ಬ್ರೇಕಿಂಗ್ ನ್ಯೂಸ್
14-08-21 01:56 pm Udupi Correspondent ಕರಾವಳಿ
ಉಡುಪಿ, ಆ.14: ಕೋವಿಡ್ ಕಾರಣದಿಂದ ಸಂಚಾರವನ್ನು ಮೊಟಕುಗೊಳಿಸಿದ್ದ ಬೆಂಗಳೂರು ಯಶವಂತಪುರ- ಕಾರವಾರ (ರೈಲು ನಂ. 06211/12) ಸಂಚರಿಸುವ ಬೆಳಗಿನ ರೈಲು, ಆ.16ರಿಂದ ಹೊಸ ವಿಸ್ಟಾಡೋಮ್ ಕೋಚ್ ಸಹಿತ ಪುನರಾರಂಭಗೊಳ್ಳಲಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಕೋವಿಡ್ ಕಾರಣದಿಂದ ಬೆಂಗಳೂರು- ಕಾರವಾರ ಬೆಳಗಿನ ರೈಲು ಸಂಚಾರವನ್ನು ಕಳೆದ ಮೇ 3 ರಿಂದ ಮಂಗಳೂರಿನಿಂದ ಕಾರವಾರದ ತನಕದ ಸಂಚಾರವನ್ನು ರೈಲ್ವೆ ಇಲಾಖೆ ಮೊಟಕುಗೊಳಿಸಿತ್ತು. ರೈಲು ಮಂಗಳೂರು ಮತ್ತು ಬೆಂಗಳೂರು ನಡುವೆ ಓಡಾಟ ನಡೆಸುತ್ತಿತ್ತು. ಇದೀಗ ಈ ಭಾಗದ ಪ್ರಯಾಣಿಕರು ಹಾಗೂ ಸಾರ್ವಜನಿಕರು ವಿಸ್ಟಾಡೋಮ್ನೊಂದಿಗೆ ರೈಲನ್ನು ಕಾರವಾರದಿಂದ ಪುನರಾರಂಭಿಸಲು ಕೇಂದ್ರದ ಮೇಲೆ ಒತ್ತಡ ಹೇರುವಂತೆ ಉಡುಪಿ- ಚಿಕ್ಕಮಗಳೂರು ಸಂಸತ್ ಸದಸ್ಯೆಯಾಗಿರುವ ಶೋಭಾ ಕಂದ್ಲಾಜೆ ಅವರನ್ನು ಒತ್ತಾಯಿಸಿದ್ದರು.







ಈ ಹಿನ್ನೆಲೆಯಲ್ಲಿ ತಕ್ಷಣ ಕಾರ್ಯ ಪ್ರವೃತ್ತರಾದ ಸಚಿವೆ ಶೋಭಾ ಕರಂದ್ಲಾಜೆ, ಕೇಂದ್ರ ರೈಲ್ವೆ ಸಚಿವರನ್ನು ಭೇಟಿಯಾಗಿ ಕಾರವಾರ -ಬೆಂಗಳೂರು ಹಗಲು ರೈಲನ್ನು ಪುರಾರಾರಂಭಿಸುವಂತೆ ಮನವಿ ಮಾಡಿದ್ದರು. ಮನವಿಯನ್ನು ಪುರಸ್ಕರಿಸಿದ ರೈಲ್ವೆ ಸಚಿವರು ಕಾರವಾರ- ಬೆಂಗಳೂರು ಬೆಳಗಿನ ರೈಲನ್ನು ಪುನರಾರಂಭಿಸಲು ರೈಲ್ವೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇದೀಗ ನೈರುತ್ವ ರೈಲ್ವೆ ಬೆಂಗಳೂರು-ಕಾರವಾರ ರೈಲನ್ನು ಆ.16ರಿಂದ ಪುನರಾರಂಭಿಸುತ್ತಿದೆ ಹಾಗು ಒಂದು ಹೊಸ ವಿಸ್ಟಾಡೋಮ್ ಕೋಚ್ ಕೂಡ ಈ ರೈಲಿಗೆ ಸೇರ್ಪಡೆಗೊಳ್ಳಲಿದೆ ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.
The train will resume between Bengaluru-Karava, which was shut down due to Corona anxiety. A train service will be in operation during the day from August 16. On the request of Union Minister of State Shobha Karandlaje, the Bangalore-Karwar train will resume. Minister of State for Agriculture, Shobha Karandlaje has appealed for the installation of the Vistadome coach on this route.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm