ಬ್ರೇಕಿಂಗ್ ನ್ಯೂಸ್
15-08-21 09:47 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 15: ವೀರ ಸಾರ್ವಕರ್ ಫೋಟೋ ತೆಗೆಯಲು ಹೇಳುವ ನೆಪದಲ್ಲಿ ರಥದ ಸಂಚಾರಕ್ಕೆ ಅಡ್ಡಿಪಡಿಸಿ ದಾಂಧಲೆ ಮಾಡಿದ್ದಾರೆ. ಇಡೀ ದೇಶ ಸ್ವಾತಂತ್ರ್ಯ ದಿನ ಆಚರಿಸುತ್ತಿದ್ದರೆ ಕೆಲವರು ದಾಂಧಲೆ ನಡೆಸಿದ್ದಾರೆ. ಈ ವಿಚಾರವನ್ನು ಗೃಹ ಮಂತ್ರಿಗಳ ಗಮನಕ್ಕೆ ತರಲಾಗಿದೆ. ಸ್ವಾತಂತ್ರೋತ್ಸವ ರಥಕ್ಕೆ ಅಡ್ಡಹಾಕುವ ತಾಲಿಬಾನಿ ಸಂಸ್ಕೃತಿಯನ್ನ ದ.ಕ ಜಿಲ್ಲೆಯಲ್ಲಿ ನಡೆಯಲು ಬಿಡಲ್ಲ. ಸರ್ಕಾರ ಈ ಬಗ್ಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತದೆ. ಆರೋಪಿಗಳನ್ನು ಬಂಧಿಸಿ ಕ್ರಮ ಕೈಗೊಳ್ಳಲು ಗೃಹಮಂತ್ರಿಗಳಿಗೆ ಮನವಿ ಮಾಡಿದ್ದೇನೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಇದೇ ವೇಳೆ, ಪುತ್ತೂರಿನ ಕಬಕದಲ್ಲಿ ಸ್ವಾತಂತ್ರ್ಯ ರಥಕ್ಕೆ ಎಸ್ಡಿಪಿಐನಿಂದ ಅಡ್ಡಿಪಡಿಸಿದ ಸ್ಥಳಕ್ಕೆ ಪುತ್ತೂರು ಶಾಸಕ ಸಂಜೀವ ಮಠಂದೂರು ಭೇಟಿ ಕೊಟ್ಟಿದ್ದಾರೆ. ಕಬಕ ಭಾಗದ ಮತೀಯವಾದಿಗಳು ರಥಕ್ಕೆ ತಡೆ ಒಡ್ಡಿದ್ದಾರೆ. ಮತೀಯವಾದಿ ದೇಶದ್ರೋಹಿಗಳನ್ನ ಬಂಧಿಸಿ ಗಡಿಪಾರು ಮಾಡಬೇಕು. ಭಟ್ಕಳ, ಕಾಸರಗೋಡಿನ ಮತೀಯ ಸಂಘಟನೆಗಳ ಪಿತೂರಿ ಇದಾಗಿದೆ. ಸಮರ್ಪಕ ತನಿಖೆ ನಡೆಸಲು ಪ್ರಕರಣವನ್ನು ಎನ್ಐಎಗೆ ಕೊಡಬೇಕು. ಕಬಕ ಕಾಶ್ಮೀರ ಆಗೋದನ್ನ ಸಹಿಸುವುದಿಲ್ಲ ಎಂದು ಸಂಜೀವ ಮಠಂದೂರು ಹೇಳಿಕೆ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪುತ್ತೂರು ಶಾಸಕ ಸಂಜೀವ ಮಠಂದೂರು ಬಳಿಕ ಪುತ್ತೂರು ಪೊಲೀಸ್ ಠಾಣೆಗೆ ತೆರಳಿ ಆರೋಪಿಗಳ ಬಂಧನಕ್ಕೆ ಆಗ್ರಹ ವ್ಯಕ್ತಪಡಿಸಿದ್ದಾರೆ. ತಕ್ಷಣ ಕೇಸು ದಾಖಲಿಸಿ ಬಂಧಿಸದೇ ಇದ್ರೆ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದಾರೆ. ಸರ್ಕಾರದ ಸೂಚನೆ ಮೇರೆಗೆ ದೇಶಭಕ್ತರ ಫೋಟೋಗಳನ್ನು ಪಂಚಾಯತ್ ಅಳವಡಿಸಿತ್ತು. ಆದರೆ ಕಬಕ ಭಾಗದ ಮತೀಯವಾದಿ ಕಿಡಿಗೇಡಿಗಳು ರಥಕ್ಕೆ ತಡೆ ಒಡ್ಡಿದ್ದಾರೆ. ಈ ಮತೀಯವಾದಿ ದೇಶದ್ರೋಹಿಗಳನ್ನ ಬಂಧಿಸಿ ಗಡಿಪಾರು ಮಾಡಬೇಕು. ಯಾವುದೇ ಸಂಘಟನೆ ಆಗಿದ್ದರೂ ಅವರನ್ನು ಬಂಧಿಸಿ ಸಂಘಟನೆಯನ್ನು ನಿಷೇಧಿಸಬೇಕು ಎಂದು ಹೇಳಿದ್ದಾರೆ.
SDPI activists disrupt Independence Day celebrations in Puttur Kadaba kota writes to Home Minister to take action.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm