ಬ್ರೇಕಿಂಗ್ ನ್ಯೂಸ್
15-08-21 11:10 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 15: ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಮತ್ತೊಂದು ತುಳು ಹಾಡು ಹಾಡಿದ್ದಾರೆ. ಕೋಟಿ ಚೆನ್ನಯ ತುಳು ಚಿತ್ರದ ‘’ಕೆಮ್ಮಲೆತಾ ಬ್ರಹ್ಮಾ ಎಂಕ್ಲೆ ಕುಲದೈವೋ ಬ್ರಹ್ಮಾ’’ ಎನ್ನುವ ಹಾಡನ್ನು ಸುಶ್ರಾವ್ಯವಾಗಿ ಹಾಡುವ ಮೂಲಕ ಗಮನ ಸೆಳೆದಿದ್ದಾರೆ.
ಸಾಮಾನ್ಯವಾಗಿ ಈ ಹಾಡನ್ನು ತುಳು ಭಾಷೆಯ ಬಗ್ಗೆ ತಿಳಿಯದವರು ಹಾಡುವುದು ಕಷ್ಟ. ಒರಿಜಿನಲ್ ಪದ್ಯವನ್ನು ಪಿ.ಬಿ.ಶ್ರೀನಿವಾಸ್ ತಮ್ಮ ಮಧುರ ಕಂಠದಲ್ಲಿ ಹಾಡುವ ಮೂಲಕ ಆ ಹಾಡನ್ನು ಅಜರಾಮರವಾಗಿಸಿದ್ದರು. ಅವರು ಕೂಡ ತುಳುವರಲ್ಲ. ಆದರೆ, ತಮ್ಮ ಗಾಯನದ ಮೂಲಕವೇ ಹಾಡಿಗೆ ಸತ್ವ ತಂದುಕೊಟ್ಟಿದ್ದರು. ಉಚ್ಚಾರ, ಅರ್ಥಗಳ ಬಗ್ಗೆ ತಿಳಿದುಕೊಂಡು ಸಾಕಷ್ಟು ಅಭ್ಯಾಸ ನಡೆಸಿ ಹಾಡಿಗೆ ಸ್ವರ ತುಂಬಿದ್ದರು.
ಹಾಗೆಯೇ, ಮಂಗಳೂರು ಕಮಿಷನರ್ ಆಗಿರುವ ಶಶಿಕುಮಾರ್ ಸ್ವತಃ ಹಾಡುಗಾರರೇನಲ್ಲ. ತುಳು ಭಾಷೆಯ ಗಂಧ ಗಾಳಿಯೂ ತಿಳಿದವರಲ್ಲ. ಆದರೆ, ಹಾಡು, ಗಾಯನದ ಬಗ್ಗೆ ಅಪಾರ ಒಲವುಳ್ಳವರು. ಮಂಗಳೂರಿಗೆ ಬರುವುದಕ್ಕಿಂತಲೂ ಹಿಂದೆ ತಾವು ಕರ್ತವ್ಯದಲ್ಲಿದ್ದ ಜಾಗದಲ್ಲೆಲ್ಲ ಹಾಡುಗಳನ್ನು ಹಾಡಿ ರಂಜಿಸಿದ್ದರು. ಮಂಗಳೂರಿಗೆ ಪೊಲೀಸ್ ಕಮಿಷನರ್ ಆಗಿ ಬಂದ ಬಳಿಕವೂ ಶಶಿಕುಮಾರ್ ತಮ್ಮ ಗಾಯನ ಪ್ರತಿಭೆಯನ್ನು ಮುಂದುವರಿಸಿದ್ದಾರೆ. ಅದರ ಜೊತೆಗೆ, ಕರಾವಳಿಯ ನೆಲದ ಭಾಷೆ ತುಳುವನ್ನು ಕಲಿಯಲು, ಇಲಾಖೆಯ ಸಹೋದ್ಯೋಗಿಗಳಿಗೆ ತುಳುವನ್ನು ತಜ್ಞರಿಂದ ಕಲಿಸುವುದಕ್ಕೂ ಮುಂದಾಗಿದ್ದಾರೆ.
ಇದೀಗ ತುಳು ಚಿತ್ರದ ಕಠಿಣ ಹಾಡೊಂದನ್ನು ಹಾಡುವ ಮೂಲಕ ತುಳುವರ ಮನ ಗೆದ್ದಿದ್ದಾರೆ. ಎರಡು ತಿಂಗಳ ಹಿಂದೆ ಮೋಕೆದ ಸಿಂಗಾರಿ ಎನ್ನುವ ತುಳು ಹಾಡನ್ನು ಹಾಡಿದ್ದ ಕಮಿಷನರ್, ಆಬಳಿಕ ಯಾರೋ ಸಲಹೆ ಕೊಟ್ಟರೆಂದು ಕೋಟಿ ಚೆನ್ನಯ ಚಿತ್ರದ ಹಾಡನ್ನು ಹಾಡಲು ಕಲಿಯತೊಡಗಿದ್ದರು. ಕೊನೆಗೂ ಅದರಲ್ಲಿ ಯಶಸ್ಸು ಕಂಡಿದ್ದಾರೆ.
Independence Day Special 2021 Mangalore Police Commissioner Shashi Kumar Sings Koti Chennaya tulu song.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am