ಬ್ರೇಕಿಂಗ್ ನ್ಯೂಸ್
15-08-21 11:10 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 15: ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಮತ್ತೊಂದು ತುಳು ಹಾಡು ಹಾಡಿದ್ದಾರೆ. ಕೋಟಿ ಚೆನ್ನಯ ತುಳು ಚಿತ್ರದ ‘’ಕೆಮ್ಮಲೆತಾ ಬ್ರಹ್ಮಾ ಎಂಕ್ಲೆ ಕುಲದೈವೋ ಬ್ರಹ್ಮಾ’’ ಎನ್ನುವ ಹಾಡನ್ನು ಸುಶ್ರಾವ್ಯವಾಗಿ ಹಾಡುವ ಮೂಲಕ ಗಮನ ಸೆಳೆದಿದ್ದಾರೆ.
ಸಾಮಾನ್ಯವಾಗಿ ಈ ಹಾಡನ್ನು ತುಳು ಭಾಷೆಯ ಬಗ್ಗೆ ತಿಳಿಯದವರು ಹಾಡುವುದು ಕಷ್ಟ. ಒರಿಜಿನಲ್ ಪದ್ಯವನ್ನು ಪಿ.ಬಿ.ಶ್ರೀನಿವಾಸ್ ತಮ್ಮ ಮಧುರ ಕಂಠದಲ್ಲಿ ಹಾಡುವ ಮೂಲಕ ಆ ಹಾಡನ್ನು ಅಜರಾಮರವಾಗಿಸಿದ್ದರು. ಅವರು ಕೂಡ ತುಳುವರಲ್ಲ. ಆದರೆ, ತಮ್ಮ ಗಾಯನದ ಮೂಲಕವೇ ಹಾಡಿಗೆ ಸತ್ವ ತಂದುಕೊಟ್ಟಿದ್ದರು. ಉಚ್ಚಾರ, ಅರ್ಥಗಳ ಬಗ್ಗೆ ತಿಳಿದುಕೊಂಡು ಸಾಕಷ್ಟು ಅಭ್ಯಾಸ ನಡೆಸಿ ಹಾಡಿಗೆ ಸ್ವರ ತುಂಬಿದ್ದರು.
ಹಾಗೆಯೇ, ಮಂಗಳೂರು ಕಮಿಷನರ್ ಆಗಿರುವ ಶಶಿಕುಮಾರ್ ಸ್ವತಃ ಹಾಡುಗಾರರೇನಲ್ಲ. ತುಳು ಭಾಷೆಯ ಗಂಧ ಗಾಳಿಯೂ ತಿಳಿದವರಲ್ಲ. ಆದರೆ, ಹಾಡು, ಗಾಯನದ ಬಗ್ಗೆ ಅಪಾರ ಒಲವುಳ್ಳವರು. ಮಂಗಳೂರಿಗೆ ಬರುವುದಕ್ಕಿಂತಲೂ ಹಿಂದೆ ತಾವು ಕರ್ತವ್ಯದಲ್ಲಿದ್ದ ಜಾಗದಲ್ಲೆಲ್ಲ ಹಾಡುಗಳನ್ನು ಹಾಡಿ ರಂಜಿಸಿದ್ದರು. ಮಂಗಳೂರಿಗೆ ಪೊಲೀಸ್ ಕಮಿಷನರ್ ಆಗಿ ಬಂದ ಬಳಿಕವೂ ಶಶಿಕುಮಾರ್ ತಮ್ಮ ಗಾಯನ ಪ್ರತಿಭೆಯನ್ನು ಮುಂದುವರಿಸಿದ್ದಾರೆ. ಅದರ ಜೊತೆಗೆ, ಕರಾವಳಿಯ ನೆಲದ ಭಾಷೆ ತುಳುವನ್ನು ಕಲಿಯಲು, ಇಲಾಖೆಯ ಸಹೋದ್ಯೋಗಿಗಳಿಗೆ ತುಳುವನ್ನು ತಜ್ಞರಿಂದ ಕಲಿಸುವುದಕ್ಕೂ ಮುಂದಾಗಿದ್ದಾರೆ.
ಇದೀಗ ತುಳು ಚಿತ್ರದ ಕಠಿಣ ಹಾಡೊಂದನ್ನು ಹಾಡುವ ಮೂಲಕ ತುಳುವರ ಮನ ಗೆದ್ದಿದ್ದಾರೆ. ಎರಡು ತಿಂಗಳ ಹಿಂದೆ ಮೋಕೆದ ಸಿಂಗಾರಿ ಎನ್ನುವ ತುಳು ಹಾಡನ್ನು ಹಾಡಿದ್ದ ಕಮಿಷನರ್, ಆಬಳಿಕ ಯಾರೋ ಸಲಹೆ ಕೊಟ್ಟರೆಂದು ಕೋಟಿ ಚೆನ್ನಯ ಚಿತ್ರದ ಹಾಡನ್ನು ಹಾಡಲು ಕಲಿಯತೊಡಗಿದ್ದರು. ಕೊನೆಗೂ ಅದರಲ್ಲಿ ಯಶಸ್ಸು ಕಂಡಿದ್ದಾರೆ.
Independence Day Special 2021 Mangalore Police Commissioner Shashi Kumar Sings Koti Chennaya tulu song.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm