂರಿನಿಂದ ಕಾರವಾರದ ತನಕದ ಸಂಚಾರವನ್ನು ರೈಲ್ವೆ ಇಲಾಖೆ ಮೊಟಕುಗೊಳಿಸಿತ್ತು. ರೈಲು ಮಂಗಳೂರು ಮತ್ತು ಬೆಂಗಳೂರು ನಡುವೆ ಓಡಾಟ ನಡೆಸುತ್ತಿತ್ತು. ಇದೀಗ ಈ ಭಾಗದ ಪ್ರಯಾಣಿಕರು ಹಾಗೂ ಸಾರ್ವಜನಿಕರು ವಿಸ್ಟಾಡೋಮ್ನೊಂದಿಗೆ ರೈಲನ್ನು ಕಾರವಾರದಿಂದ ಪುನರಾರಂಭಿಸಲು ಕೇಂದ್ರದ ಮೇಲೆ ಒತ್ತಡ ಹೇರುವಂತೆ ಉಡುಪಿ- ಚಿಕ್ಕಮಗಳೂರು ಸಂಸತ್ ಸದಸ್ಯೆಯಾಗಿರುವ ಶೋಭಾ ಕಂದ್ಲಾಜೆ ಅವರನ್ನು ಒತ್ತಾಯಿಸಿದ್ದರು.







ಈ ಹಿನ್ನೆಲೆಯಲ್ಲಿ ತಕ್ಷಣ ಕಾರ್ಯ ಪ್ರವೃತ್ತರಾದ ಸಚಿವೆ ಶೋಭಾ ಕರಂದ್ಲಾಜೆ, ಕೇಂದ್ರ ರೈಲ್ವೆ ಸಚಿವರನ್ನು ಭೇಟಿಯಾಗಿ ಕಾರವಾರ -ಬೆಂಗಳೂರು ಹಗಲು ರೈಲನ್ನು ಪುರಾರಾರಂಭಿಸುವಂತೆ ಮನವಿ ಮಾಡಿದ್ದರು. ಮನವಿಯನ್ನು ಪುರಸ್ಕರಿಸಿದ ರೈಲ್ವೆ ಸಚಿವರು ಕಾರವಾರ- ಬೆಂಗಳೂರು ಬೆಳಗಿನ ರೈಲನ್ನು ಪುನರಾರಂಭಿಸಲು ರೈಲ್ವೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇದೀಗ ನೈರುತ್ವ ರೈಲ್ವೆ ಬೆಂಗಳೂರು-ಕಾರವಾರ ರೈಲನ್ನು ಆ.16ರಿಂದ ಪುನರಾರಂಭಿಸುತ್ತಿದೆ ಹಾಗು ಒಂದು ಹೊಸ ವಿಸ್ಟಾಡೋಮ್ ಕೋಚ್ ಕೂಡ ಈ ರೈಲಿಗೆ ಸೇರ್ಪಡೆಗೊಳ್ಳಲಿದೆ ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.
The train will resume between Bengaluru-Karava, which was shut down due to Corona anxiety. A train service will be in operation during the day from August 16. On the request of Union Minister of State Shobha Karandlaje, the Bangalore-Karwar train will resume. Minister of State for Agriculture, Shobha Karandlaje has appealed for the installation of the Vistadome coach on this route.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am