ಬ್ರೇಕಿಂಗ್ ನ್ಯೂಸ್
14-08-21 04:13 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 14: ಉಳ್ಳಾಲದಲ್ಲಿ ಮಾಜಿ ಶಾಸಕ ಇದಿನಬ್ಬ ಕುಟುಂಬಸ್ಥರು ಭಯೋತ್ಪಾದಕರ ಜೊತೆ ನಂಟು ಹೊಂದಿರುವುದು ತನಿಖೆಯಲ್ಲಿ ಸಾಬೀತಾಗಿದೆ. ಇದಿನಬ್ಬರ ಮೊಮ್ಮಗಳು ಮತ್ತು ಆಕೆಯ ಗಂಡ ಸಿರಿಯಾಕ್ಕೆ ಹೋಗಿ ಮೃತಪಟ್ಟಿದ್ದಾಗಿ ತನಿಖೆಯಲ್ಲಿ ತಿಳಿದುಬಂದಿದೆ. ಈಗ ಅದೇ ಕುಟುಂಬದ ಮತ್ತೊಬ್ಬ ವ್ಯಕ್ತಿಯನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಆದರೆ, ಅಲ್ಲಿನ ಶಾಸಕ ಖಾದರ್ ಮಾತ್ರ ಈ ಬಗ್ಗೆ ಬಜರಂಗದಳ ಪ್ರತಿಭಟನೆ ಮಾಡಬಾರದು ಎನ್ನುತ್ತಿದ್ದಾರೆ. ಬಜರಂಗದಳ ಪ್ರತಿಭಟನೆ ಮಾಡಬಾರದು ಎನ್ನಲು ಉಳ್ಳಾಲ ಏನು ಪಾಕಿಸ್ತಾನದಲ್ಲಿ ಇದೆಯೇ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದ್ರೆ ಪ್ರಶ್ನಿಸಿದ್ದಾರೆ.
ನಗರದ ಅಟಲ್ ಸೇವಾ ಕೇಂದ್ರದಲ್ಲಿ ಸುದ್ದಿಗೋಷ್ಟಿ ನಡೆಸಿದ ಸುದರ್ಶನ್, ಎನ್ಐಎ ತನಿಖೆಯ ಬಗ್ಗೆ ಗೊಂದಲದ ಹೇಳಿಕೆ ಬೇಡ ಎಂಬ ಮಾಜಿ ಸಚಿವ ಯು.ಟಿ ಖಾದರ್ ಹೇಳಿಕೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಖಂಡಿಸುತ್ತದೆ ಎಂದು ಹೇಳಿದರು.
ಕಾಂಗ್ರೆಸಿನ ಮಾಜಿ ಶಾಸಕರ ಮನೆಯಲ್ಲಿ ನಡೆದ ಲವ್ ಜಿಹಾದ್ ಹಾಗೂ ಉಗ್ರರ ಜೊತೆಗಿನ ಸಂಬಂಧದ ವಿಚಾರವನ್ನ ಖಂಡಿಸಿ ಬಜರಂಗದಳ ಕಾರ್ಯಕರ್ತರು ಪ್ರತಿಭಟನೆಯನ್ನು ನಡೆಸಿದ್ದರು. ಅದನ್ನು ಜಿಲ್ಲಾ ಬಿಜೆಪಿ ಸಮರ್ಥಿಸುತ್ತದೆ. ಇದಿನಬ್ಬರ ಮನೆಯಲ್ಲಿ ನಡೆದ ಮತಾಂತರ ವಿಚಾರವನ್ನು ಕೇಳಲು ನೀವು ಯಾರು ಎಂದು ನಮಗೆ ಪ್ರಶ್ನೆ ಮಾಡಿದ್ದಾರೆ. ದೇಶದ ಯಾವುದೇ ಭಾಗದಲ್ಲಿ ಲವ್ ಜಿಹಾದ್, ಮತಾಂತರ, ಉಗ್ರ ಕೃತ್ಯ ನಡೆದರೂ ನಾವು ಪ್ರಶ್ನೆ ಮಾಡುತ್ತೇವೆ. ಖಂಡನೆ ಮಾಡುತ್ತೇವೆ. ಅದನ್ನ ಪ್ರಶ್ನೆ ಮಾಡೋಕೆ ನೀವ್ಯಾರು ಅಂತ ಶಾಸಕ ಯು.ಟಿ ಖಾದರ್ ಅವರನ್ನು ಸುದರ್ಶನ್ ಮೂಡಬಿದ್ರೆ ಪ್ರಶ್ನೆ ಮಾಡಿದರು.
