ಬ್ರೇಕಿಂಗ್ ನ್ಯೂಸ್
14-08-21 04:13 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 14: ಉಳ್ಳಾಲದಲ್ಲಿ ಮಾಜಿ ಶಾಸಕ ಇದಿನಬ್ಬ ಕುಟುಂಬಸ್ಥರು ಭಯೋತ್ಪಾದಕರ ಜೊತೆ ನಂಟು ಹೊಂದಿರುವುದು ತನಿಖೆಯಲ್ಲಿ ಸಾಬೀತಾಗಿದೆ. ಇದಿನಬ್ಬರ ಮೊಮ್ಮಗಳು ಮತ್ತು ಆಕೆಯ ಗಂಡ ಸಿರಿಯಾಕ್ಕೆ ಹೋಗಿ ಮೃತಪಟ್ಟಿದ್ದಾಗಿ ತನಿಖೆಯಲ್ಲಿ ತಿಳಿದುಬಂದಿದೆ. ಈಗ ಅದೇ ಕುಟುಂಬದ ಮತ್ತೊಬ್ಬ ವ್ಯಕ್ತಿಯನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಆದರೆ, ಅಲ್ಲಿನ ಶಾಸಕ ಖಾದರ್ ಮಾತ್ರ ಈ ಬಗ್ಗೆ ಬಜರಂಗದಳ ಪ್ರತಿಭಟನೆ ಮಾಡಬಾರದು ಎನ್ನುತ್ತಿದ್ದಾರೆ. ಬಜರಂಗದಳ ಪ್ರತಿಭಟನೆ ಮಾಡಬಾರದು ಎನ್ನಲು ಉಳ್ಳಾಲ ಏನು ಪಾಕಿಸ್ತಾನದಲ್ಲಿ ಇದೆಯೇ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದ್ರೆ ಪ್ರಶ್ನಿಸಿದ್ದಾರೆ.
ನಗರದ ಅಟಲ್ ಸೇವಾ ಕೇಂದ್ರದಲ್ಲಿ ಸುದ್ದಿಗೋಷ್ಟಿ ನಡೆಸಿದ ಸುದರ್ಶನ್, ಎನ್ಐಎ ತನಿಖೆಯ ಬಗ್ಗೆ ಗೊಂದಲದ ಹೇಳಿಕೆ ಬೇಡ ಎಂಬ ಮಾಜಿ ಸಚಿವ ಯು.ಟಿ ಖಾದರ್ ಹೇಳಿಕೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಖಂಡಿಸುತ್ತದೆ ಎಂದು ಹೇಳಿದರು.


ಕಾಂಗ್ರೆಸಿನ ಮಾಜಿ ಶಾಸಕರ ಮನೆಯಲ್ಲಿ ನಡೆದ ಲವ್ ಜಿಹಾದ್ ಹಾಗೂ ಉಗ್ರರ ಜೊತೆಗಿನ ಸಂಬಂಧದ ವಿಚಾರವನ್ನ ಖಂಡಿಸಿ ಬಜರಂಗದಳ ಕಾರ್ಯಕರ್ತರು ಪ್ರತಿಭಟನೆಯನ್ನು ನಡೆಸಿದ್ದರು. ಅದನ್ನು ಜಿಲ್ಲಾ ಬಿಜೆಪಿ ಸಮರ್ಥಿಸುತ್ತದೆ. ಇದಿನಬ್ಬರ ಮನೆಯಲ್ಲಿ ನಡೆದ ಮತಾಂತರ ವಿಚಾರವನ್ನು ಕೇಳಲು ನೀವು ಯಾರು ಎಂದು ನಮಗೆ ಪ್ರಶ್ನೆ ಮಾಡಿದ್ದಾರೆ. ದೇಶದ ಯಾವುದೇ ಭಾಗದಲ್ಲಿ ಲವ್ ಜಿಹಾದ್, ಮತಾಂತರ, ಉಗ್ರ ಕೃತ್ಯ ನಡೆದರೂ ನಾವು ಪ್ರಶ್ನೆ ಮಾಡುತ್ತೇವೆ. ಖಂಡನೆ ಮಾಡುತ್ತೇವೆ. ಅದನ್ನ ಪ್ರಶ್ನೆ ಮಾಡೋಕೆ ನೀವ್ಯಾರು ಅಂತ ಶಾಸಕ ಯು.ಟಿ ಖಾದರ್ ಅವರನ್ನು ಸುದರ್ಶನ್ ಮೂಡಬಿದ್ರೆ ಪ್ರಶ್ನೆ ಮಾಡಿದರು.
ಇದು ಇಂದು ನಿನ್ನೆಯ ಹೋರಾಟವಲ್ಲ. ಕಳೆದ ಏಳು ದಶಕಗಳಿಂದ ಲವ್ ಜಿಹಾದ್, ಗೋಹತ್ಯೆ, ಮತಾಂತರ ಇವೆಲ್ಲದರ ವಿರುದ್ಧ ಹೋರಾಟ ಮಾಡುತ್ತ ಬರಲಾಗಿದೆ. ಯು.ಟಿ ಖಾದರ್ ಅವರು ಬಾಲಿಶವಾದ ಹೇಳಿಕೆಯನ್ನು ನೀಡಿದ್ದಾರೆ. ಇದಿನಬ್ಬರ ಮೊಮ್ಮಗಳು ಮತ್ತು ಅವಳ ಗಂಡ ಐಸಿಸಿಗೆ ಸೇರಿದ್ದು ದಾಖಲೆ ಮೂಲಕ ಸಾಬೀತಾಗಿದೆ. ಇದಿನಬ್ಬರ ಕುಟುಂಬಕ್ಕೆ ಭಯೋತ್ಪಾದಕರ ನಂಟಿದೆ, ಲವ್ ಜಿಹಾದ್ ನಂಟಿದೆ ಎಂಬುದು ಸಾಬೀತಾಗಿದೆ. ಉಳ್ಳಾಲದಲ್ಲಿ ಹೊರಗಿನವರು ಬಂದು ಪ್ರತಿಭಟನೆ ಮಾಡಿದ್ದಾರೆ ಅಂತ ಯುಟಿ ಖಾದರ್ ಹೇಳುವುದಕ್ಕೆ ಉಳ್ಳಾಲ ಏನೂ ಪಾಕಿಸ್ತಾನದಲ್ಲಿ ಇರೋದಲ್ಲ. ಅದು ನಮ್ಮಲ್ಲೇ ಇದೆ ಎಂದು ತಿರುಗೇಟು ನೀಡಿದರು.
Video:
Former MLA Idinabbas house raid by NIA in ullal proves ISIS link of family slams Sudarshan Moodbidri. Also he slammed Khader who shouted at VHP for protesting near Deepthi Marlas house.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm