ಬ್ರೇಕಿಂಗ್ ನ್ಯೂಸ್
17-08-21 10:52 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 17: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ಇಡೀ ರಾಜ್ಯದಲ್ಲೇ ಹೆಚ್ಚಿರುವುದು ಆತಂಕಕ್ಕೆ ಕಾರಣವಾಗಿರುವಾಗಲೇ ಆರೋಗ್ಯ ಇಲಾಖೆಯಿಂದ ಹೊಸತೊಂದು ಸುದ್ದಿ ಹೊರಬಿದ್ದಿದೆ. ಕೇರಳದಿಂದ ನೆಗೆಟಿವ್ ರಿಪೋರ್ಟ್ ತೋರಿಸಿ ಬಂದ ವಿದ್ಯಾರ್ಥಿಗಳೇ ಅತಿ ಹೆಚ್ಚು ಕೊರೊನಾ ಪಾಸಿಟಿವ್ ಆಗುತ್ತಿದ್ದಾರೆ.
ಇಲಾಖೆಯ ಮಾಹಿತಿ ಪ್ರಕಾರ, ಕಳೆದ ಹತ್ತು ದಿನಗಳಲ್ಲಿ ಕೇರಳದಿಂದ 390 ಮಂದಿ ವಿದ್ಯಾರ್ಥಿಗಳು ಮಂಗಳೂರಿಗೆ ಆಗಮಿಸಿದ್ದಾರೆ. ಕೋವಿಡ್ ನೆಗೆಟಿವ್ ವರದಿ ತೋರಿಸಿಕೊಂಡೇ ಕರ್ನಾಟಕ ಪ್ರವೇಶ ಮಾಡಿದ್ದ ಈ ವಿದ್ಯಾರ್ಥಿಗಳನ್ನು ಮಂಗಳೂರಿನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಅಂದರೆ, ತಾವು ಉಳಿದುಕೊಳ್ಳುವ ಆಯಾ ಕೇಂದ್ರಗಳಲ್ಲೇ ಐಸೋಲೇಶನ್ ಇರುವಂತೆ ಸೂಚಿಸಿ, ಹೊರಗೆ ಅಡ್ಡಾಡದಂತೆ ಉಳಿದುಕೊಳ್ಳುವಂತೆ ಸೂಚಿಸಲಾಗಿತ್ತು.
ಅದರಂತೆ, ಏಳು ದಿನಗಳ ಬಳಿಕ ಹೀಗೆ ಉಳಿದುಕೊಂಡ ವಿದ್ಯಾರ್ಥಿಗಳನ್ನು ಆರೋಗ್ಯ ಇಲಾಖೆಯ ಸಿಬಂದಿ ಪರೀಕ್ಷೆ ಮಾಡಿದ್ದು ಸ್ವತಃ ಅಚ್ಚರಿಗೆ ಒಳಗಾಗಿದ್ದಾರೆ. ಪರೀಕ್ಷೆ ವೇಳೆ ಅತಿ ಹೆಚ್ಚು ವಿದ್ಯಾರ್ಥಿಗಳು ಪಾಸಿಟಿವ್ ಆಗಿದ್ದಾರೆ. ಒಟ್ಟು 229 ವಿದ್ಯಾರ್ಥಿಗಳು ಪಾಸಿಟಿವ್ ಆಗಿದ್ದಾರೆಂಬ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಒಂದ್ಕಡೆ ವಿದ್ಯಾರ್ಥಿಗಳು ಹಿಡಿದುಕೊಂಡು ಬಂದ ಕೋವಿಡ್ ನೆಗೆಟಿವ್ ರಿಪೋರ್ಟ್ ಬಗ್ಗೆಯೇ ಸಂಶಯ ವ್ಯಕ್ತವಾಗಿದೆ. ಅಲ್ಲದೆ, ಹೀಗೆ ಬಂದು ಉಳಿದುಕೊಂಡ ಹಾಸ್ಟೆಲ್ ಇನ್ನಿತರ ಪ್ರದೇಶಗಳಲ್ಲಿ ಇತರರಿಗೂ ಕೋವಿಡ್ ಹರಡುವ ಆತಂಕ ಉಂಟಾಗಿದೆ.
ಕೇರಳದ ವಿದ್ಯಾರ್ಥಿಗಳನ್ನು ಕೋವಿಡ್ ನೆಗೆಟಿವ್ ವರದಿ ಇದ್ದ ಕಾರಣಕ್ಕೆ ಒಳಗೆ ಬಿಡಲಾಗಿತ್ತು. ಗಡಿಭಾಗದಲ್ಲಿ ನಿರ್ಬಂಧ ವಿಧಿಸಿ ಕೋವಿಡ್ ಹರಡದಂತೆ ಹರಸಾಹಸ ಪಟ್ಟಿದ್ದು ಒಂದೆಡೆ ಆಗಿದ್ದರೆ, ಇದೇ ವೇಳೆ ನೆಗೆಟಿವ್ ಎಂದು ಹೇಳಿಕೊಂಡು ಬಂದಿದ್ದ ಮಂದಿಯೇ ಮಂಗಳೂರಿನಲ್ಲಿ ಕೋವಿಡ್ ಹರಡಲು ಮತ್ತು ಸೋಂಕಿತರ ಸಂಖ್ಯೆ ಹೆಚ್ಚಲು ಕಾರಣವಾಗುತ್ತಿದ್ದಾರೆ ಎನ್ನೋದು ಆರೋಗ್ಯ ಇಲಾಖೆಯ ಅಧಿಕಾರಿಗಳ ತಲೆನೋವಿಗೆ ಕಾರಣವಾಗಿದೆ.
Mangalore Among 390 students from Kerala 229 tested Covid Positive with Negative report
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm