ಬ್ರೇಕಿಂಗ್ ನ್ಯೂಸ್
15-08-21 09:47 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 15: ವೀರ ಸಾರ್ವಕರ್ ಫೋಟೋ ತೆಗೆಯಲು ಹೇಳುವ ನೆಪದಲ್ಲಿ ರಥದ ಸಂಚಾರಕ್ಕೆ ಅಡ್ಡಿಪಡಿಸಿ ದಾಂಧಲೆ ಮಾಡಿದ್ದಾರೆ. ಇಡೀ ದೇಶ ಸ್ವಾತಂತ್ರ್ಯ ದಿನ ಆಚರಿಸುತ್ತಿದ್ದರೆ ಕೆಲವರು ದಾಂಧಲೆ ನಡೆಸಿದ್ದಾರೆ. ಈ ವಿಚಾರವನ್ನು ಗೃಹ ಮಂತ್ರಿಗಳ ಗಮನಕ್ಕೆ ತರಲಾಗಿದೆ. ಸ್ವಾತಂತ್ರೋತ್ಸವ ರಥಕ್ಕೆ ಅಡ್ಡಹಾಕುವ ತಾಲಿಬಾನಿ ಸಂಸ್ಕೃತಿಯನ್ನ ದ.ಕ ಜಿಲ್ಲೆಯಲ್ಲಿ ನಡೆಯಲು ಬಿಡಲ್ಲ. ಸರ್ಕಾರ ಈ ಬಗ್ಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತದೆ. ಆರೋಪಿಗಳನ್ನು ಬಂಧಿಸಿ ಕ್ರಮ ಕೈಗೊಳ್ಳಲು ಗೃಹಮಂತ್ರಿಗಳಿಗೆ ಮನವಿ ಮಾಡಿದ್ದೇನೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಇದೇ ವೇಳೆ, ಪುತ್ತೂರಿನ ಕಬಕದಲ್ಲಿ ಸ್ವಾತಂತ್ರ್ಯ ರಥಕ್ಕೆ ಎಸ್ಡಿಪಿಐನಿಂದ ಅಡ್ಡಿಪಡಿಸಿದ ಸ್ಥಳಕ್ಕೆ ಪುತ್ತೂರು ಶಾಸಕ ಸಂಜೀವ ಮಠಂದೂರು ಭೇಟಿ ಕೊಟ್ಟಿದ್ದಾರೆ. ಕಬಕ ಭಾಗದ ಮತೀಯವಾದಿಗಳು ರಥಕ್ಕೆ ತಡೆ ಒಡ್ಡಿದ್ದಾರೆ. ಮತೀಯವಾದಿ ದೇಶದ್ರೋಹಿಗಳನ್ನ ಬಂಧಿಸಿ ಗಡಿಪಾರು ಮಾಡಬೇಕು. ಭಟ್ಕಳ, ಕಾಸರಗೋಡಿನ ಮತೀಯ ಸಂಘಟನೆಗಳ ಪಿತೂರಿ ಇದಾಗಿದೆ. ಸಮರ್ಪಕ ತನಿಖೆ ನಡೆಸಲು ಪ್ರಕರಣವನ್ನು ಎನ್ಐಎಗೆ ಕೊಡಬೇಕು. ಕಬಕ ಕಾಶ್ಮೀರ ಆಗೋದನ್ನ ಸಹಿಸುವುದಿಲ್ಲ ಎಂದು ಸಂಜೀವ ಮಠಂದೂರು ಹೇಳಿಕೆ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪುತ್ತೂರು ಶಾಸಕ ಸಂಜೀವ ಮಠಂದೂರು ಬಳಿಕ ಪುತ್ತೂರು ಪೊಲೀಸ್ ಠಾಣೆಗೆ ತೆರಳಿ ಆರೋಪಿಗಳ ಬಂಧನಕ್ಕೆ ಆಗ್ರಹ ವ್ಯಕ್ತಪಡಿಸಿದ್ದಾರೆ. ತಕ್ಷಣ ಕೇಸು ದಾಖಲಿಸಿ ಬಂಧಿಸದೇ ಇದ್ರೆ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದಾರೆ. ಸರ್ಕಾರದ ಸೂಚನೆ ಮೇರೆಗೆ ದೇಶಭಕ್ತರ ಫೋಟೋಗಳನ್ನು ಪಂಚಾಯತ್ ಅಳವಡಿಸಿತ್ತು. ಆದರೆ ಕಬಕ ಭಾಗದ ಮತೀಯವಾದಿ ಕಿಡಿಗೇಡಿಗಳು ರಥಕ್ಕೆ ತಡೆ ಒಡ್ಡಿದ್ದಾರೆ. ಈ ಮತೀಯವಾದಿ ದೇಶದ್ರೋಹಿಗಳನ್ನ ಬಂಧಿಸಿ ಗಡಿಪಾರು ಮಾಡಬೇಕು. ಯಾವುದೇ ಸಂಘಟನೆ ಆಗಿದ್ದರೂ ಅವರನ್ನು ಬಂಧಿಸಿ ಸಂಘಟನೆಯನ್ನು ನಿಷೇಧಿಸಬೇಕು ಎಂದು ಹೇಳಿದ್ದಾರೆ.
SDPI activists disrupt Independence Day celebrations in Puttur Kadaba kota writes to Home Minister to take action.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am