ಬ್ರೇಕಿಂಗ್ ನ್ಯೂಸ್
14-08-21 04:13 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 14: ಉಳ್ಳಾಲದಲ್ಲಿ ಮಾಜಿ ಶಾಸಕ ಇದಿನಬ್ಬ ಕುಟುಂಬಸ್ಥರು ಭಯೋತ್ಪಾದಕರ ಜೊತೆ ನಂಟು ಹೊಂದಿರುವುದು ತನಿಖೆಯಲ್ಲಿ ಸಾಬೀತಾಗಿದೆ. ಇದಿನಬ್ಬರ ಮೊಮ್ಮಗಳು ಮತ್ತು ಆಕೆಯ ಗಂಡ ಸಿರಿಯಾಕ್ಕೆ ಹೋಗಿ ಮೃತಪಟ್ಟಿದ್ದಾಗಿ ತನಿಖೆಯಲ್ಲಿ ತಿಳಿದುಬಂದಿದೆ. ಈಗ ಅದೇ ಕುಟುಂಬದ ಮತ್ತೊಬ್ಬ ವ್ಯಕ್ತಿಯನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಆದರೆ, ಅಲ್ಲಿನ ಶಾಸಕ ಖಾದರ್ ಮಾತ್ರ ಈ ಬಗ್ಗೆ ಬಜರಂಗದಳ ಪ್ರತಿಭಟನೆ ಮಾಡಬಾರದು ಎನ್ನುತ್ತಿದ್ದಾರೆ. ಬಜರಂಗದಳ ಪ್ರತಿಭಟನೆ ಮಾಡಬಾರದು ಎನ್ನಲು ಉಳ್ಳಾಲ ಏನು ಪಾಕಿಸ್ತಾನದಲ್ಲಿ ಇದೆಯೇ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದ್ರೆ ಪ್ರಶ್ನಿಸಿದ್ದಾರೆ.
ನಗರದ ಅಟಲ್ ಸೇವಾ ಕೇಂದ್ರದಲ್ಲಿ ಸುದ್ದಿಗೋಷ್ಟಿ ನಡೆಸಿದ ಸುದರ್ಶನ್, ಎನ್ಐಎ ತನಿಖೆಯ ಬಗ್ಗೆ ಗೊಂದಲದ ಹೇಳಿಕೆ ಬೇಡ ಎಂಬ ಮಾಜಿ ಸಚಿವ ಯು.ಟಿ ಖಾದರ್ ಹೇಳಿಕೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಖಂಡಿಸುತ್ತದೆ ಎಂದು ಹೇಳಿದರು.


ಕಾಂಗ್ರೆಸಿನ ಮಾಜಿ ಶಾಸಕರ ಮನೆಯಲ್ಲಿ ನಡೆದ ಲವ್ ಜಿಹಾದ್ ಹಾಗೂ ಉಗ್ರರ ಜೊತೆಗಿನ ಸಂಬಂಧದ ವಿಚಾರವನ್ನ ಖಂಡಿಸಿ ಬಜರಂಗದಳ ಕಾರ್ಯಕರ್ತರು ಪ್ರತಿಭಟನೆಯನ್ನು ನಡೆಸಿದ್ದರು. ಅದನ್ನು ಜಿಲ್ಲಾ ಬಿಜೆಪಿ ಸಮರ್ಥಿಸುತ್ತದೆ. ಇದಿನಬ್ಬರ ಮನೆಯಲ್ಲಿ ನಡೆದ ಮತಾಂತರ ವಿಚಾರವನ್ನು ಕೇಳಲು ನೀವು ಯಾರು ಎಂದು ನಮಗೆ ಪ್ರಶ್ನೆ ಮಾಡಿದ್ದಾರೆ. ದೇಶದ ಯಾವುದೇ ಭಾಗದಲ್ಲಿ ಲವ್ ಜಿಹಾದ್, ಮತಾಂತರ, ಉಗ್ರ ಕೃತ್ಯ ನಡೆದರೂ ನಾವು ಪ್ರಶ್ನೆ ಮಾಡುತ್ತೇವೆ. ಖಂಡನೆ ಮಾಡುತ್ತೇವೆ. ಅದನ್ನ ಪ್ರಶ್ನೆ ಮಾಡೋಕೆ ನೀವ್ಯಾರು ಅಂತ ಶಾಸಕ ಯು.ಟಿ ಖಾದರ್ ಅವರನ್ನು ಸುದರ್ಶನ್ ಮೂಡಬಿದ್ರೆ ಪ್ರಶ್ನೆ ಮಾಡಿದರು.
ಇದು ಇಂದು ನಿನ್ನೆಯ ಹೋರಾಟವಲ್ಲ. ಕಳೆದ ಏಳು ದಶಕಗಳಿಂದ ಲವ್ ಜಿಹಾದ್, ಗೋಹತ್ಯೆ, ಮತಾಂತರ ಇವೆಲ್ಲದರ ವಿರುದ್ಧ ಹೋರಾಟ ಮಾಡುತ್ತ ಬರಲಾಗಿದೆ. ಯು.ಟಿ ಖಾದರ್ ಅವರು ಬಾಲಿಶವಾದ ಹೇಳಿಕೆಯನ್ನು ನೀಡಿದ್ದಾರೆ. ಇದಿನಬ್ಬರ ಮೊಮ್ಮಗಳು ಮತ್ತು ಅವಳ ಗಂಡ ಐಸಿಸಿಗೆ ಸೇರಿದ್ದು ದಾಖಲೆ ಮೂಲಕ ಸಾಬೀತಾಗಿದೆ. ಇದಿನಬ್ಬರ ಕುಟುಂಬಕ್ಕೆ ಭಯೋತ್ಪಾದಕರ ನಂಟಿದೆ, ಲವ್ ಜಿಹಾದ್ ನಂಟಿದೆ ಎಂಬುದು ಸಾಬೀತಾಗಿದೆ. ಉಳ್ಳಾಲದಲ್ಲಿ ಹೊರಗಿನವರು ಬಂದು ಪ್ರತಿಭಟನೆ ಮಾಡಿದ್ದಾರೆ ಅಂತ ಯುಟಿ ಖಾದರ್ ಹೇಳುವುದಕ್ಕೆ ಉಳ್ಳಾಲ ಏನೂ ಪಾಕಿಸ್ತಾನದಲ್ಲಿ ಇರೋದಲ್ಲ. ಅದು ನಮ್ಮಲ್ಲೇ ಇದೆ ಎಂದು ತಿರುಗೇಟು ನೀಡಿದರು.
Video:
Former MLA Idinabbas house raid by NIA in ullal proves ISIS link of family slams Sudarshan Moodbidri. Also he slammed Khader who shouted at VHP for protesting near Deepthi Marlas house.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am