ಬ್ರೇಕಿಂಗ್ ನ್ಯೂಸ್
16-08-21 05:22 pm Mangaluru Correspondent ಕರಾವಳಿ
ಉಳ್ಳಾಲ, ಆ.16: ಹರೇಕಳ ಡ್ಯಾಂ ನಿರ್ಮಾಣದ ಯೋಜನೆ ಪ್ರಸ್ತಾಪ ಬಂದಾಗ ಅನೇಕರು ಇದು ಸಾಧ್ಯನಾ ಎಂದು ಪ್ರಶ್ನೆ ಮಾಡಿದ್ದರು. ಇದೀಗ ಅಣೆಕಟ್ಟು ಪೂರ್ಣಗೊಳ್ಳುತ್ತಿದ್ದು ಅಸಾಧ್ಯವಾದುದನ್ನ ಸಾಧ್ಯವನ್ನಾಗಿಸುವುದೇ ನನ್ನ ಕಾರ್ಯ ಎಂದು ಶಾಸಕ ಯು.ಟಿ.ಖಾದರ್ ಹೇಳಿದರು.
ಹರೇಕಳ ಉಲ್ಲಾಸ್ ನಗರ (ಬಾವಲಿ ಗುರಿ)ದಲ್ಲಿ ಸುಮಾರು 1 ಕೋಟಿ 20 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಗ್ರಾಮ ಸೌಧ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು. ಪಂಚಾಯತ್ ಆಡಳಿತ ಅಚ್ಚುಕಟ್ಟಾಗಿದ್ದರೆ ಗ್ರಾಮದ ಅಭಿವೃದ್ಧಿ ಸಾಧ್ಯ. ಹರೇಕಳವನ್ನ ಮಾದರಿ ಗ್ರಾಮ ಪಂಚಾಯತ್ ಆಗಿ ನಿರ್ಮಿಸಬೇಕು. ಕಾಮಗಾರಿ ಒಮ್ಮೆ ಆರಂಭವಾದರೆ ಅದು ಹಂತ ಹಂತವಾಗಿ ಅಭಿವೃದ್ದಿ ಕಾಣುತ್ತದೆ. ಸ್ವಂತ ಮನೆ ಕಟ್ಟಿದಷ್ಟೆ ಆಸಕ್ತಿಯಲ್ಲಿ ಗುತ್ತಿಗೆದಾರರು ಗುಣಮಟ್ಟದ ಕಟ್ಟಡ ನಿರ್ಮಿಸಬೇಕು. ಹರೇಕಳ ಡ್ಯಾಂ ನಿರ್ಮಾಣದ ಪ್ರಸ್ತಾವನೆ ಬಂದಾಗ ಅದು ಆಗುವುದು ಸಾಧ್ಯವೇ ಎಂದು ಕೆಲವರು ಆಡಿಕೊಳ್ಳುತ್ತಿದ್ದರು. ಅಸಾಧ್ಯ ಕಾಮಗಾರಿಗಳನ್ನ ಸಾಧ್ಯವಾಗಿಸೋದೆ ನನ್ನ ಗುರಿ ಎಂದರು. ಹರೇಕಳ ಡ್ಯಾಂ ಕಮ್ ಸೇತುವೆ ಲೋಕಾರ್ಪಣೆ ಆದ ಮೇಲೆ ಹರೇಕಳ ಗ್ರಾಮಸ್ಥರಿಗೆ ಮಂಗಳೂರು ನಗರ ಹತ್ತಿರವಾಗಲಿದೆ. ಪ್ರಯಾಣ ಬಹಳ ಸಲೀಸಾಗಲಿದೆ ಎಂದರು.
ಮಾಜಿ ತಾಪಂ ಸದಸ್ಯ ಮುಸ್ತಾಫ ಹರೇಕಳ ಮಾತನಾಡಿ ಹರೇಕಳ ಗ್ರಾಮ ಪಂಚಾಯಿತಿ ಕಚೇರಿ ಕಟ್ಟಡವು ಹಳೆಯದಾಗಿದ್ದು ಸ್ಥಳಾವಕಾಶದ ಕೊರತೆ ಇರುವುದರಿಂದ ಗ್ರಾಮಸಭೆ ಮತ್ತು ಇತರ ಸಭೆಗಳನ್ನು ನಡೆಸಲು ಅಸಾಧ್ಯವಾಗಿದೆ. ಹಾಗೆಯೇ ಪಾರ್ಕಿಂಗ್ ವ್ಯವಸ್ಥೆ ಇಲ್ಲದಿರುವುದರಿಂದ ಗ್ರಾಮಸ್ಥರ ಅಭಿಪ್ರಾಯದಂತೆ ಹರೇಕಳ ಗ್ರಾಮ ಪಂಚಾಯಿತಿಗೆ ಹರೇಕಳದ ಉಲ್ಲಾಸ ನಗರದಲ್ಲಿ 50 ಸೆಂಟ್ಸ್ ಸ್ಥಳದಲ್ಲಿ 5000 ಚದರಡಿಯ ಎರಡು ಅಂತಸ್ತಿನ ಸುಸಜ್ಜಿತ ಕಟ್ಟಡವನ್ನು ನಿರ್ಮಿಸಲು ಯೋಜನೆ ಹಾಕಲಾಗಿದೆ ಎಂದರು.
ಹರೇಕಳ ಗ್ರಾಮ ಪಂಚಾಯತಿ ಅಧ್ಯಕ್ಷ ಬದ್ರುದ್ದೀನ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಕಾರ್ಯಕ್ರಮದಲ್ಲಿ ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹಾಜಬ್ಬ , ಧಾರ್ಮಿಕ ಗುರು ಸಯ್ಯದ್ ಸರ್ಫುದ್ದೀನ್ ತಂಞಳ್, ರೆ.ಫಾ. ಜಾನ್, ಕುತ್ತಿಮುಗೇರ್ ದೇವಸ್ಥಾನದ ಮೋಹನ್ ಕೆ, ಹರೇಕಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಕಲ್ಯಾಣಿ, ಮಾಜಿ ಅಧ್ಯಕ್ಷರಾದ ಮಹಾಬಲ ಹೆಗ್ಡೆ, ಅನಿತಾ ಡಿಸೋಜ, ಗುಲಾಬಿ, ಶಾಲಿ, ಸಂತೋಷ್ ಶೆಟ್ಟಿ ಅಸೈಗೋಳಿ, ಮೋಹನ್ ದಾಸ್ ಶೆಟ್ಟಿ ಉಳಿದೊಟ್ಟು, ರಾಮ್ ದಾಸ್ ಪೂಂಜ, ರಿಚರ್ಡ್, ಆದಂ ಸಾಹೇಬ, ಲತೀಫ್, ಎಸ್, ಮಹಮ್ಮದ್, ಇದ್ದಿನ್ ಕುಂಞಿ, ರವೀಂದ್ರ ರೈ ಹರೇಕಳ, ನಾಗರಾಜ್, ರಾಧಾಕೃಷ್ಣ ರೈ, ಅಬ್ದುಲ್ ಮಜೀದ್ ,ತ್ಯಾಗಂ ಹರೇಕಳ, ಗ್ರಾಪಂ ಅಭಿವೃದ್ಧಿ ಅಧಿಕಾರಿ ಪ್ರತಿಭಾ ಉಪಸ್ಥಿತರಿದ್ದರು.
I do things that are impossible says UT Khader in Ullal while laying foundation of Harekala Dam.
10-08-25 01:57 pm
Bangalore Correspondent
ಗಿಟಾರಿಗೆ ಹೊದಿಕೆ ಹೊದಿಸಿ ಏಳನೇ ಕ್ಲಾಸ್ ಹುಡುಗನ ಸಾವ...
09-08-25 10:12 pm
ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ; 80 ಸಾವಿ...
09-08-25 08:00 pm
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 02:26 pm
Mangalore Correspondent
Dharmasthala, Janardhan Poojary, SIT Probe: ದ...
10-08-25 01:01 pm
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
Drug’s Mangalore, Police, Arrest: ಡ್ರಗ್ಸ್ ಮುಕ...
09-08-25 09:42 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm