ಬ್ರೇಕಿಂಗ್ ನ್ಯೂಸ್
16-08-21 09:44 pm Mangaluru Correspondent ಕರಾವಳಿ
ಪುತ್ತೂರು, ಆಗಸ್ಟ್ 16: ಕಬಕ ಗ್ರಾಮ ಪಂಚಾಯತಿ ಸ್ವಾತಂತ್ರ್ಯ ರಥದಲ್ಲಿ ಸಾವರ್ಕರ್ ಫೋಟೋ ಹಾಕಿದ್ದನ್ನು ವಿರೋಧಿಸಿ ಎಸ್ಡಿಪಿಐ ಕಾರ್ಯಕರ್ತರು ರಥ ತಡೆದ ಘಟನೆ ಸಂಬಂಧಿಸಿ ಮಾಜಿ ಸಚಿವ ಯುಟಿ ಖಾದರ್ ಪ್ರತಿಕ್ರಿಯೆ ನೀಡಿದ್ದಾರೆ.
ಇದು ಸರಿಯಾದ ಕ್ರಮ ಅಲ್ಲ. ಕಾನೂನು ಕೈಗೆ ತೆಗೆದುಕೊಳ್ಳುವ ಕ್ರಮ ಸರಿಯಲ್ಲ. ಕೆಲವರು ದೊಡ್ಡತನ ಪ್ರದರ್ಶನ ಮಾಡಲು ಹೋಗಿ ದಡ್ಡತನದ ಕೆಲಸ ಮಾಡುತ್ತಾರೆ. ಪ್ರಚಾರಕ್ಕಾಗಿ ಇಂಥ ಕೆಲಸ ಮಾಡಿ ಅಪಹಾಸ್ಯಕ್ಕೆ ಈಡಾಗುತ್ತಿದ್ದಾರೆ. ಯಾವುದೇ ವಿರೋಧ ಇದ್ದರೂ ಕಾನೂನು ರೀತಿಯಲ್ಲಿ ತೋರಿಸಬಹುದಿತ್ತು. ಇಂಥ ಕೆಲಸ ಯಾವ ಸಮುದಾಯಕ್ಕೂ, ನಮ್ಮ ಸಮಾಜಕ್ಕೂ ಸರಿ ಎನಿಸುವುದಿಲ್ಲ. ಪ್ರತಿಭಟನೆ ಹೆಸರಲ್ಲಿ ಸ್ವಾತಂತ್ರ್ಯ ರಥವನ್ನು ತಡೆದಿದ್ದು ಸರಿಯಲ್ಲ ಎಂದು ಖಾದರ್ ಹೇಳಿದ್ದಾರೆ.
ಸಾವರ್ಕರ್ ಬಗ್ಗೆ ಅವರು ಸ್ವಾತಂತ್ರ್ಯ ಹೋರಾಟಗಾರ ಅಲ್ಲ ಅನ್ನುವ ಬಗ್ಗೆ ಭಿನ್ನ ಅಭಿಪ್ರಾಯಗಳಿವೆ. ಅವರು ಬ್ರಿಟಿಷರಿಗೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದರು. ಗಾಂಧೀಜಿಯನ್ನು ಕೊಂದ ಪ್ರಕರಣದಲ್ಲಿ ಸಾವರ್ಕರ್ ಹೆಸರು ಕೇಳಿಬಂದಿತ್ತು. ಈ ಬಗ್ಗೆ ಭಿನ್ನ ರೀತಿಯ ಅಭಿಪ್ರಾಯಗಳಿದ್ದರೂ ಅದರ ಸೂಕ್ತ ವೇದಿಕೆಯಲ್ಲಿ ಪ್ರಶ್ನೆ ಮಾಡಬಹುದಿತ್ತು. ವಿರೋಧ ಏನಿದ್ರೂ ಕಾನೂನು ಮೂಲಕ ತೆಗೆದುಕೊಳ್ಳಬಹುದಿತ್ತು. ಈ ಘಟನೆಯನ್ನು ನಾನು ಖಂಡಿಸುತ್ತೇನೆ. ಯುವಕರು ಇವತ್ತು ನಕಾರಾತ್ಮಕವಾಗಿ ತೀರ್ಮಾನ ತೆಗೆದುಕೊಳ್ಳಬಾರದು. ಇದರಿಂದ ತೊಂದರೆ ತಂದುಕೊಳ್ಳುವ ಪ್ರಮೇಯಕ್ಕೆ ಈಡಾಗಬಾರದು ಅಂದ್ರು.
Also Read:
ಸ್ವಾತಂತ್ರ್ಯ ರಥಕ್ಕೆ ಎಸ್ ಡಿಪಿಐ ಕಾರ್ಯಕರ್ತರ ತಡೆ ; ಸಾವರ್ಕರ್ ಫೋಟೊ ಬದಲು ಟಿಪ್ಪು ಫೋಟೊ ಹಾಕಲು ಒತ್ತಡ !
ಸ್ವಾತಂತ್ರ್ಯ ರಥಕ್ಕೆ ಎಸ್ಡಿಪಿಐ ತಡೆ ; ಮೂವರು ಆರೋಪಿಗಳ ಬಂಧಿಸಿದ ಪುತ್ತೂರು ಪೊಲೀಸರು
ತಾಲಿಬಾನಿ ಸಂಸ್ಕೃತಿ ನಡೆಯಲು ಬಿಡಲ್ಲ ; ಸಚಿವ ಕೋಟ, ಆರೋಪಿಗಳನ್ನು ಬಂಧಿಸದಿದ್ದರೆ ಪ್ರತಿಭಟನೆ ಎಚ್ಚರಿಕೆ ನೀಡಿದ ಶಾಸಕ
SDPI disrupts the Independence celebration over Savarkar photo in Kadaba, Puttur, UT Khader condemns the incident by SDPI members. Police on Sunday, August 15 arrested three people in connection with the disruption caused during Independence Day celebrations at Kabaka here. The arrested accused have been identified as K Aziz (43), a resident of Vidyapura, Kabaka, Shamir (40), a resident of Mura, Kabaka, and Abdul Rehman (34), a resident of Kodipady village.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am