ಇದು ಇಂದು ನಿನ್ನೆಯ ಹೋರಾಟವಲ್ಲ. ಕಳೆದ ಏಳು ದಶಕಗಳಿಂದ ಲವ್ ಜಿಹಾದ್, ಗೋಹತ್ಯೆ, ಮತಾಂತರ ಇವೆಲ್ಲದರ ವಿರುದ್ಧ ಹೋರಾಟ ಮಾಡುತ್ತ ಬರಲಾಗಿದೆ. ಯು.ಟಿ ಖಾದರ್ ಅವರು ಬಾಲಿಶವಾದ ಹೇಳಿಕೆಯನ್ನು ನೀಡಿದ್ದಾರೆ. ಇದಿನಬ್ಬರ ಮೊಮ್ಮಗಳು ಮತ್ತು ಅವಳ ಗಂಡ ಐಸಿಸಿಗೆ ಸೇರಿದ್ದು ದಾಖಲೆ ಮೂಲಕ ಸಾಬೀತಾಗಿದೆ. ಇದಿನಬ್ಬರ ಕುಟುಂಬಕ್ಕೆ ಭಯೋತ್ಪಾದಕರ ನಂಟಿದೆ, ಲವ್ ಜಿಹಾದ್ ನಂಟಿದೆ ಎಂಬುದು ಸಾಬೀತಾಗಿದೆ. ಉಳ್ಳಾಲದಲ್ಲಿ ಹೊರಗಿನವರು ಬಂದು ಪ್ರತಿಭಟನೆ ಮಾಡಿದ್ದಾರೆ ಅಂತ ಯುಟಿ ಖಾದರ್ ಹೇಳುವುದಕ್ಕೆ ಉಳ್ಳಾಲ ಏನೂ ಪಾಕಿಸ್ತಾನದಲ್ಲಿ ಇರೋದಲ್ಲ. ಅದು ನಮ್ಮಲ್ಲೇ ಇದೆ ಎಂದು ತಿರುಗೇಟು ನೀಡಿದರು.
Video:
Former MLA Idinabbas house raid by NIA in ullal proves ISIS link of family slams Sudarshan Moodbidri. Also he slammed Khader who shouted at VHP for protesting near Deepthi Marlas house.
07-08-25 10:18 pm
Bangalore Correspondent
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
07-08-25 11:01 pm
Mangalore Correspondent
ಉಳ್ಳಾಲದಲ್ಲಿ ನಿಯಂತ್ರಣ ತಪ್ಪಿ ಆವರಣ ಗೋಡೆಗೆ ಬಡಿದ ಸ...
07-08-25 10:45 pm
ಧರ್ಮಸ್ಥಳ ; 13ನೇ ಪಾಯಿಂಟ್ ಬಗ್ಗೆ ಕುತೂಹಲ, ಅಸ್ಥಿ ಪ...
07-08-25 10:29 pm
Surathkal-Nanthoor highway: ಇಂದಿನಿಂದ ಆ.13ರ ವರ...
07-08-25 07:55 pm
Dharmasthala, Attack on YouTubers: ಯೂಟ್ಯೂಬರ್...
07-08-25 03:26 pm
07-08-25 08:59 pm
Bangalore Correspondent
Kudla Rampage Attack, Ajay Anchan, Dharmastha...
06-08-25 08:02 pm
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am